ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ, ನಾವೂ ಅದೇ ಹಾದಿಯಲ್ಲಿ ಸಾಗಬೇಕು: ಆಂಧ್ರ ಮಾಜಿ ಸಿಎಂ

Date:

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, “ನ್ಯಾಯವನ್ನು ನೀಡುವುದು ಮಾತ್ರವಲ್ಲ, ಸೇವೆ ಸಲ್ಲಿಸಲಾಗಿದೆ ಎಂದು ತೋರಬೇಕು. ಹಾಗೆಯೇ ಪ್ರಜಾಪ್ರಭುತ್ವವು ಮೇಲುಗೈ ಸಾಧಿಸುವುದು ಮಾತ್ರವಲ್ಲದೆ ನಿಸ್ಸಂದೇಹವಾಗಿ ಪ್ರಚಲಿತವಾಗಿದೆ ಎಂದು ತೋರಬೇಕು” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಪಂಚದಾದ್ಯಂತದ ಚುನಾವಣೆ ವೇಳೆ ಪ್ರತಿಯೊಂದು ಮುಂದುವರಿದ ಪ್ರಜಾಪ್ರಭುತ್ವದಲ್ಲಿ (ಮುಂದುವರಿದ ದೇಶ) ಪೇಪರ್ ಬ್ಯಾಲೆಟ್‌ಗಳನ್ನು ಬಳಸುತ್ತಿದೆಯೇ ಹೊರತು ಇವಿಎಂಗಳನ್ನು ಬಳಸಲಾಗುತ್ತಿಲ್ಲ. ನಮ್ಮ ಪ್ರಜಾಪ್ರಭುತ್ವದ ನಿಜವಾದ ಚೈತನ್ಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನಾವೂ ಕೂಡಾ ಆ ದಾರಿಯಲ್ಲೇ ಸಾಗಬೇಕು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ದೋಷಪೂರಿತ ಇವಿಎಂಗಳ ಡೇಟಾ ಬಿಡುಗಡೆ ಮಾಡಿ: ಇಸಿಗೆ ಕಾಂಗ್ರೆಸ್‌ ಸಂಸದ ಆಗ್ರಹ

ವಿಶ್ವದ ಶ್ರೀಮಂತ ವ್ಯಕ್ತಿ, ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಇವಿಎಂ ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿದಾಗಿನಿಂದ ದೇಶದಲ್ಲಿ ಇವಿಎಂ ದೋಷ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗ ಮತ್ತು ಬಿಜೆಪಿ ನಾಯಕರು ಇವಿಎಂ ಪರವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ಆದರೆ ಕಾಂಗ್ರೆಸ್ ಸೇರಿ ಹಲವಾರು ವಿಪಕ್ಷ ನಾಯಕರು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಇವಿಎಂಗಳಲ್ಲಿ ಕಂಡು ಬಂದ ದೋಷಗಳ ಬಗ್ಗೆ ಪರಿಶೀಲನೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಚುನಾವಣೆ ವೇಳೆ ಎಷ್ಟು ಇವಿಎಂಗಳಲ್ಲಿ ದೋಷ ಕಂಡು ಬಂದಿದೆ ಎಂದು ಜನರಿಗೆ ತಿಳಿಸುವಂತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...