ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

Date:

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು. ತನ್ನ ಜೀವನ ಆರಂಭವಾದ ಮೊದಲ ಗಂಟೆಗಳಲ್ಲಿಯೇ ಆ ಮಗುವಿನ ದೇಹದ ಮೇಲೆ ಇರುವೆಗಳು ಹರಿದಾಡುತ್ತಿದ್ದವು – ಇದು ಮಧ್ಯಪ್ರದೇಶದ ಛಿಂದ್ವಾರಾದಲ್ಲಿನ ಮೂರು ದಿನಗಳ ಮಗುವಿನ ಕಥೆ. ಆ ಮಗುವನ್ನು ಹೆತ್ತವರು ಕಲ್ಲಿನ ಕೆಳಗೆ ಎಸೆದು, ಸಾಯಲು ಬಿಟ್ಟುಹೋಗಿದ್ದರು. ಅದೃಷ್ಟವಶಾತ್, ಆ ಶಿಶು ಬದುಕುಳಿದಿದೆ.

ಛಿಂದ್ವಾರಾದ ನಂದನವಾಡಿ ಕಾಡಿನಲ್ಲಿ ಶಿಶುವಿನ ಅಳುವಿಕೆಯನ್ನು ಕೇಳಿದ ಸಮೀಪದ ಗ್ರಾಮಸ್ಥರು ಸ್ಥಳಕ್ಕೆ ಬಂದು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಕಲ್ಲಿನ ಕೆಳಗೆ ಮಗು ಇರುವುದನ್ನು ಗಮನಿಸಿದ್ದಾರೆ. ಆ ಮಗು ಶೀತ, ಇರುವೆ ಕಡಿತ ಹಾಗೂ ಉಸಿರುಗಟ್ಟಿಸುವಿಕೆಯಿಂದ ಬಳಲುತ್ತಿತ್ತು. ಹಲವೆಡೆ ಗಾಯಗಳೂ ಆಗಿದ್ದವು.

ಆ ಮಗುವಿನ ತಂದೆ ಬಬ್ಲು ದಾಂಡೋಲಿಯಾ ಅವರು ಸರ್ಕಾರಿ ಶಿಕ್ಷಕರಾಗಿದ್ದಾರೆ. ಅವರಿಗೆ ಈ ಮಗು ನಾಲ್ಕನೇ ಮಗುವಾಗಿದೆ. ಮಧ್ಯಪ್ರದೇಶದಲ್ಲಿ ‘ದ್ವಿಮಕ್ಕಳ ನೀತಿ’ ಜಾರಿಯಲ್ಲಿದ್ದು, ಇಬ್ಬರು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಅವರಿಗೆ ಸರ್ಕಾರಿ ಕೆಲಸವನ್ನು ನಿರ್ಬಂಧಿಸಲಾಗುತ್ತದೆ. ಕೆಲಸದಿಂದ ವಜಾಗೊಳಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ, ಬಬ್ಲು ದಾಂಡೋಲಿಯಾ ಅವರ ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳಲು ಬಬ್ಲು ಮತ್ತು ಆತನ ಪತ್ನಿ ರಾಜಕುಮಾರಿ ದಾಂಡೋಲಿಯಾ ಅವರು ತಮ್ಮ 4ನೇ ಮಗುವನ್ನು ಕೊಲ್ಲಲು ನಿರ್ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗ ಕಳೆದುಕೊಳ್ಳುವ ಭಯದಿಂಧ ದಂಪತಿಗಳು ಗರ್ಭಧಾರಣೆಯನ್ನು ರಹಸ್ಯವಾಗಿಟ್ಟಿದ್ದರು. ಸೆಪ್ಟೆಂಬರ್ 23ರ ಮುಂಜಾನೆ, ರಾಜಕುಮಾರಿ ಅವರಿಗೆ ಮನೆಯಲ್ಲಿಯೇ ಹೆರಿಗೆಯಾಯಿತು. ಇದಾದ ಕೆಲವೇ ಗಂಟೆಗಳಲ್ಲಿ, ಮಗುವನ್ನು ಕಾಡಿಗೆ ಕೊಂಡೊಯ್ದು, ಕಲ್ಲಿನಡಿಯಲ್ಲಿ ಬಿಟ್ಟುಹೋಗಿದ್ದಾರೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆಗೆ ವಿರೋಧ: OBCಗಳನ್ನು ವಂಚಿಸುವ ತಂತ್ರ

ನಂದನವಾಡಿ ಗ್ರಾಮದಲ್ಲಿ ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದ ಗ್ರಾಮಸ್ಥರಿಗೆ ಮಗು ಅಳುವ ಕೂಗು ಕೇಳಿಸಿದೆ. “ಅದು ಪ್ರಾಣಿ ಎಂದು ನಾವು ಭಾವಿಸಿದ್ದೇವೆ. ಆದರೆ, ಹತ್ತಿರಕ್ಕೆ ಹೋದಾಗ, ಸಣ್ಣ ಕೈಗಳು ಕಲ್ಲಿನ ಕೆಳಗೆ ಕಾಣಿಸಿದವು. ನಾವು ಮಗುವನ್ನು ರಕ್ಷಿಸಿದ್ದೇವೆ. ಎಂತಹ ಪೋಷಕರೇ ಆದರೂ, ಇಂತಹ ಕೃತ್ಯವನ್ನು ಮಾಡಬಾರದು” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಮಗುವನ್ನು ಛಿಂದ್ವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. “ಮಗು ಬದುಕುಳಿದಿರುವುದೇ ಪವಾಡದಂತಿದೆ. ಕೊರೆವ ಚಳಿ, ಇರುವೆ ಕಡಿತವನ್ನು ಸಹಿಸಿ ಮಗು ಬದುಕಿದೆ. ಶಿಶುವಿನ ಪರಿಸ್ಥಿತಿ ಈಗ ಸುಧಾರಿಸಿದೆ” ಎಂದು ವೈದ್ಯರು ತಿಳಿಸಿದ್ದಾರೆ.

ಮಗುವಿನ ಪೋಷಕರ ವಿರುದ್ಧ ಪೊಲೀಸರು ಬಿಎನ್‌ಎಸ್ ಸೆಕ್ಷನ್ 93, 109 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶದ ಪ್ರಕಾರ, ಮಧ್ಯಪ್ರದೇಶವು ಭಾರತದಲ್ಲಿಯೇ ಅತೀ ಹೆಚ್ಚು ನವಜಾತ ಶಿಶುಗಳನ್ನು ತ್ಯಜಿಸುವ ರಾಜ್ಯವಾಗಿದೆ. ಬಡತನ, ಸಾಮಾಜಿಕ ಕಳಂಕ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಭಯದಿಂದ ಇಂತಹ ಘಟನೆಗಳು ಪದೇ-ಪದೇ ನಡೆಯುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...