ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ನಗರದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಪ್ಯಾರಿಸ್ನ ಚಾರ್ಲ್ಸ್ ಡಿ ಗಾಲ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ಯುಕೆ 024 ವಿಮಾನವು ಭಾನುವಾರ ಬೆಳಿಗ್ಗೆ 10.19 ಕ್ಕೆ ಮುಂಬೈಗೆ ಬಂದಿಳಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.08ಕ್ಕೆ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 306 ಜನರಲ್ಲಿ 294 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳಾಗಿದ್ದಾರೆ.
ಇದನ್ನು ಓದಿದ್ದೀರಾ? 8 ಗಂಟೆಗಳ ಕಾಲ ತಡವಾದ ಏರ್ ಇಂಡಿಯಾ ವಿಮಾನ: ಎಸಿ ಇಲ್ಲದೆ ಪ್ರಯಾಣಿಕರು ಮೂರ್ಛೆ
“2024ರ ಜೂನ್ 2ರಂದು ಪ್ಯಾರಿಸ್ನಿಂದ ಮುಂಬೈಗೆ ಕಾರ್ಯಾಚರಣೆ ನಡೆಸುತ್ತಿರುವ ಏರ್ಲೈನ್ನ ಯುಕೆ 024 ವಿಮಾನದಲ್ಲಿ ನಮ್ಮ ಸಿಬ್ಬಂದಿಗೆ ಬಾಂಬ್ ಬೆದರಿಕೆಯ ಪತ್ರ ಸಿಕ್ಕಿದೆ” ಎಂದು ವಿಸ್ತಾರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಏರ್ಲೈನ್ ವಕ್ತಾರರು ಮಾಹಿತಿ ಪಡೆದ ನಂತರ, ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ತಿಳಿಸಿದ್ದಾರೆ. ವಿಸ್ತಾರಾ “ಎಲ್ಲಾ ಕಡ್ಡಾಯ ತಪಾಸಣೆಗಳಿಗೆ ಭದ್ರತಾ ಏಜೆನ್ಸಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದೆ” ಎಂದು ಹೇಳಿದರು.
ಶುಕ್ರವಾರ ಇದೇ ರೀತಿಯ ಘಟನೆ ನಡೆದಿದೆ. 177 ಪ್ರಯಾಣಿಕರಿದ್ದ ದೆಹಲಿ-ಶ್ರೀನಗರ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನ ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿದಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ. ಇದಾದ ನಂತರ ಶ್ರೀನಗರ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಇದು ಸುಳ್ಳು ಬೆದರಿಕೆ ಎಂದು ದೃಢಪಡಿಸಿದರು.





