ಸಂಸತ್‌ನಲ್ಲಿ ‘ಮಾಧ್ಯಮ ಮಸೂದೆ’ ಅಂಗೀಕಾರ; ಆತಂಕಕಾರಿ ಎಂದ ಎನ್‌ಎಜಿ-ಡಿಯುಜೆ

Date:

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್-2023 ಅನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ. ಈ ಮಸೂದೆಯಲ್ಲಿ ಪತ್ರಿಕೋದ್ಯಮದ ಮೇಲೆ ಹಲವಾರು ಷರತ್ತುಗಳನ್ನು ಸರ್ಕಾರ ವಿಧಿಸಿದೆ. ಮಸೂದೆಯನ್ನು ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್‌ಎಜೆ) ಮತ್ತು ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್ (ಡಿಯುಜೆ) ವಿರೋಧಿಸಿವೆ. ಅಲ್ಲದೆ, ಮಸೂದೆಯ ಷರತ್ತುಗಳು ‘ಆತಂಕಕಾರಿ’ಯಾಗಿವೆ ಎಂದು ಅವು ಹೇಳಿವೆ.

ಎರಡೂ ಸಂಘಗಳು ಮಾಧ್ಯಮ ಆಯೋಗಕ್ಕೆ ಜಂಟಿ ಪತ್ರ ಬರೆದಿವೆ. “ಹೊಸ ಮಸೂದೆಯು ಮಾಧ್ಯಮ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತವೆ. ಪತ್ರಕರ್ತರು ಮತ್ತು ಅವರ ಗೌಪ್ಯ ಸುದ್ದಿ ಮೂಲಗಳು ಸೇರಿದಂತೆ ನಾಗರಿಕರ ಮೇಲೆ ವ್ಯಾಪಕ ಕಣ್ಗಾವಲು ಇಡುತ್ತವೆ. ಇದು ಸರ್ಕಾರವು ಮಾಧ್ಯಮಗಳ ಮೇಲೆ ಸೆನ್ಸಾರ್‌ಶಿಪ್‌ ಅಧಿಕಾರ ಸಾಧಿಸಲು ಅವಕಾಶ ಮಾಡಿಕೊಡುತ್ತದೆ. ಇದರಿಂದ ಪತ್ರಿಕಾ ಸ್ವಾತಂತ್ರ್ಯದ ಹರಣವಾಗುವ ಸಾಧ್ಯತೆ ಇದೆ” ಎಂದು ಹೇಳಿವೆ.

“ಈ ವಿವಾದಾತ್ಮಕ ಸಂಸತ್ತಿನ ಬೆಳವಣಿಗೆಗಳು 2021ರಲ್ಲಿ ಐಟಿ ನಿಯಮಗಳಿಗೆ ಮಾಡಿದ ತಿದ್ದುಪಡಿಗಳನ್ನು ಅನುಸರಿಸುತ್ತವೆ. ಆ ತಿದ್ದುಪಡಿಗಳು ಸರ್ಕಾರಿ ಇಲಾಖೆಗಳಿಗೆ ಆಕ್ಷೇಪಾರ್ಹವೆಂದು ಕಂಡುಬಂದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದುಹಾಕಲು ಅಧಿಕಾರ ನೀಡಿದ್ದವು. ಸರ್ಕಾರ ಈಗ ಆ ಅಧಿಕಾರವನ್ನು ಮಾಧ್ಯಮಗಳಿಗೂ ವಿಸ್ತರಿಸಿಕೊಳ್ಳುತ್ತಿದೆ” ಎಂದು ಎನ್‌ಎಜಿ ಮತ್ತು ಡಿಯುಜಿ ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸಂಸತ್ ಅಧಿವೇಶನ ಒಂದೂವರೆ ಗಂಟೆ ಭಾಷಣ ಮಾಡಿದರೂ ಮಣಿಪುರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ

“ಅಲ್ಲದೆ, ಮಾಹಿತಿ ಹಕ್ಕು ಕಾಯ್ದೆಗೆ (ಆರ್‌ಟಿಐ) ಇತ್ತೀಚಿನ ತಿದ್ದುಪಡಿಗಳು ಸರ್ಕಾರಿ ಮಾಹಿತಿ ಪಡೆಯುವ ನಾಗರಿಕರ ಹಕ್ಕುಗಳನ್ನು ಗಮನಾರ್ಹವಾಗಿ ಮೊಟಕುಗೊಳಿಸಿವೆ. ಈ ತಿದ್ದುಪಡಿಗಳು ಮಾಹಿತಿ ಹಕ್ಕು ಕಾಯಿದೆಯ ‘ಅವನತಿ’ಯನ್ನು ತೋರಿಸಿವೆ” ಎಂದು ಅವು ಆತಂಕ ವ್ಯಕ್ತಪಡಿಸಿವೆ.

ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳು ಮತ್ತು ಪತ್ರಕರ್ತರ ಹಕ್ಕುಗಳು ಹಾಗೂ ಸ್ವಾತಂತ್ರ್ಯಗಳ ಸವೆತವನ್ನು ಎರಡೂ ಸಂಘಟನೆಗಳು ಒತ್ತಿ ಹೇಳಿವೆ. ಅಲ್ಲದೆ, ಮಾಧ್ಯಮ ಮಂಡಳಿಯ ರಚನೆಗೆ ಆಗ್ರಹಿಸಿವೆ. “ಪ್ರಸ್ತಾವಿತ ಮಂಡಳಿಯು ನೈತಿಕ ವರದಿಗಾರಿಕೆ, ಕೋಮುವಾದದ ವಿರುದ್ಧ ಹೋರಾಟ, ಸುದ್ದಿ ಸುದ್ದಿಗಳು ಹಾಗೂ ಸಮಕಾಲೀನ ಸಮಸ್ಯೆಗಳನ್ನು ಪರಿಹರಿಸಲು ನೆರವಾಗುತ್ತದೆ. ಆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನಗತ್ಯ ಸೆನ್ಸಾರ್ಶಿಪ್‌ಅನ್ನು ತಡೆಯುತ್ತದೆ” ಎಂದು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...