ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 1ರಿಂದ 19ರವರೆಗೆ ನಡೆಸಲು ಸರ್ಕಾರ ನೀಡಿದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಿರಣ್ ರಿಜಿಜು ಅವರು, “ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಹಾಗೂ ಜನರ ಆಕಾಂಕ್ಷೆಗಳನ್ನು ಈಡೇರಿಸುವ ರಚನಾತ್ಮಕ ಮತ್ತು ಫಲಪ್ರದ ಅಧಿವೇಶನವಾಗುವುದನ್ನು ಎದುರು ನೋಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಈ ಚಳಿಗಾಲದ ಅಧಿವೇಶನವು ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದ್ದು, ಅಗತ್ಯವಿದ್ದರೆ ಸಂಸತ್ತಿನ ವ್ಯವಹಾರಗಳ ಪ್ರಕಾರ ದಿನಾಂಕಗಳಲ್ಲಿ ಬದಲಾವಣೆ ಮಾಡಲಾಗುತ್ತದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಜನ ಗಣ ಮನ’ಕ್ಕೆ ಬಿಜೆಪಿ ತಿರಸ್ಕಾರ; ರವೀಂದ್ರನಾಥ ಟ್ಯಾಗೋರ್ಗೆ ಅಪಚಾರ!
ಇದಕ್ಕೂ ಮುನ್ನ ನಡೆದ ಸಂಸತ್ತಿನ ಮಳೆಗಾಲದ ಅಧಿವೇಶನವನ್ನು ಆಗಸ್ಟ್ 21ರಿಂದ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಆ ಅಧಿವೇಶನದಲ್ಲಿ ಲೋಕಸಭೆಯಲ್ಲಿ 12 ಮಸೂದೆಗಳು ಮತ್ತು ರಾಜ್ಯಸಭೆಯಲ್ಲಿ 14 ಮಸೂದೆಗಳು ಅಂಗೀಕರಿಸಲಾಗಿತ್ತು.
ಮಳೆಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವಾರ್ಷಿಕೋತ್ಸವ ಚರ್ಚೆ, ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಪ್ರಕರಣಗಳು ಸಂಸತ್ತಿನಲ್ಲಿ ಹೆಚ್ಚು ಚರ್ಚೆಯಾಗಿತ್ತು.





