ವಕ್ಫ್ ಮಸೂದೆಗೆ 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ

Date:

ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಭಿನ್ನಾಭಿಪ್ರಾಯ ಮೂಡಿಸಿರುವ, ತೀವ್ರ ವಿವಾದಕ್ಕೆ ಗ್ರಾಸವಾಗಿರುವ ವಕ್ಫ್ ಮಸೂದೆಯ ಕರಡು ಶಾಸನಕ್ಕೆ ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ.

ಸಮಿತಿಯ ವಿಚಾರಣೆ ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಬಿಜೆಪಿ ನಾಯಕಿ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಭಾನುವಾರ ತಡರಾತ್ರಿ ತಿದ್ದುಪಡಿಗಳ ಸಮಗ್ರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇದನ್ನು ಓದಿದ್ದೀರಾ? ‘ಸಾಚಾರ್ ಸಮಿತಿ’ಯ ಶಿಫಾರಸುಗಳನ್ನು ‘ವಕ್ಫ್ ಮಸೂದೆ’ ಒಳಗೊಂಡಿಲ್ಲ- ರೆಹಮಾನ್ ಖಾನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿಯು ಸೋಮವಾರ ನಡೆಯುವ ತನ್ನ ಸಭೆಯಲ್ಲಿ ಷರತ್ತು-ವಾರು ತಿದ್ದುಪಡಿಗಳನ್ನು ಚರ್ಚಿಸಲಿದೆ. ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಿದ್ದಾರೆ. ಆದರೆ ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳು ಇಲ್ಲ.

ಆಗಸ್ಟ್ 8ರಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಪರಿಚಯಿಸಿದರು. ಆದರೆ ಈ ಮಸೂದೆಯು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕೇಂದ್ರ ಸರ್ಕಾರ ಮಾಡುತ್ತಿರುವ ಹುನ್ನಾರ ಎಂದು ವಿಪಕ್ಷಗಳು ಆರೋಪಿಸಿದೆ. ವಕ್ಫ್ ಹೆಸರಿನಲ್ಲಿ ಕರ್ನಾಟಕದಲ್ಲಿ ರೈತರ ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ ಎಂಬ ಆರೋಪಗಳನ್ನು ವಿಪಕ್ಷ ಬಿಜೆಪಿ ಮಾಡಿತ್ತು. ಆದರೆ ವಕ್ಫ್ ಮಸೂದೆ ಮೂಲಕ ಮುಸ್ಲಿಮರ ಹಕ್ಕನ್ನು ಮೋದಿ ಸರ್ಕಾರ ಕಸಿದುಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...