ಲೋಕಸಭೆ, ವಿಧಾನಸಭೆ ಉಮೇದುವಾರಿಕೆಯ ಕನಿಷ್ಠ ವಯಸ್ಸು ಇಳಿಕೆಗೆ ಸಂಸದೀಯ ಸಮಿತಿ ಸಲಹೆ

Date:

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಇಳಿಕೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದು ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ಪಾಲುಗೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.

ಪ್ರಸ್ತುತ ಕಾನೂನಿನ ಪ್ರಕಾರ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಒಬ್ಬ ವ್ಯಕ್ತಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರಾಗಲು ಕನಿಷ್ಠ ವಯಸ್ಸು 30 ವರ್ಷ.

‘ರಾಷ್ಟ್ರೀಯ ಚುನಾವಣೆ’ ಅಥವಾ ಲೋಕಸಭಾ ಚುನಾವಣೆಗೆ, ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಪ್ರಸ್ತುತ 25 ವರ್ಷದಿಂದ 18 ಕ್ಕೆ ಇಳಿಸಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ಪ್ರಸ್ತುತ, ಒಬ್ಬ ವ್ಯಕ್ತಿಯು ಮತದಾರರಾಗಿ ನೋಂದಾಯಿಸಲು ಕನಿಷ್ಠ 18 ವರ್ಷಗಳಾಗಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆನಡಾ, ಇಂಗ್ಲೆಂಡ್, ಆಸ್ಟ್ರೇಲಿಯಾದಂತಹ ವಿವಿಧ ದೇಶಗಳಲ್ಲಿ ರಾಷ್ಟ್ರೀಯ ಚುನಾವಣೆಗಳಲ್ಲಿ ಉಮೇದುವಾರಿಕೆಗೆ ಕನಿಷ್ಠ ವಯಸ್ಸು 18 ವರ್ಷಗಳು ಎಂಬುದನ್ನು ಸಂಸದೀಯ ಸಮಿತಿ ಗಮನಿಸಿದೆ. ಯುವ ಜನತೆ ವಿಶ್ವಾಸಾರ್ಹವಾಗಿ ಮತ್ತು ಪ್ರಬುದ್ಧವಾಗಿ ಪ್ರಜಾಪ್ರಭುತ್ವದ ಚಟುವಟಿಕೆಗಳಲ್ಲಿ ಭಾಗವಹಿಸಲು ಇದು ಸಹಕಾರಿ ಎಂದು ಆ ರಾಷ್ಟ್ರಗಳ ಉದಾಹರಣೆಗಳು ತೋರಿಸುತ್ತವೆ” ಎಂದು ಕಾನೂನು ಮತ್ತು ಸಿಬ್ಬಂದಿ ಕುರಿತ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ.

‘ವಿಧಾನಸಭಾ ಚುನಾವಣೆಯಲ್ಲಿಯೂ ಉಮೇದುವಾರಿಕೆಗೆ ಕನಿಷ್ಠ ವಯಸ್ಸಿನ ಅವಶ್ಯಕತೆಯನ್ನು ಕಡಿಮೆ ಮಾಡಲು’ ಸಮಿತಿ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ: ಅಲೆಮಾರಿಗಳ ‘ಅಸ್ಮಿತೆ’ಗೊಂದು ಆಯೋಗ ಬೇಕೆ?

ಬಿಜೆಪಿಯ ಸುಶೀಲ್ ಮೋದಿ ನೇತೃತ್ವದ ಸಮಿತಿಯು ‘ಜಾಗತಿಕ ಅಭ್ಯಾಸಗಳು, ಯುವಜನರಲ್ಲಿ ಹೆಚ್ಚುತ್ತಿರುವ ರಾಜಕೀಯ ಪ್ರಜ್ಞೆ ಮತ್ತು ಯುವ ಪ್ರಾತಿನಿಧ್ಯದ ಅನುಕೂಲಗಳಂತಹ ಅಪಾರ ಪ್ರಮಾಣದ ಪುರಾವೆಗಳ ಆಧಾರದಿಂದ ಇಂಥದ್ದೊಂದು ಅಭಿಪ್ರಾಯಕ್ಕೆ ಬರಲಾಗಿದೆ’ ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಸಂವಿಧಾನದ ನಿಬಂಧನೆಯನ್ನು ಬದಲಾಯಿಸಲು ಬಲವಾದ ಕಾರಣಗಳು ಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...