ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತೆ, ಅದರಲ್ಲಿ ನನ್ನ ಪಾತ್ರವಿಲ್ಲ: ಓಂ ಬಿರ್ಲಾ

Date:

ನೂತನ ಲೋಕಸಭೆ ಸ್ಪೀಕರ್ ಆಯ್ಕೆ ಮಾಡುವ ನಿರ್ಣಾಯಕ ಚುನಾವಣೆಯು ಜೂನ್ 26ರಂದು ನಡೆಯಲ್ಲಿದ್ದು, “ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತದೆ, ಅದರಲ್ಲಿ ನನ್ನ ಪಾತ್ರವಿಲ್ಲ” ಎಂದು ನಿರ್ಗಮಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಓಂ ಬಿರ್ಲಾ, “ಹೊಸ ಸ್ಪೀಕರ್ ಮತ್ತು ಉಪ ಸ್ಪೀಕರ್ ಬಗ್ಗೆ ರಾಜಕೀಯ ಪಕ್ಷಗಳು ನಿರ್ಧರಿಸುತ್ತವೆ. ಈ ಎಲ್ಲಾ ನಿರ್ಧಾರಗಳನ್ನು ರಾಜಕೀಯ ಪಕ್ಷಗಳು ತೆಗೆದುಕೊಳ್ಳುತ್ತವೆ. ಈ ನಿರ್ಧಾರಗಳನ್ನು ನಾನು ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಂಸತ್ತಿನ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 4ರವರೆಗೆ ನಡೆಯಲಿದೆ. ಬಿಜೆಪಿ ಸರ್ಕಾರ 272 ಸ್ಥಾನಗಳ ಬಹುಮತ ಪಡೆಯಲು ವಿಫಲವಾಗಿ ಈಗ ಮೈತ್ರಿ ಸರ್ಕಾರ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಎನ್‌ಡಿಎ ಸರ್ಕಾರದ ಮೊದಲ ಪರೀಕ್ಷೆಯೇ ಸ್ಪೀಕರ್ ಚುನಾವಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಸ್ಪೀಕರ್ ನಿರ್ಣಾಯಕ ಪಾತ್ರವಾದ ಕಾರಣ ಬಿಜೆಪಿ ನಾಯಕರೇ ಈ ಹುದ್ದೆಯನ್ನು ಉಳಿಸಿಕೊಳ್ಳಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದರೂ, ಬಿಜೆಪಿಯ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿ (ಯು) ಸಹ ಈ ಪ್ರಮುಖ ಪಾತ್ರವನ್ನು ಬಿಟ್ಟುಕೊಡಲು ಸಿದ್ಧವಾಗಿಲ್ಲ.

ಸ್ಪೀಕರ್ ಹುದ್ದೆಗೆ ಬಿಜೆಪಿ ಆಯ್ಕೆಯನ್ನು ಬೆಂಬಲಿಸುವುದಾಗಿ ಜೆಡಿಯು ಹೇಳಿದರೆ, ಎನ್‌ಡಿಎ ಪಾಲುದಾರರಲ್ಲಿ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಟಿಡಿಪಿ ಹೇಳುತ್ತದೆ. ನಿರ್ಗಮಿತ ಸ್ಪೀಕರ್ ಓಂ ಬಿರ್ಲಾ ಮತ್ತು ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥೆ ಡಿ ಪುರಂದೇಶ್ವರಿ ಅವರು ಈ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ.

ಇದನ್ನು ಓದಿದ್ದೀರಾ? ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಕಳೆದ ಐದು ವರ್ಷಗಳಿಂದ ಖಾಲಿಯಾಗಿದ್ದ ಉಪಸಭಾಪತಿ ಹುದ್ದೆಯು ಮತ್ತೊಂದು ವಿವಾದಾತ್ಮಕ ವಿಷಯವಾಗಿದೆ. ಹೊಸ ಲೋಕಸಭೆಯಲ್ಲಿ ಇಂಡಿಯಾ ಒಕ್ಕೂಟ 234 ಸದಸ್ಯರ ಪ್ರಭಾವಶಾಲಿ ಬಲವನ್ನು ಹೊಂದಿದ್ದು, ವಿರೋಧ ಪಕ್ಷದ ನಾಯಕರೂ ಉಪಸಭಾಪತಿ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

17ನೇ ಲೋಕಸಭೆಯು ಉಪ ಸ್ಪೀಕರ್ ಇಲ್ಲದೆ ಕಾರ್ಯನಿರ್ವಹಿಸಿದ್ದರೂ ಕೂಡಾ ಸ್ಪೀಕರ್ ಚುನಾಯಿತರಾದ ಕೂಡಲೇ ಲೋಕಸಭೆಯ ಉಪ ಸ್ಪೀಕರ್ ಆಯ್ಕೆಯು ಸಂವಿಧಾನ ಪ್ರಕಾರ ಕಡ್ಡಾಯವಾಗಿದೆ. 17ನೇ ಲೋಕಸಭೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಿರೋಧ ಪಕ್ಷಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಉಪಸಭಾಪತಿ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...