ವಿಸ್ತಾರ ವಿಮಾನ ಹೈಜಾಕ್ ಯೋಜನೆ | ಫೋನ್‌ನಲ್ಲಿ ಸಂಭಾಷಿಸುತ್ತಿದ್ದ ಪ್ರಯಾಣಿಕ ಬಂಧನ

Date:

  • ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ
  • ರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣ

ವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ.

ಈ ಕುತೂಹಲಕಾರಿ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಸಂಜೆ 6.30ಕ್ಕೆ ನಡೆದಿದೆ.

ನಗರ ವಿಮಾನ ನಿಲ್ದಾಣದಿಂದ ಮುಂಬೈ-ದೆಹಲಿ ವಿಮಾನ ಹೊರಡುವುದಕ್ಕೂ ಮುನ್ನು ವಿಸ್ತಾರ ವಿಮಾನ ಹೈಜಾಕ್ ಮಾಡುವ ಕುರಿತು ಒಳಗಿದ್ದ 23 ವರ್ಷದ ರಿತೇಶ್ ಸಂಜಯ್ ಕುಮಾರ್ ಜುನೇಜಾ ಎಂಬ ವ್ಯಕ್ತಿ ಫೋನಿನಲ್ಲಿ ಇತರರೊಡನೆ ಸಂಭಾಷಿಸುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದರು. ಆಗ ಮುಂಬೈ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ (ಜೂನ್ 23) ವರದಿ ಮಾಡಿವೆ.

ವಿಮಾನ ಹೈಜಾಕ್‌ ಮಾಡುವ ಬಗ್ಗೆ ವ್ಯಕ್ತಿ ಫೋನಿನಲ್ಲಿ ಮಾತನಾಡುವುದನ್ನು ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಇತರರು ಕೇಳಿದ್ದಾರೆ. ಕೂಡಲೇ ವಿಮಾನ ಸಿಬ್ಬಂದಿ ಪ್ರಯಾಣಿಕನನ್ನು ವಿಮಾನದಿಂದ ಕೆಳಗೆ ಇಳಿಸಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು.

ಬಳಿಕ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಲಾಯಿತು. ನಂತರ ಅಧಿಕಾರಿಗಳ ಸೂಚನೆ ಮೇರೆಗೆ ವಿಮಾನ ದೆಹಲಿಯತ್ತ ಪ್ರಯಾಣಿಸಿತು ಎಂದು ವರದಿಯಾಗಿದೆ.

“ವಿಮಾನ ಹೈಜಾಕ್‌ ಬಗ್ಗೆ ಒಬ್ಬ ವ್ಯಕ್ತಿ ಫೋನ್‌ನಲ್ಲಿ ಮಾತನಾಡುತ್ತಿದ್ದ. ‘ಅಹ್ಮದಾಬಾದ್‌ನಲ್ಲಿ ವಿಮಾನ ಹೊರಡಲಿದೆ. ಹೈಜಾಕ್‌ ಮಾಡುವ ಎಲ್ಲ ಯೋಜನೆ ಸಿದ್ಧವಾಗಿದೆ. ಯಾವುದಾದರೂ ತೊಂದರೆ ಎದುರಾದಲ್ಲಿ ನನಗೆ ಕರೆ ಮಾಡಿ’ ಎಂದು ಹೇಳುತ್ತಿದ್ದ ಎಂದು ಸಿಬ್ಬಂದಿ ವಿವರಿಸಿದರು” ಎಂದು ಪೊಲೀಸರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೆಹಲಿ ಸುಗ್ರೀವಾಜ್ಞೆ ಕುರಿತು ಸಂಸತ್ ಅಧಿವೇಶನಕ್ಕೂ ಮುನ್ನವೇ ನಿರ್ಧಾರ: ಖರ್ಗೆ

ರಿತೇಶ್‌ ಜುನೇಹಾ ವ್ಯಕ್ತಿಯನ್ನು ಮೊದಲು ಕೇಂದ್ರ ಕೈಗಾರಿಕಾ ಭದ್ರತಾ ದಳಕ್ಕೆ (ಸಿಐಎಸ್‌ಎಫ್) ಹಸ್ತಾಂತರಿಸಲಾಗಿದ್ದು, ಬಳಿಕ ಸಿಬ್ಬಂದಿ ದೂರಿನ ಮೇರೆಗೆ ವ್ಯಕ್ತಿಯನ್ನು ಸಹರ್‌ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

ವಿಸ್ತಾರ ವಿಮಾನ ಹೈಜಾಕ್ ಘಟನೆಗೆ ಸಂಬಂಧಿಸಿ ಮುಂಬೈನ ಸಹರ್‌ ಪೊಲೀಸರು ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ಮತ್ತು 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಈ ವಿಷಯದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...