ಒಂದೇ ತಾಸಿನಲ್ಲಿ ನಾಲ್ಕು ಏರ್‌ ಇಂಡಿಯಾ ಯಾನ ರದ್ದು: ಕಾರಣ ತಿಳಿಸದ ಸಂಸ್ಥೆ ವಿರುದ್ಧ ಆಕ್ರೋಶ

Date:

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಯಲ್ಲೇ ನಾಲ್ಕು ವಿಮಾನಯಾನಗಳನ್ನು ಏರ್ ಇಂಡಿಯಾ ಸಂಸ್ಥೆ ರದ್ದುಗೊಳಿಸಿದ್ದು, ಸಂಸ್ಥೆ ಯಾವುದೇ ಕಾರಣ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಏರ್‌ ಇಂಡಿಯಾ ಸಂಸ್ಥೆ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆಗೆ ಇಳಿದಿದ್ದಾರೆ.

ಇತ್ತೀಚೆಗೆ ಇಂಡಿಗೋ ಸಂಸ್ಥೆಯು ಸಿಬ್ಬಂದಿ ಕೊರತೆ ಕಾರಣ ನೀಡಿ ಹಲವು ವಿಮಾನಗಳನ್ನು ರದ್ದುಗೊಳಿಸಿತ್ತು. ಇದು ಸಾವಿರಾರು ಪ್ರಯಾಣಿಕರ ಮೇಲೆ ಪ್ರಭಾವ ಬೀರಿತ್ತು. ಇದೀಗ ಏರ್ ಇಂಡಿಯಾ ಕೂಡಾ ದೆಹಲಿಯಲ್ಲಿ ಒಂದಾದ ಬಳಿಕ ಒಂದು ವಿಮಾನಯಾನ ರದ್ದುಗೊಳಿಸುತ್ತಿದ್ದು, ಅದಕ್ಕೆ ಸರಿಯಾದ ಕಾರಣವನ್ನೂ ನೀಡುತ್ತಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣದ ಸುತ್ತ ಆವರಿಸಿದ ಮಂಜು: 40 ವಿಮಾನಯಾನ ರದ್ದುಗೊಳಿಸಿದ ಏರ್ ಇಂಡಿಯಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಈದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯಿಸಿರುವ ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟೂಡಾ ಶಶಿಧರ್ (ಶಶಿಧರ್ ತಿಪಟೂರು), “ಕಳೆದ ಒಂದು ಗಂಟೆಯಲ್ಲಿ ನಾಲ್ಕು ವಿಮಾನಯಾನ ರದ್ದುಗೊಳಿಸಲಾಗಿದೆ. ಬೆಂಗಳೂರಿನ ಎರಡು ಮತ್ತು ಹೈದಾರಾಬಾದ್, ಪುಣೆಯ ತಲಾ ಒಂದು ವಿಮಾನಯಾನ ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮುಂಜಾನೆಯೇ ಮಂಜು ಆವರಿಸಿರುವ ಕಾರಣ ನೀಡಿ ಏರ್ ಇಂಡಿಯಾ 40 ವಿಮಾನಯಾನಗಳನ್ನು ರದ್ದುಗೊಳಿಸಿತ್ತು. ಈ ಬಗ್ಗೆಯೂ ಪ್ರತಿಕ್ರಿಯಿಸಿದ ಶಶಿಧರ್ ಅವರು, “ಮುಂಜಾನೆ ಮಂಜಿನ ಕಾರಣ 40 ವಿಮಾನಯಾನಗಳನ್ನು ರದ್ದುಗೊಳಿಸಿದೆ. ಆದರೆ ಈಗ ಸರಿಯಾದ ಕಾರಣವನ್ನೇ ನೀಡುತ್ತಿಲ್ಲ. ನಾನು 7:30 ಗಂಟೆಗೆ ವಿಮಾನ ಹತ್ತಬೇಕಾಗಿತ್ತು. ಆದರೆ ಇನ್ನೂ ಕಾಯುತ್ತಿರುವೆ. ವಿಮಾನ ರದ್ದಾಗಿದೆಯೇ ಅಥವಾ ಇನ್ನಷ್ಟೂ ವಿಳಂಬವಾಗುತ್ತದೆಯೇ ಎಂಬ ಪ್ರಶ್ನೆಗೆ ಮಾಹಿತಿಯೇ ನೀಡುತ್ತಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಸುತ್ತ ಸೋಮವಾರ ದಟ್ಟವಾದ ಮಂಜು ಆವರಿಸಿದ್ದು ಅನೇಕ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಸೋಮವಾರ ದೆಹಲಿಗೆ ಮತ್ತು ಅಲ್ಲಿಂದ ಹೊರಡುವ 40 ವಿಮಾನಯಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ. ಈ ನಡುವೆ ಕೆಲವು ವಿಮಾನಗಳು ವಿಳಂಬವಾಗಬಹುದು ಎಂದು ಇಂಡಿಗೋ ಕೂಡಾ ಹೇಳಿದೆ. ಆದರೆ ಇದೀಗ ಏರ್‌ ಇಂಡಿಯಾ ಯಾವ ಕಾರಣಕ್ಕೆ ವಿಮಾನ ರದ್ದುಗೊಳಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...