ಜಾಹೀರಾತು ಪ್ರಕರಣ | ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಮುಂದುವರಿಸಿದ ಪತಂಜಲಿ ಆಯುರ್ವೇದ

Date:

ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ವಾಕ್‌ ಪ್ರಹಾರಕ್ಕೆ ಗುರಿಯಾದರೂ ಕೂಡಾ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ್ ಇನ್ನೂ ಕೂಡಾ ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಮುಂದುವರಿಸಿದೆ. ಕಾನೂನು ಪ್ರಕಾರ ಕೆಲವು ಕಾಯಿಲೆಗಳಿಗೆ ಔಷಧಿಯ ಜಾಹೀರಾತು ನೀಡುವಂತಿಲ್ಲ. ಆದರೆ ಪತಂಜಲಿ ಜಾಹೀರಾತು ನೀಡಿ ಈ ಕಾನೂನನ್ನು ನಿರಂತರವಾಗಿ ಉಲ್ಲಂಘಿಸುತ್ತಿದೆ.

ಪತಂಜಲಿ ಆಯುರ್ವೇದ್ ಜುಲೈ 9ರಂದು ಅಮಾನತುಗೊಳಿಸಿರುವ 14 ಆಯುರ್ವೇದ ಔಷಧಿಗಳ ಎಲ್ಲಾ ಜಾಹೀರಾತುಗಳನ್ನು ತೆಗೆದುಹಾಕಲಾಗುವುದು ಮತ್ತು ಹಿಂಪಡೆಯಲಾಗುವುದು ಎಂದು ಉತ್ತರಾಖಂಡದ ಡೆಹ್ರಾರೂನ್‌ನಲ್ಲಿ ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ ಭರವಸೆ ನೀಡಿತ್ತು.

ಆದರೆ ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟ್ಟರ್) ಪತಂಜಲಿ ಆಯುರ್ವೇದ್ ಎರಡು ಬಾರಿ ನಿಯಮವನ್ನು ಉಲ್ಲಂಘಿಸಿದೆ. ಮೊದಲು 2023ರ ನವೆಂಬರ್‌ನಲ್ಲಿ ಮತ್ತು ಅದಾದ ಬಳಿಕ 2024ರ ಜುಲೈ 9ರಂದು ಕಾನೂನು ಉಲ್ಲಂಘಿಸಿದೆ ಎಂದು ಕೇರಳ ಮೂಲದ ಆರ್‌ಟಿಐ ಕಾರ್ಯಕರ್ತ ಕೆ.ವಿ. ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟ್ರೇಡ್‌ಮಾರ್ಕ್ ಪ್ರಕರಣ | 50 ಲಕ್ಷ ರೂ. ಪಾವತಿಸಲು ಪತಂಜಲಿಗೆ ಬಾಂಬೆ ಹೈಕೋರ್ಟ್ ಆದೇಶ

ಈ ಬಗ್ಗೆ ಜುಲೈ 12ರಂದು ಆರ್‌ಟಿಐ ಕಾರ್ಯಕರ್ತ ಕೆ.ವಿ. ಬಾಬು ಅವರು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ (ಎಸ್‌ಎಲ್‌ಎ) ದೂರು ಸಲ್ಲಿಸಿದ್ದಾರೆ. “ನನ್ನ ದೂರಿನ ಆಧಾರದ ಮೇಲೆ, ಎಸ್‌ಎಲ್‌ಎ ಜುಲೈ 15ರಂದು ಹರಿದ್ವಾರದ ಡ್ರಗ್ ಇನ್‌ಸ್ಪೆಕ್ಟರ್‌ಗೆ ಕ್ರಮಕೈಗೊಳ್ಳಲು ಸೂಚಿಸಿದೆ. ಈ ಹಿಂದಿನ ಜಾಹೀರಾತುಗಳನ್ನು ಅಳಿಸಿದರೂ ಕೂಡಾ ಸುಪ್ರೀಂಗೆ ನೀಡಿದ ಭರವಸೆಯನ್ನು ನೇರವಾಗಿ ಉಲ್ಲಂಘಿಸಿ ಮತ್ತೆ ಜಾಹೀರಾತು ಪ್ರಕಟಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಜುಲೈ 18ರಂದು ಮತ್ತೆ ಎಸ್‌ಎಲ್‌ಎಗೆ ದೂರು ನೀಡಿದ್ದೇನೆ. ಈ ವಿಡಿಯೋದಲ್ಲಿ ದೃಷ್ಟಿ ಐ ಡ್ರಾಪ್‌ ಯಾವುದೇ ಕಣ್ಣಿನ ಸಮಸ್ಯೆಗೆ ಪರಿಣಾಮಕಾರಿಯಾದ ಆಯುರ್ವೇದ ಔಷಧಿಯಾಗಿದ್ದು ಬಳಸಲು ಸುರಕ್ಷಿತವಾಗಿದೆ ಎಂದು ಹೇಳಿಕೊಳ್ಳಲಾಗಿದೆ. ಜೊತೆಗೆ ರಾಮ್‌ದೇವ್ ಅವರು ಔಷಧಿ ಪ್ರಚಾರ ಮಾಡುವ ವಿಡಿಯೋ ಇದೆ ಎಂದು ದೂರಿದ್ದಾರೆ.

ಪತಂಜಲಿ ಆಯುರ್ವೇದ್‌ನ ಅಧಿಕೃತ ಹ್ಯಾಂಡಲ್‌ನಿಂದ ಇತ್ತೀಚೆಗೆ ಮಾಡಲಾದ ಎಕ್ಸ್‌ ಪೋಸ್ಟ್‌ನಲ್ಲಿ “ಗ್ಲುಕೋಮಾ ಅಥವಾ ಕಣ್ಣಿನ ಪೊರೆ, ರೆಟಿನೈಟಿಸ್ ಪಿಗ್ಮೆಂಟೋಸಾ, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲು ಪತಂಜಲಿ ಆಯುರ್ವೇದ್‌ನ ಐ ಡ್ರಾಪ್ ಸಹಾಯ ಮಾಡುತ್ತದೆ” ಎಂದು ಹೇಳಲಾಗಿದೆ. ಸದ್ಯ ಹ್ಯಾಂಡಲ್‌ನಲ್ಲಿ ಈ ಜಾಹೀರಾತು ಕಾಣುತ್ತಿಲ್ಲ.

ನೇತ್ರತಜ್ಞರಾಗಿರುವ ಬಾಬು, ಚಿಕಿತ್ಸೆ ನೀಡಬಹುದಾದ ಪರಿಸ್ಥಿತಿಗಳಿಗೆ ಸರಿಯಾಗಿ ಐ ಡ್ರಾಪ್ಸ್‌ಗಳನ್ನು ನೀಡದಿರುವುದು ಕುರುಡುತನಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ಹಾಗೆಯೇ ಅನೇಕ ವೈದ್ಯರು ಪತಂಜಲಿ ಐ ಡ್ರಾಪ್ ಅನ್ನು ಬಳಸದಂತೆ ಸಲಹೆ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...