ಪತಂಜಲಿ ರಾಮ್‌ದೇವ್‌ಗೆ ಮತ್ತೆ ಮುಖಭಂಗ: ಮಾರುಕಟ್ಟೆಯಿಂದ ಮೆಣಸಿನಕಾಯಿ ಪುಡಿ ಔಟ್‌

Date:

ಸ್ವದೇಶಿ ಉತ್ಪನ್ನಗಳ ಹೆಸರಿನಲ್ಲಿ ಭಾರತೀಯ ಮಾರುಕಟ್ಟೆಗೆ ಬಂದಿದ್ದ ಬಾಬಾ ರಾಮ್‌ದೇವ್ ಅವರ ಪತಂಜಲಿ ಬ್ರಾಂಡ್‌ನ ಆಹಾರ ಉತ್ಪನ್ನಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪತಂಜಲಿ ಫುಡ್ಸ್ ಲಿಮಿಟೆಡ್‌ ಉತ್ಪಾದಿಸಿದ್ದ ಕೆಂಪು ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಆಹಾರ ನಿಯಂತ್ರಣ ಪ್ರಾಧಿಕಾರ ಎಫ್ಎಸ್ಎಸ್ಎಐ ನಿರ್ದೇಶನ ನೀಡಿದೆ. ಅದರಂತೆ, 4 ಟನ್ ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಪತಂಜಲಿ ಪಡೆಯಲಿದೆ.

ಪತಂಜಲಿ ಬ್ರಾಂಡ್‌ನ 200 ಗ್ರಾಮ್‌ ತೂಕದ ಮೆಣಸಿನಕಾಯಿ ಪುಡಿಯ ಪ್ಯಾಕೆಟ್‌ಗಳನ್ನು ಪ್ರಯೋಗಾಲಯದ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಯಲ್ಲಿ ಪತಂಜಲಿ ಉತ್ಪನ್ನಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿವೆ. ನಿಗದಿ ಮಾಡಲಾಗಿರುವ ಗರಿಷ್ಠ ಪ್ರಮಾಣದ ಕೀಟನಾಶಕ ಉಳಿಕೆ ಪ್ರಮಾಣಕ್ಕಿಂತ ಹೆಚ್ಚು ಪ್ರಮಾಣದ ಕೀಟನಾಶಕ ಉಳಿಕೆಗಳು ಪತಂಜಲಿ ಉತ್ಪನ್ನಗಳಲ್ಲಿ ಕಂಡುಬಂದಿವೆ ಎಂದು ಭಾರತೀಯ ಆಹಾರ ಪ್ರಮಾಣೀಕರಣ ಮತ್ತು ಸುರಕ್ಷತಾ ಪ್ರಾಧಿಕಾರ (ಎಫ್ಎಸ್ಎಸ್ಎಐ) ಹೇಳಿದೆ. ಹೀಗಾಗಿ, ಪತಂಜಲಿಯ ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ನಿರ್ದೇಶನ ನೀಡಿದೆ.

“ಎಫ್ಎಸ್ಎಸ್ಎಐ ಸೂಚನೆಯಂತೆ 4 ಟನ್ ನಷ್ಟು ಕೆಂಪು ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಹಿಂಪಡೆದಯಲಾಗುತ್ತಿದೆ. ಗ್ರಾಹಕರು ಆ ಉತ್ಪನ್ನಗಳಲ್ಲಿ ಮರಳಿಸಬೇಕು. ಮರಳಿಸಲಾದ ಉತ್ಪನ್ನಗಳ ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುತ್ತದೆ” ಎಂದು ಪತಂಜಲಿ ಫುಡ್ಸ್ ಲಿಮಿಟೆಡ್ ಕಂಪನಿಯ ಸಿಇಒ ಸಂಜೀವ್ ಅಸ್ಥಾನಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಪತಂಜಲಿ ಆಯುರ್ವೇದ ಬ್ರಾಂಡ್‌ನ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ಅವರ ವಿರುದ್ಧ ಕೇರಳ ಔಷಧ ನಿಯಂತ್ರಕರು ದೂರು ದಾಖಲಿಸಿದೆ. ಅವರ ದೂರಿನ ವಿಚಾರಣೆ ನಡೆಸಿರುವ ಕೇರಳದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯವು ರಾಮ್‌ದೇವ್ ವಿರುದ್ಧ ಜಾಮೀನು ನೀಡಬಹುದಾದ ಬಂಧನ ವಾರಂಟ್ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...