ನಿರ್ಗಮಿಸುವ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ: ಕಾಂಗ್ರೆಸ್ ವಾಗ್ದಾಳಿ

Date:

ನಿರ್ಗಮಿಸುವ ಪ್ರಧಾನಿ ನರೇಂದ್ರ ಮೋದಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ. ಮೋದಿಯ ಗ್ಯಾರಂಟಿ ಹಳ್ಳ ಹಿಡಿದಿದೆ. ಇದಲ್ಲದೆ 400 ಸಂಖ್ಯೆ ನಿಶ್ಚಿತ ಸಮಾಧಿ ಸ್ಥಿತಿಗೆ ಕೊಂಡೊಯ್ಯಲಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್, ನಿರ್ಗಮಿಸುವ ಪ್ರಧಾನಿ ಒಬ್ಬ ಮಹಾನ್‌ ಸುಳ್ಳುಗಾರ ಎಂದು ಇಡೀ ದೇಶಕ್ಕೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಆದರೂ ಮೋದಿ ಅವರು ಹಿಂದೂ ಮುಸ್ಲಿಂ ರಾಜಕೀಯದ ಸುಳ್ಳುಗಳನ್ನು ದಿನನಿತ್ಯ ಪಠಿಸುತ್ತಿರುವುದು ತಮ್ಮ ಕರುಣಾಜನಕ ಮಾನದಂಡವನ್ನೇ ಅನುಸರಿಸುತ್ತಿರುತ್ತಿದ್ದಾರೆ ಎಂಬುದನ್ನು ತೋರಿಸುತ್ತಿದೆ. 2024ರ ಏಪ್ರಿಲ್ 19ರಂದು ದಾಖಲಾದ ಈ ವಿಷಯ ನಮ್ಮ ಮನಸ್ಸಿನಿಂದ ಅಳಿಸಿ ಹೋಗುವುದಿಲ್ಲ ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ನಿರ್ಗಮಿಸುವ ಪ್ರಧಾನಿಯವರು ನಿರ್ಲಜ್ಜವಾಗಿ ಬಳಸಿದ ಕೋಮುವಾದಿ ಭಾಷೆ, ಸಂಕೇತಗಳು ಹಾಗೂ ಪ್ರಸ್ತಾಪಗಳು ಅವರು ತಮ್ಮ ಮನಸ್ಸಿನಿಂದ ಅಳಿಸಬಹುದು. ಆದರೆ ನಮ್ಮ ಮನಸ್ಸಿನಿಂದ ಅಳಿದು ಹೋಗುವುದಿಲ್ಲ. ನಾವು ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ. ಕ್ರಮ ಕೈಗೊಳ್ಳಬೇಕಾಗಿದೆ. ನೋವಿನ ಸಂಗತಿಯಂದರೆ ಕ್ರಮ ಜರುಗಿಸಲಾಗಿಲ್ಲ ಎಂದು ಜೈರಾಮ್‌ ರಮೇಶ್ ಬೇಸರ ವ್ಯಕ್ತಪಡಿಸಿದರು.

ಪ್ರಚಾರದ ಉದ್ದಕ್ಕೂ ನಿರ್ಗಮಿತ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ರಾಜಕೀಯ ಗೊತ್ತಿರಲಿಲ್ಲ. ಮೋದಿಯವರ ಪಕ್ಷದ ಪ್ರಣಾಳಿಕೆ ಪ್ರಯೋಜನಕ್ಕೆ ಬಾರದ ಸ್ಥಿತಿಗೆ ತಲುಪಿದೆ. ಕಳೆದ ಕೆಲವು ತಿಂಗಳುಗಳಿಂದ ಮೋದಿಯವರ ಗ್ಯಾರಂಟಿಗೆ ಸಾರ್ವಜನಿಕವಾಗಿ ಭರ್ಜರಿ ಪ್ರಚಾರ ಕೊಡಲಾಯಿತಾದರೂ ಅದು ಹಳ್ಳ ಹಿಡಿಯಿತು.400 ಸಂಖ್ಯೆ ಕೂಡ ಸಮಾಧಿ ಸ್ಥಿತಿ ತಲುಪಿದೆ. ಆದ ಕಾರಣ ಹತಾಶ ಸ್ಥಿತಿಗೆ ತಲುಪಿರುವ ಮೋದಿ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ಕಾರ್ಯಸೂಚಿ ಬಗ್ಗೆ ಭಾರತದ ಜನರಿಗೆ ಅಪಪ್ರಚಾರ ಮೂಡಿಸುತ್ತಿದ್ದಾರೆ. ಮೋದಿಯ ನಿರ್ಗಮನದ ವಿಷಯ ಅವರಿಗೆ ನೆನಪಿನ ಶಕ್ತಿಯನ್ನು ಇನ್ನಷ್ಟು ಕಳೆದುಕೊಳ್ಳುವಂತೆ ಮಾಡಿದೆ ಎಂದು ಜೈರಾಮ್‌ ರಮೇಶ್ ಪ್ರಧಾನಿ ವಿರುದ್ಧ ಟೀಕಾಪ್ರಹಾರ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...