ಪೇಟಿಎಂ ಮುಖ್ಯಸ್ಥ ಮೋದಿ ಭಕ್ತ; ಇ.ಡಿ ಮೌನ ಪ್ರಶ್ನಿಸಿದ ಕಾಂಗ್ರೆಸ್

Date:

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ ಈ ಹಗರಣದ ಬಗ್ಗೆ ಕೇಂದ್ರದ ನಿಲುವು ಏನು? ಕಳೆದ ಏಳು ವರ್ಷಗಳಿಂದ ತಪ್ಪು ನಡೆಯುತ್ತಿದ್ದರೂ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮೇಲೆ ಏಕೆ ಕ್ರಮ ಜರುಗಿಸಿಲ್ಲ? ಪೇಟಿಎಂ ಪೇಮೆಂಟ್‌ ಬ್ಯಾಂಕಿನ ಮುಖ್ಯಸ್ಥ ಪ್ರಧಾನಿ ಮೋದಿ ಭಕ್ತ. ಅವರೊಂದಿಗೆ ಸೆಲ್ಫಿ ಪಡೆದಿದ್ದಾರೆ ಹಾಗೂ ಪ್ರಧಾನಿಯಿಂದ ಅನುಕೂಲ ಪಡೆಯಲು ಜಾಹಿರಾತುಗಳನ್ನು ಪ್ರಕಟಿಸಿದ್ದಾರೆ” ಎಂದು ಆರೋಪಿಸಿದರು.

ಪ್ರಧಾನಿ ಮೋದಿ ತಮ್ಮ ಚುನಾವಣಾ ರ್‍ಯಾಲಿಗಳಲ್ಲಿ ಪೇಟಿಎಂ ಅನ್ನು ಬೆಂಬಲಿಸಿದ್ದಾರೆ. ಪ್ರಧಾನಿ ಮೋದಿ ನಿಕಟವರ್ತಿಗಳ ವಿರುದ್ಧ ಆರೋಪ ಬಂದರೆ ತನಿಖಾ ಸಂಸ್ಥೆಗಳು ಏಕೆ ಮೌನವಾಗುತ್ತವೆ? ಇ.ಡಿ ಏಕೆ ಮೌನವಾಗಿದೆ?” ಎಂದು ಸುಪ್ರಿಯಾ ಶ್ರೀನಾಥೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೇಟಿಎಂ ಮಾತೃ ಕಂಪನಿ ಒನ್‌97 ಕಮ್ಯೂನಿಕೇಷನ್ಸ್ ಅಥವಾ ಅದರ ಮುಖ್ಯಸ್ಥ ವಿಜಯ್‌ ಶಂಕರ್ ಶರ್ಮಾ ಇ.ಡಿ ತನಿಖೆಗೆ ಒಳಪಡಲಿದೆ ಎನ್ನುವುದನ್ನು ಪೇಟಿಎಂ ಸಂಸ್ಥೆ ನಿರಾಕರಿಸಿದೆ.

ಈ ಸುದ್ದಿ ಓದಿದ್ದೀರಾ? ಪೇಟಿಎಂ ಪಾವತಿ ಬ್ಯಾಂಕ್ | ಅಕ್ರಮ ಹಣ ವ್ಯವಹಾರದ ಬಗ್ಗೆ ಇ.ಡಿ ತನಿಖೆಯ ಅಗತ್ಯವೇಕಿದೆ?

“ಪೇಟಿಎಂ ಸಂಸ್ಥೆ, ಮುಖ್ಯಸ್ಥರು ಅಥವಾ ಸಿಇಒ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇ.ಡಿಯಿಂದ ಯಾವುದೇ ತನಿಖೆ ಎದುರಿಸುತ್ತಿಲ್ಲ. ಈ ಮೊದಲು ಕೆಲವು ವಹಿವಾಟುದಾರರು/ ಬಳಕೆದಾರರು ಆಯಾ ಸಂದರ್ಭಗಳಲ್ಲಿ ತನಿಖೆಗೊಳಪಟ್ಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ನಾವು ಸದಾ ಅಧಿಕಾರಿಗಳೊಂದಿಗೆ ಸಹಕರಿಸುತ್ತೇವೆ ಎಂದು ಪೇಟಿಎಂ ಇತ್ತೀಚಿಗೆ ಪ್ರಕಟಣೆಯಲ್ಲಿ ತಿಳಿಸಿತ್ತು. ನಾವು “ದಾಖಲೆಗಳನ್ನು ನೇರವಾಗಿ ಒದಗಿಸುತ್ತೇವೆ ಹಾಗೂ ಅಕ್ರಮ ಹಣ ವರ್ಗಾವಣೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸುತ್ತೇವೆ. ನಾವು ಭಾರತೀಯ ಕಾನೂನುಗಳನ್ನು ಅನುಸರಿಸುತ್ತಿದ್ದು, ಅದಕ್ಕೆ ಸದಾ ಬದ್ಧವಾಗಿರುತ್ತೇವೆ. ದೇಶದ ನಿಯಂತ್ರಕ ಆದೇಶಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ” ಎಂದು ಪೇಟಿಎಂ ತನ್ನ ಪ್ರಕಟಣೆಯಲ್ಲಿ ಹೇಳಿತ್ತು.

ಬ್ಲೂಮ್‌ಬರ್ಗ್‌ ವರದಿಯ ಪ್ರಕಾರ, ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಪರವಾನಗಿಯನ್ನು ಮುಂದಿನ ತಿಂಗಳು ರದ್ದುಗೊಳಿಸಲು ಆರ್‌ಬಿಐ ಪರಿಗಣಿಸಲಿದೆ. ಕಂಪನಿಗೆ ಫೆಬ್ರವರಿ 29ಕ್ಕೆ ಗಡುವು ವಿಧಿಸಲಾಗಿದ್ದು, ನಂತರದಲ್ಲಿ ಪೇಟಿಎಂ ಅಂಗಸಂಸ್ಥೆ ನೂತನ ಠೇವಣಿಗಳನ್ನು ಸ್ವೀಕರಿಸುವುದಿಲ್ಲ. ಸಾವಿರಾರು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಗ್ರಾಹಕರು ತಮ್ಮ ಕೆವೈಸಿ ದಾಖಲೆಯನ್ನೇ ಸಲ್ಲಿಸಿಲ್ಲ ಹಾಗೂ ಕೆಲವೊಂದು ಸಂದರ್ಭಗಳಲ್ಲಿ ಒಂದೇ ಪಾನ್ ಕಾರ್ಡ್‌ ಬಳಸಿ ಸಾವಿರಾರು ಖಾತೆಗಳ ನೋಂದಣಿಗೆ ಅವಕಾಶ ಕೊಡಲಾಗಿದೆ ಎಂದು ಆರ್‌ಬಿಐ ಉಲ್ಲಂಘನೆ ಆದೇಶದಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...