ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಹವ್ಯಾಸ ಬೆಳಸಿಕೊಂಡಿದ್ದಾರೆ: ಬಿಜೆಪಿಯ ಮಾಜಿ ಕೇಂದ್ರ ಸಚಿವನ ವಿವಾದಾತ್ಮಕ ಹೇಳಿಕೆ

Date:

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಮಧ್ಯ ಪ್ರದೇಶದ ಸಚಿವ ಪ್ರಹ್ಲಾದ್‌ ಪಟೇಲ್ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಾಗರಿಕರ ಬೇಡಿಕೆಗಳನ್ನು ‘ಭಿಕ್ಷೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಧ್ಯ ಪ್ರದೇಶದ ರಾಜಗಢ ಜಿಲ್ಲೆಯಲ್ಲಿ ವೀರಾಂಗನ ರಾನಿ ಆವಂತಿ ಬಾಯಿ ಲೋಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಹ್ಲಾದ್‌ ಪಟೇಲ್, ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಹವ್ಯಾಸವನ್ನು ಬೆಳಸಿಕೊಂಡಿದ್ದಾರೆ. ನಾಯಕರು ಬಂದಾಗ ಅವರ ಕೈಚೀಲದ ತುಂಬ ಅರ್ಜಿಗಳೆ ತುಂಬಿರುತ್ತವೆ. ಅವರು ವೇದಿಕೆಯಲ್ಲಿ ಹಾರ ಹಾಕಿ ಕೈಗೆ ಅರ್ಜಿಗಳನ್ನು ನೀಡುತ್ತಾರೆ. ಇದು ಒಳ್ಳೆಯ ಅಭ್ಯಾಸವಲ್ಲ. ಕೇಳುವುದನ್ನು ಬಿಟ್ಟು ಕೊಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಇದು ನಿಮಗೆ ಸಂತೋಷದ ಜೀವನ ಹಾಗೂ ಸುಸಂಸ್ಕೃತ ಸಮಾಜ ನಿರ್ಮಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

ಹೆಚ್ಚು ಉಚಿತ ಕೊಡುಗೆಗಳನ್ನು ನಿರೀಕ್ಷಿಸುವುದನ್ನು ಅವಲಂಬಿಸಿದರೆ ಸಮಾಜವು ಅಭಿವೃದ್ಧಿಯ ಬದಲು ಬಲಹೀನಗೊಳ್ಳುತ್ತದೆ. ಇಂತಹ ಭಿಕ್ಷುಕರ ಸೇನೆಯಿಂದ ಸಮಾಜವು ಬಲಗೊಳ್ಳುವ ಬದಲು ದುರ್ಬಲಗೊಳ್ಳುತ್ತದೆ. ಧೈರ್ಯವಂತ ಮಹಿಳೆಯರಿಗೆ ಉಚಿತ ಕೊಡುಗೆಗಳನ್ನು ಆಕರ್ಷಿಸುವುದು ಗೌರವದ ಸಂಕೇತವಲ್ಲ. ಯಾವಾಗ ನಾವು ಅವರ ಮೌಲ್ಯಗಳೊಂದಿಗೆ ಜೀವನ ನಡೆಸುತ್ತೇವೆಯೋ ಅದು ಹುತಾತ್ಮರಿಗೆ ಅದೇ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಪ್ರಹ್ಲಾದ್‌ ಪಟೇಲ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಾರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

“ಭಿಕ್ಷೆ ಬೇಡಿದ ಧೈರ್ಯವಂತ ಮಹಿಳೆ ಯಾರಾದರೂ ಇದ್ದಾರೆಯೆ ಹೇಳಿ ನೋಡೋಣ? ಇದರ ಹೊರತಗಿಯೂ ನಾವು ಕಾರ್ಯಕ್ರಮಗಳನ್ನು ಆಯೋಜಿಸಿ ಭಾಷಣಗಳನ್ನು ಮಾಡುತ್ತೇವೆ. ನಾನು ನರ್ಮಾದಾ ಪರಿಕ್ರಮ ಭಕ್ತನಾಗಿ ಭಿಕ್ಷೆ ಕೇಳುತ್ತೇನೆ ವಿನಾ ನನಗಾಗಿ ಎಂದು ಕೇಳುವುದಿಲ್ಲ. ನನಗೆ ಯಾರಾದರೂ ಏನು ಕೊಟ್ಟಿದ್ದಾರೆ ಎಂಬುದನ್ನು ಯಾರೊಬ್ಬರು ಹೇಳುವುದಿಲ್ಲ” ಎಂದು ಸಚಿವರು ತಿಳಿಸಿದರು.

ಸಚಿವ ಪ್ರಹ್ಲಾದ್‌ ಪಟೇಲ್ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವಿವಾದವನ್ನು ಹುಟ್ಟುಹಾಕಿದ್ದು, ವಿಪಕ್ಷ ಕಾಂಗ್ರೆಸ್‌ ಹೇಳಿಕೆಯನ್ನು ಖಂಡಿಸಿದೆ. ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜೀತು ಪತ್ವಾರಿ ಸಚಿವರ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ರಾಜ್ಯದ ಜನರಿಗೆ ಅವಮಾನ ಮಾಡಿದ್ದಾರೆ ಎಂದಿದ್ದಾರೆ.

” ಸಾರ್ವಜನಿಕರನ್ನು ಭಿಕ್ಷುಕರು ಎನ್ನುವ ಅಹಂಕಾರದ ಹಂತಕ್ಕೆ ಬಿಜೆಪಿ ತಲುಪಿದೆ. ಕಷ್ಟಗಳು ಹಾಗೂ ಕಣ್ಣೀರಿನೊಂದಿಗೆ ಹೋರಾಡುವವರಿಗೆ ಇದು ಅವಮಾನಕರವಾಗಿದೆ. ಚುನಾವಣೆ ಮೊದಲು ಹುಸಿ ಭರವಸೆ ನೀಡಿ ಅವುಗಳನ್ನು ಪೂರೈಸಲು ಈಗ ನಿರಾಕರಿಸಲಾಗುತ್ತಿದೆ. ಭರವಸೆಗಳನ್ನು ಜನರು ನೆನಪಿಸಿದರೆ ಅದನ್ನು ಭಿಕ್ಷೆ ಎಂದು ನಾಚಿಕೆಯಿಂದ ಕರೆಯಲಾಗುತ್ತದೆ. ಅವರು ನೆನಪಿನಲ್ಲಿಟ್ಟುಕೊಳ್ಳಬೇಕು, ಈ ದೊಡ್ಡ ಬಿಜೆಪಿ ನಾಯಕರು ಮತಕ್ಕಾಗಿ ಭಿಕ್ಷೆ ಬೇಡುತ್ತಾರೆ” ಎಂದು ಜೀತು ಪತ್ವಾರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...