ಈಶಾನ್ಯದವರು ಚೀನಿಗಳ ತರ, ದಕ್ಷಿಣದವರು ಆಫ್ರಿಕಾದವರಂತೆ ಕಾಣುತ್ತಾರೆ: ಸ್ಯಾಮ್ ಪಿತ್ರೋಡಾ

Date:

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಭಾರತದ ವೈವಿದ್ಯತೆಯ ಬಗ್ಗೆ ನೀಡಿದ ಹೇಳಿಕೆ ಎಲ್ಲಡೆ ವೈರಲ್‌ ಆಗುತ್ತಿದೆ.

“ನಾವು ಭಾರತದಂತಹ ವೈವಿದ್ಯತೆ ದೇಶವನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳಬಹುದು.ಈಶಾನ್ಯ ಭಾರತದಲ್ಲಿರುವವರು ಚೀನಿಗಳಂತೆ, ಪಶ್ಚಿಮ ಭಾಗದವರು ಅರಬ್ಬರಂತೆ,ಉತ್ತರದವರು ಶ್ವೇತ ವರ್ಣದವರಂತೆ ಹಾಗೂ ದಕ್ಷಿಣದವರು ಆಫ್ರಿಕಾದವರಂತೆ ಕಾಣುತ್ತಾರೆ. ಇದು ಅಂತಹ ದೊಡ್ಡ ವಿಷಯವಾಗುವುದಿಲ್ಲ. ನಾವೆಲ್ಲರು ಸೋದರ ಸೋದರಿಯರು” ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಹೇಳಿದ್ದಾರೆ.

ಸ್ಯಾಮ್‌ ಪಿತ್ರೋಡಾ ಅವರು ಪ್ರಜಾಪ್ರಭುತ್ವದ ವಿಶ್ವದಲ್ಲಿ ಭಾರತ ಹೇಗೆ ಅದ್ಭುತವಾಗಿದೆ ಎಂಬುದರ ಬಗ್ಗೆ ಉದಾಹರಣೆಯನ್ನು ನೀಡಿದರು. ಭಾರತೀಯರು 75 ವರ್ಷದ ಪ್ರಜಾಪ್ರಭುತ್ವದಲ್ಲಿ  ಅಲ್ಲಲ್ಲಿ ಕೆಲವೊಂದು ಹೊಡೆದಾಟಗಳನ್ನು ಬಿಟ್ಟರೆ ಜನರು ತುಂಬ ಸಂತೋಷದ ವಾತಾವರಣದೊಂದಿಗೆ ಒಟ್ಟಾಗಿ ಜೀವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

ದೇಶದ ಜನರು ವಿವಿಧ ಭಾಷೆಗಳು, ಉಡುಪುಗಳು ಹಾಗೂ ಆಹಾರವನ್ನು ಗೌರವಿಸುತ್ತಾರೆ. ಇಂತಹ ಭಾರತದಲ್ಲಿ ನಾನು ನಂಬಿಕೆ ಹೊಂದಿದ್ದೇನೆ. ಪ್ರತಿಯೊಬ್ಬರಿಗೂ ವಾಸಿಸಲು ಸ್ಥಳವಿದ್ದು, ಎಲ್ಲರೂ ರಾಜಿ ಮಾಡಿಕೊಂಡು ಬದುಕುತ್ತಾರೆ ಎಂದು ಸ್ಯಾಮ್‌ ಪಿತ್ರೋಡಾ ಹೇಳಿದರು.

“ಭಾರತವು ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಭ್ರಾತೃತ್ವದೊಂದಿಗೆ ಬೇರೂರಿದೆ. ಆದರೆ ಈಗ ಸ್ವಾತಂತ್ರ್ಯವು ರಾಮ ನವಮಿ, ರಾಮ ದೇಗುಲದೊಂದಿಗೆ ಸವಾಲು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಮಯದಲ್ಲೂ ದೇಗುಲಕ್ಕೆ ತೆರಳುತ್ತಾರೆ. ಅವರು ಭಾರತದ ನಾಯಕರಂತೆ ಮಾತನಾಡದೆ, ಬಿಜೆಪಿಯವರಂತೆ ಮಾತನಾಡುತ್ತಾರೆ” ಎಂದು ಪಿತ್ರೋಡಾ ತಿಳಿಸಿದರು.

ಸ್ಯಾಮ್‌ ಪಿತ್ರೋಡಾ ಈ ಮೊದಲು ಪಿತ್ರಾರ್ಜಿತ ತೆರಿಗೆಯ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಬಿಜೆಪಿ ನಾಯಕರು ಪಿತ್ರೋಡಾ ಅವರ ಪಿತ್ರಾರ್ಜಿತ ತೆರಿಗೆಯ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...