ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವ ಗಡ್ಡಧಾರಿ-ಟೋಪಿಧಾರಿ ವ್ಯಕ್ತಿಗಳಿಗೆ ಥಳಿಸಿ ಎಂದ ಬಿಜೆಪಿ ಶಾಸಕ

Date:

ಗಡ್ಡ ಬಿಟ್ಟವರು, ಟೋಪಿ ಹಾಕುವವರು ಅಥವಾ ಗೋಮಾಂಸ ತಿನ್ನುವವರು ಹಿಂದೂ ಧಾರ್ಮಿಕ ಸ್ಥಳಗಳ ಬಳಿ ಕಂಡುಬಂದರೆ ಥಳಿಸಲಾಗುವುದು ಎಂದು ಜಾರ್ಖಂಡ್‌ನ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಲಮೌ ಜಿಲ್ಲೆಯ ಪಂಕಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಕುಶ್ವಾಹ ಶಶಿ ಭೂಷಣ್ ಮೆಹ್ತಾ ಮಂಗಳವಾರ(ಅ.24) ವಿಜಯ ದಶಮಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಹಿಂದಿಯಲ್ಲಿ ಈ ವಿವಾದಿತ ಹೇಳಿಕೆಗಳನ್ನು ನೀಡಿದ್ದಾರೆ.

ಅವರ ಈ ವಿವಾದಾತ್ಮಕ ಹೇಳಿಕೆಯಿರುವ ಭಾಷಣದ ತುಣುಕಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಶ್ವಾಹ ಶಶಿ ಭೂಷಣ್ ಮೆಹ್ತಾ ಅವರು ತಮ್ಮ ಭಾಷಣದಲ್ಲಿ, ಮುಸ್ಲಿಮರನ್ನು ಸ್ಪಷ್ಟವಾಗಿ ಹೆಸರಿಸದಿದ್ದರೂ, “ಈ ಜನರು” ಮೊದಲು ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಮತ್ತು ನಂತರ ನಮ್ಮವರಿಗೆ ಅಡ್ಡಿಪಡಿಸುತ್ತಾರೆ, ಅಂಥವರು ಹಿಂದೂ ಧಾರ್ಮಿಕ ಸ್ಥಳಗಳ ಬಳಿ ಕಂಡುಬಂದರೆ ಥಳಿಸಿ ಎಂದು ಹೇಳಿದರು.

ಗುರುವಾರ ಸಂಜೆಯವರೆಗೆ ದ್ವೇಷದ ಭಾಷಣಕ್ಕಾಗಿ ಮೆಹ್ತಾ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ

ಪಲಾಮೌ ಪೊಲೀಸ್ ಅಧೀಕ್ಷಕಿ ರೀಷ್ಮಾ ರಮೇಶನ್, “ನಾವು ವಿಡಿಯೊವನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಇಲ್ಲಿಯವರೆಗೆ ಯಾರೂ ಯಾವುದೇ ದೂರು ದಾಖಲಿಸಿಲ್ಲವಾದ್ದರಿಂದ ಎಫ್‌ಐಆರ್ ಅನ್ನು ಇನ್ನೂ ದಾಖಲಿಸಿಲ್ಲ” ಎಂದು ಹೇಳಿದರು.

ವರದಿಗಾರರು ದ್ವೇಷದ ಭಾಷಣದ ಮೇಲೆ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ನೆನಪಿಸಿದಾಗ ವಿಡಿಯೋವನ್ನು ಪರಿಶೀಲಿಸಿದ ನಂತರ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಅಧೀಕ್ಷಕಿ ರೀಷ್ಮಾ ರಮೇಶನ್ ಹೇಳಿದರು.

ಅಧಿಕಾರರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್ ಎರಡೂ ಮೆಹ್ತಾ ಅವರ ಹೇಳಿಕೆಗಳನ್ನು ಖಂಡಿಸಿವೆ.

ಮತದಾರರಿಗೆ ತಿಳಿಸಲು ಬೇರೇನೂ ಇಲ್ಲದ ಕಾರಣ ಬಿಜೆಪಿ ನಾಯಕರು ದ್ವೇಷದ ಭಾಷಣದ ಹಿಂದೆ ಬಿದ್ದಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಹೇಳಿದ್ದಾರೆ.

2012ರ ಮೇ 11ರಂದು ಬಿಜೆಪಿ ಮುಖಂಡ ನಡೆಸುತ್ತಿದ್ದ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರ ಕೊಲೆ ಪ್ರಕರಣದಲ್ಲಿ ಮೆಹ್ತಾ ಆರೋಪಿಯಾಗಿದ್ದರು. 2019ರಲ್ಲಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿರುವುದು ಶಿಕ್ಷಕನ ಕುಟುಂಬದಿಂದ ಪ್ರತಿಭಟನೆಗೆ ಕಾರಣವಾಗಿತ್ತು. ರಾಜ್ಯ ಚುನಾವಣೆಗಳು ಹತ್ತಿರದಲ್ಲಿದ್ದಾಗ ನ್ಯಾಯಾಲಯವು 2019 ರ ಡಿಸೆಂಬರ್‌ನಲ್ಲಿ ಮೆಹ್ತಾ ಅವರನ್ನು ಖುಲಾಸೆಗೊಳಿಸಿತು. ಚುನಾವಣೆಯಲ್ಲಿ ಮೆಹ್ತಾ ಗೆಲುವು ಸಾಧಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...