ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

Date:

  • ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ
  • ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನ

ದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್’ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಫೋಟೋಗಳು ಮತ್ತು ಸುದ್ದಿ ವೈರಲ್ ಆಗಿ, ಅಂತರ್ಜಾಲದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಸ್ಥಳಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ಕುಸ್ತಿಪಟುಗಳು ಈಗ ಪೊಲೀಸರ ಬಂಧಿಯಾಗಿದ್ದಾರೆ. ವಿನೇಶ್ ಪೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬೃಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಬೃಜ್‌ಭೂಷಣ್ ಮೇಲೆ ಕ್ರಮ ಕೈಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ದೃಷ್ಟಿ’ ಎಂದು ಹೇಳಿಕೊಂಡು ಪೊಲೀಸರು ಕುಸ್ತಿಪಟುಗಳ ಪ್ರತಿಭಟನೆ ನಡೆಸುತ್ತಿರುವ ಜಂತರ್ ಮಂತರ್‌ಗೆ ತೆರಳಿದ್ದಾರೆ. ಈ ವೇಳೆ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿರುವ ವಿನೇಶ್ ಫೋಗಟ್ ಅವರು, “ಪ್ರಜಾಪ್ರಭುತ್ವವನ್ನು ಬಹಿರಂಗವಾಗಿಯೇ ಹತ್ಯೆ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆಯಾಗುತ್ತಿರುವ ಸಂದರ್ಭದಲ್ಲಿ ತಮ್ಮ ಹಕ್ಕಿಗಾಗಿ ಒತ್ತಾಯಿಸುತ್ತಿರುವ ಮಹಿಳೆಯರನ್ನು ಹತ್ತಿಕ್ಕಲಾಯಿತು ಎಂಬುದನ್ನು ದೇಶ ನೆನಪಿಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

“ನೂತನ ಸಂಸತ್ ಭವನಕ್ಕೆ ಕುಸ್ತಿಪಟುಗಳು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೂ ಮುನ್ನ ದೆಹಲಿಯ ಗಡಿ ಪ್ರದೇಶಗಳಾದ ಸಿಂಘು, ಟಿಕ್ಕಿ ಹಾಗೂ ಘಾಝಿಪುರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಖಾಪ್ ಪಂಚಾಯತ್‌ನಲ್ಲಿ ಪಾಲ್ಗೊಳ್ಳದಂತೆ ತಡೆಯಬೇಕು ಎಂದು ತಮಗೆ ಸೂಚಿಸಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ನಾವು ಈವರೆಗೆ ಯಾರನ್ನೂ ವಶಕ್ಕೆ ಪಡೆದಿಲ್ಲ. ನೂತನ ಸಂಸತ್ ಭವನದ ಉದ್ಘಾಟನೆ ಇರುವುದರಿಂದ ದೆಹಲಿ ತೊರೆಯುವಂತೆ ರೈತರಿಗೆ ಕೇಳಿಕೊಳ್ಳುತ್ತೇವೆ. ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಯಲ್ಲಿ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ತಿಳಿಸಿದರು.

ಈ ನಡುವೆ, ಭಾರತ್ ಕಿಸಾನ್ ಯೂನಿಯನ್ ಮುಖ್ಯಸ್ಥ ಗುರುನಾಮ್ ಸಿಂಗ್ ಸೇರಿದಂತೆ ಹಲವು ರೈತರನ್ನು ಅವರ ನಿವಾಸಗಳಿಂದ ಹರಿಯಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ರೈತರು ಪ್ರತಿಭಟನಾನಿರತ ಕುಸ್ತಿಪಟುಗಳ ಪರವಾಗಿ ದೆಹಲಿಗೆ ಮೆರವಣಿಗೆ ನಡೆಸಲು ಯೋಜಿಸಿದ್ದರು.

ದೆಹಲಿ ಪೊಲೀಸರು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಿಸುವ ನೆಪದಲ್ಲಿ ಪ್ರತಿಭಟನಾಕಾರರು ಬಂಧಿಸಲು ಹೊರ ದಿಲ್ಲಿಯ ಬವಾನಾದ ಎಂಸಿಡಿ ಶಾಲೆಯಲ್ಲಿ ತಾತ್ಕಾಲಿಕ ಕಾರಾಗೃಹ ನಿರ್ಮಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

ಹೊಸ ಸಂಸತ್ ಭವನದ ಉದ್ಘಾಟನೆ ಮತ್ತು ಕುಸ್ತಿಪಟುಗಳಿಂದ ಯೋಜಿತ ‘ಮಹಿಳಾ ಮಹಾಪಂಚಾಯತ್’ (ಮಹಿಳಾ ಮಹಾಸಭೆ) ಗಾಗಿ ಭದ್ರತಾ ಕ್ರಮಗಳ ಭಾಗವಾಗಿ ಕೇಂದ್ರ ದೆಹಲಿಯಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...