ಏರ್ ಇಂಡಿಯಾ ವಿಮಾನ ಅಪಘಾತ: ಪೈಲಟ್‌ ಅನ್ನು ದೂಷಿಸಲಾಗದು ಎಂದು ಸುಪ್ರೀಂ ಕೋರ್ಟ್‌

Date:

ಈ ವರ್ಷದ ಜೂನ್‌ನಲ್ಲಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ವಿಮಾನದ ಪೈಲಟ್ ಅನ್ನು ದೂಷಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. “ದುರಂತಕ್ಕೆ ಕಾರಣ ಏನೇ ಇರಲಿ, ಪೈಲಟ್ ಕಾರಣವಲ್ಲ” ಎಂದಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಾಲ ಬಾಗ್ಚಿ ಅವರ ಪೀಠವು, ವಿಮಾನದ ಪೈಲಟ್‌ಗಳಲ್ಲಿ ಒಬ್ಬರಾದ ಕಮಾಂಡರ್ ಸುಮೀತ್ ಸಭರ್ವಾಲ್ ಅವರ ತಂದೆ ಪುಷ್ಕರ್ ರಾಜ್ ಸಭರ್ವಾಲ್ ಅವರು, ಅಪಘಾತದ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ಮೇಲ್ವಿಚಾರಣೆಯ ಸಮಿತಿಯನ್ನು ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದೆ.

ಇದನ್ನು ಓದಿದ್ದೀರಾ? ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಷ್ಕರ್ ರಾಜ್ ಸಭರ್ವಾಲ್ ಅವರು ಅರ್ಜಿಯಲ್ಲಿ ಅಪಘಾತದ ಪ್ರಾಥಮಿಕ ತನಿಖೆಯು ತೀವ್ರವಾಗಿ ದೋಷಪೂರಿತವಾಗಿದೆ ಎಂದು ವಾದಿಸಿದ್ದಾರೆ. ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ತನಿಖೆ ಸ್ವತಂತ್ರವಾಗಿಲ್ಲದ ಕಾರಣ ತಮ್ಮ ಕಕ್ಷಿದಾರರು ನಿಷ್ಪಕ್ಷಪಾತ ತನಿಖೆಯನ್ನು ಕೋರಿದ್ದಾರೆ ಎಂದು ವಾದಿಸಿದ್ದಾರೆ.

ವಕೀಲರ ಮಾತನ್ನು ಆಲಿಸಿದ ಪೀಠವು, “ಈ ಅಪಘಾತ ಸಂಭವಿಸಿದ್ದು ಅತ್ಯಂತ ದುರದೃಷ್ಟಕರ ಮತ್ತು ಅವರು ತಮ್ಮ ಮಗನನ್ನು ಕಳೆದುಕೊಂಡಿದ್ದಾರೆ. ಆದರೆ ಅವರ ಮಗನ ಮೇಲೆ ಆರೋಪ ಹೊರಿಸಲಾಗುತ್ತಿದೆ ಅಥವಾ ದೂಷಿಸಲಾಗುತ್ತಿದೆ ಎಂಬ ಹೊರೆಯನ್ನು ಅವರು ಹೊರುವಂತಾಗಬಾರದು. ಈ ಬಗ್ಗೆ ನಾವು ಸ್ಪಷ್ಟಪಡಿಸುತ್ತೇವೆ. ಯಾರೂ ಪೈಲಟ್ ಅನ್ನು ದೂಷಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇನ್ನು ಶಂಕರನಾರಾಯಣ ಅವರು AAIB ತನಿಖೆಯ ಮಾಹಿತಿಯ ಆಧಾರದ ಮೇಲೆ ವಾಲ್ ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ಲೇಖನವನ್ನು ಉಲ್ಲೇಖಿಸಿದ್ದಾರೆ. “ವಿದೇಶಿ ಪತ್ರಿಕಾ ಹೇಗಿದೆ ಎಂಬುದರ ಬಗ್ಗೆ ನಮಗೆ ಚಿಂತೆ ಇಲ್ಲ. ನಿಮ್ಮ ಮೊಕದ್ದಮೆ ಅಮೆರಿಕದ ನ್ಯಾಯಾಲಯದಲ್ಲಿ WSJ ವಿರುದ್ಧ ಇರಬೇಕಿತ್ತು” ಎಂದು ಪೀಠ ಅಭಿಪ್ರಾಯಿಸಿದೆ.

“ಯಾರಿಗೂ ಪೈಲಟ್‌ನಲ್ಲಿ ತಪ್ಪಿದೆ ಎಂಬ ಭಾವನೆಯಿಲ್ಲ. ದುರಂತಕ್ಕೆ ಕಾರಣ ಏನೇ ಇರಲಿ, ಪೈಲಟ್ ಕಾರಣವಲ್ಲ” ಎಂದು ಹೇಳಿದ ಪೀಠ ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...