ಒಂದೇ ದಿನ 11 ಲಕ್ಷ ಸಸಿ ನೆಟ್ಟ ಭಾರತದ ಸ್ವಚ್ಛ ನಗರ ಇಂದೋರ್; ವಿಶ್ವ ದಾಖಲೆ

Date:

ಭಾರತದ ಸ್ವಚ್ಛ ನಗರ ಇಂದೋರ್ ಭಾನುವಾರ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಇಂದೋರ್‌ನ 40ಕ್ಕೂ ಹೆಚ್ಚು ಅನಿವಾಸಿ ಭಾರತೀಯರು (ಎನ್‌ಆರ್‌ಐ) ಸೇರಿದಂತೆ 30,000ಕ್ಕೂ ಹೆಚ್ಚು ಜನರು ಇಂದೋರ್-ಉಜ್ಜಯಿನಿ ರಸ್ತೆಯಲ್ಲಿರುವ ರೇವತಿ ರೇಂಜ್ ಗುಡ್ಡದ ಮೇಲೆ ಸಸಿಗಳನ್ನು ನೆಡುವ ಅಭಿಯಾನವನ್ನು ಮಾಡಿದ್ದು ವಿಶ್ವದಾಖಲೆಯನ್ನು ಬರೆದಿದ್ದಾರೆ.

ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಈ ಮೆಗಾ ಟ್ರೀ ಪ್ಲಾಂಟೇಶನ್ ಡ್ರೈವ್ ಅಡಿಯಲ್ಲಿ ಇಂದೋರ್‌ನಲ್ಲಿ ಸಸಿ ನೆಟ್ಟರು. ಇನ್ನು ಈ ಸಂಪೂರ್ಣ ಅಭಿಯಾನದ ಮೇಲೆ ಕಣ್ಣಿಡಲು 100 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ, ಮಧ್ಯಪ್ರದೇಶದಲ್ಲಿ 5.5 ಕೋಟಿ ಸೇರಿದಂತೆ ದೇಶಾದ್ಯಂತ 140 ಕೋಟಿ ಸಸಿಗಳನ್ನು ನೆಡಲಾಗುವುದು. ಈ ಪೈಕಿ ಮಧ್ಯಪ್ರದೇಶದ ಇಂದೋರ್‌ನಲ್ಲಿ 51 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ.

ಇದನ್ನು ಓದಿದ್ದೀರಾ?  ಉಡುಪಿ ಪ್ರಕರಣ | ’15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ’ ಎಂದು ವಿಕೃತಿ ಮೆರೆದವನ ಮೇಲೆ ಎಫ್‌ಐಆರ್

ಅಸ್ಸಾಂ ಈ ಹಿಂದೆ ಒಂದೇ ದಿನದಲ್ಲಿ 9.26 ಲಕ್ಷ ಸಸಿಗಳನ್ನು ನೆಡುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದೆ. ಭಾನುವಾರ ಇಂದೋರ್ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶೂಟಿಂಗ್ ಶ್ರೇಣಿಯನ್ನು ಹೊಂದಿರುವ ಬೆಟ್ಟದ ಮೇಲೆ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ಅಸ್ಸಾಂನ ವಿಶ್ವ ದಾಖಲೆಯನ್ನು ಮುರಿದಿದೆ.

ಭಾನುವಾರ ಸಂಜೆ ಗಿನ್ನೆಸ್ ವಿಶ್ವ ದಾಖಲೆ ತಂಡದಿಂದ ಹೊಸ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಸಚಿವ ಕೈಲಾಶ್ ವಿಜಯವರ್ಗಿಯ ಮತ್ತು ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಸಮ್ಮುಖದಲ್ಲಿ ಪಡೆದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...