ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

Date:

ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ 15 ರ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ವಕೀಲ ಮ್ಯಾಥ್ಯೂಸ್ ಜೆ. ನೆಡುಂಪಾರ ಅವರು ಈ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದು, “ಈ ನ್ಯಾಯಾಲಯವು ಅರ್ಜಿಯನ್ನು (ಯೋಜನೆಯ ವಿರುದ್ಧ) ಪುರಸ್ಕರಿಸಿದೆ ಮತ್ತು ಯೋಜನೆಯನ್ನು ರದ್ದುಗೊಳಿಸಿದೆ. ಆದರೆ ರದ್ದು ಮಾಡುವಾಗ ಸಂಸತ್ತಿನ ಮೇಲೆ ಮೇಲ್ಮನವಿ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಗಮನಿಸಿಲ್ಲ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

 ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ -ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವಿಚಾರವು ನ್ಯಾಯಸಮ್ಮತವಾಗಿದೆ ಎಂದು ಊಹಿಸುವಲ್ಲಿ ನ್ಯಾಯಾಲಯವು ವಿಫಲವಾಗಿದೆ. ಚುನಾವಣಾ ಬಾಂಡ್ ವಿರುದ್ಧದ ಅರ್ಜಿಯಲ್ಲಿ ಅರ್ಜಿದಾರರು ಅವರಿಗೆ ಪ್ರತ್ಯೇಕವಾಗಿ ಯಾವುದೇ ನಿರ್ದಿಷ್ಟ ಕಾನೂನು ಅಡೆತಡೆಗಳನ್ನು ಉಲ್ಲೇಖಿಸಿಲ್ಲ. ಹಾಗಿರುವಾಗ ಅರ್ಜಿಯನ್ನು ನಿರ್ದಿಷ್ಟ ಮತ್ತು ವಿಶೇಷವಾದ ಹಕ್ಕುಗಳ ಜಾರಿಗಾಗಿ ಖಾಸಗಿ ದಾವೆಯಂತೆ ಪರಿಗಣಿಸಲು ಸಾಧ್ಯವಿಲ್ಲ” ಎಂದು ನೆಡುಂಪಾರ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

“ಸಾರ್ವಜನಿಕ ಅಭಿಪ್ರಾಯವನ್ನು ವಿಭಜಿಸಬಹುದು ಮತ್ತು ಜನರು ಚುನಾಯಿಸಿದ ಪ್ರತಿನಿಧಿಗಳು ಈ ಯೋಜನೆಯನ್ನು ಜಾರಿ ಮಾಡಿರುವ ಕಾರಣದಿಂದಾಗಿ ಈ ದೇಶದ ಬಹುಪಾಲು ಜನರು ಯೋಜನೆಯನ್ನು ಬೆಂಬಲಿಸಬಹುದು, ಜನರಿಗೂ ಕೇಳುವ ಹಕ್ಕಿದೆ ಎಂಬುವುದನ್ನು ಗಮನಿಸುವಲ್ಲಿ ನ್ಯಾಯಾಲಯ ವಿಫಲವಾಗಿದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ?   ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

2018 ರ ಚುನಾವಣಾ ಬಾಂಡ್ ಯೋಜನೆಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ, ಮಾಹಿತಿ ಹಕ್ಕುಗಳ ಸಾಂವಿಧಾನಿಕ ಹಕ್ಕಿನ “ಉಲ್ಲಂಘನೆ” ಎಂದು ಪರಿಗಣಿಸಿ, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಯೋಜನೆಯನ್ನು ಫೆಬ್ರವರಿ 15ರಂದು ರದ್ದುಗೊಳಿಸಿದೆ.

ಹಾಗೆಯೇ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಆದರೆ ಎಸ್‌ಬಿಐ ಅಧಿಕ ಕಾಲಾವಕಾಶವನ್ನು ಕೋರಿದ್ದು, ಸುಪ್ರೀಂ ಕೋರ್ಟ್ ತರಾಟೆಯ ಬಳಿಕ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದೆ. ಪ್ರಸ್ತುತ ಚುನಾವಣಾ ಆಯೋಗ ಚುನಾವಣಾ ಬಾಂಡ್ ಸಂಬಂಧಿತ ಎಲ್ಲ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದು ದೇಶದಲ್ಲಿ ಅತೀ ಅಧಿಕ ಬಾಂಡ್ ದೇಣಿಗೆ ಪಡೆದ ಪಕ್ಷ ಬಿಜೆಪಿ ಎಂಬುವುದು ಬಹಿರಂಗವಾಗಿದೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಾಂಗ್ರೆಸ್ ನಾಯಕ ಜಯಾ ಠಾಕೂರ್ ಮತ್ತು ಸ್ಪಂದನ್ ಬಿಸ್ವಾಲ್ ಅವರು ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...