ಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಇಂಟರ್‌ನೆಟ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Date:

ಮಣಿಪುರದಲ್ಲಿ ಮೇ 3ರಿಂದ ಹೇರಲಾಗಿರುವ ಅನಿರ್ದಿಷ್ಟಾವಧಿ ಇಂಟರ್‌ನೆಟ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯದಲ್ಲಿ ಪರಿಸ್ಥಿತಿ ತಿಳಿಯಾಗಿದ್ದರೂ ದ್ವೇಷಮಯ ವಾತಾವರಣ ನಿಯಂತ್ರಣಕ್ಕೆ ಬಂದಿದ್ದರೂ ರಾಜ್ಯಾದ್ಯಂತ ಇಂಟರ್‌ನೆಟ್ ನಿಷೇಧ ಆದೇಶವನ್ನು ಮಣಿಪುರ ಸರ್ಕಾರ ಪದೇ ಪದೇ ಹೊರಡಿಸುತ್ತಿದೆ ಎಂದು ಅರ್ಜಿದಾರರಾದ ವಕೀಲ ಚೋಂಗ್ಥಮ್ ವಿಕ್ಟರ್ ಸಿಂಗ್ ಮತ್ತು ಉದ್ಯಮಿ ಮಾಯೆಂಗ್ಬಾಮ್ ಜೇಮ್ಸ್ ಆರೋಪಿಸಿದ್ದಾರೆ.

ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿರುವ ಅರ್ಜಿದಾರರು, ಇಂಟರ್‌ನೆಟ್ ನಿಷೇಧಗೊಳಿಸಿರುವುದರಿಂದ ರಾಜ್ಯದ ನಿವಾಸಿಗಳು ಭಯ, ಆತಂಕ, ಅಸಹಾಯಕತೆ ಮತ್ತು ಹತಾಶೆಯ ಭಾವನೆಗಳನ್ನು ಅನುಭವಿಸಿದ್ದಾರೆ. ಸಾಮಾನ್ಯ ಜನರ ದೈನಂದಿನ ಚಟುವಟಿಕೆ ಸಾಧ್ಯವಾಗುತ್ತಿಲ್ಲ. ಕಚೇರಿ ಸಹೋದ್ಯೋಗಿಗಳೊಂದಿಗೆ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರೈಲು ಅಪಘಾತದ ನಂತರ ಸಾವಿರಾರು ಟಿಕೆಟ್ ರದ್ದು; ಐಆರ್‌ಸಿಟಿಸಿ ನಿರಾಕರಣೆ

ಮಕ್ಕಳನ್ನು ಶಾಲೆಗೆ ಕಳುಹಿಸಲು, ಬ್ಯಾಂಕ್ ಖಾತೆ ಬಳಸಲು, ಹಣ ಪಾವತಿ ಅಥವಾ ಸಂದಾಯಕ್ಕೆ, ಅಗತ್ಯ ಸಾಮಗ್ರಿ ಮತ್ತು ಔಷಧ ಇತ್ಯಾದಿಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ನಿಷೇಧದಿಂದಾಗಿ ಜೀವನ ಮತ್ತು ಜೀವನೋಪಾಯ ಸ್ಥಗಿತಗೊಂಡಿದೆ. ವಾಕ್ ಸ್ವಾತಂತ್ರ್ಯ ಮತ್ತು ವ್ಯಾಪಾರ ಮತ್ತು ಉದ್ಯೋಗವನ್ನು ಮುಂದುವರಿಸುವ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಜನರಿಗೆ ಅವಕಾಶ ನೀಡದೆ ಇರುವುದರಿಂದ ಈ ರೀತಿಯ ಆದೇಶಗಳು ತಾರತಮ್ಯ ಎಸಗುತ್ತಿವೆ ಎಂದು ಆರೋಪಿಸಲಾಗಿದೆ.

ಅಂತರ್ಜಾಲ ನಿಷೇಧದಿಂದ ಕಾನೂನುಬದ್ಧ ಗುರಿ ಈಡೇರುವುದಿಲ್ಲ. ಈಗಿನ ಪರಿಸ್ಥಿತಿ ಗಮನಿಸಿದರೆ ಕಾನೂನು ಮತ್ತು ಸುವ್ಯವಸ್ಥೆಯ ಉದ್ದೇಶದೊಂದಿಗೆ ನಿಷೇಧ ನೇರ ಸಂಬಂಧ ಹೊಂದಿಲ್ಲ. ಅಂತರ್ಜಾಲ ನಿಷೇಧ ಕುರಿತಾದ ಅಧಿಸೂಚನೆಗಳನ್ನು ಯಾವುದೇ ವೆಬ್‌ಸೈಟ್‌ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿಲ್ಲ. ಹೀಗಾಗಿ, ನಿವಾಸಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಥವಾ ನಿಷೇಧ ಪ್ರಶ್ನಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ, ಎಲ್ಲ ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆ ಮತ್ತೆ ಆರಂಭಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...