ಉತ್ತರ ಪ್ರದೇಶ | ಭೂಪಟದಲ್ಲೇ ಇಲ್ಲದ ದೇಶಗಳ ಹೆಸರಿನಲ್ಲಿ ನಕಲಿ ರಾಯಭಾರಿ ಕಚೇರಿ; ಆರೋಪಿ ಬಂಧನ

Date:

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕವಿ ನಗರದಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಆರೋಪದಡಿ ಹರ್ಷವರ್ಧನ್‌ ಜೈನ್‌ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಬಂಧಿಸಿದೆ. ಜೈನ್‌, ವೆಸ್ಟ್‌ ಆರ್ಕ್ಟಿಕಾ, ಸಬೋರ್ಗಾ, ಪೊಲಿವಿಯಾ, ಮತ್ತು ಲೊಡೊನಿಯಾ ಎಂಬ ಅಸ್ತಿತ್ವದಲ್ಲಿ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿಯಾಗಿ ತನ್ನನ್ನು ಹೇಳಿಕೊಂಡು, ಬಾಡಿಗೆ ಮನೆಯಿಂದ ಈ ಅಕ್ರಮವನ್ನು ನಡೆಸುತ್ತಿದ್ದ.

ಪ್ರಾಥಮಿಕ ತನಿಖೆಯಲ್ಲಿ, ಜೈನ್‌ ವಿದೇಶದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಹಲವರನ್ನು ವಂಚಿಸಿರುವುದು ತಿಳಿದುಬಂದಿದೆ. ಅಲ್ಲದೆ, ಶೆಲ್‌ ಕಂಪನಿಗಳ ಮೂಲಕ ಹವಾಲಾ ದಂಧೆಯಲ್ಲಿ ಭಾಗಿಯಾಗಿರುವ ಶಂಕೆಯಿದೆ. ಜನರನ್ನು ಮೋಸಗೊಳಿಸಲು ಆತ, ಪ್ರಧಾನಮಂತ್ರಿ, ರಾಷ್ಟ್ರಪತಿ ಸೇರಿದಂತೆ ಗಣ್ಯರೊಂದಿಗಿನ ಮಾರ್ಫ್‌ ಮಾಡಿದ ಫೋಟೊಗಳನ್ನು ಬಳಸಿಕೊಂಡಿದ್ದಾನೆ. ಇದರ ಜೊತೆಗೆ, ನಕಲಿ ರಾಜತಾಂತ್ರಿಕ ನಂಬರ್‌ ಪ್ಲೇಟ್‌ಗಳನ್ನು ತನ್ನ ಐಷಾರಾಮಿ ವಾಹನಗಳಿಗೆ ಬಳಸುತ್ತಿದ್ದ.

ತನಿಖೆಯ ವೇಳೆ, ಜೈನ್‌ನಿಗೆ ವಿವಾದಿತ ದೇವಮಾನವ ಚಂದ್ರಸ್ವಾಮಿ ಮತ್ತು ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್‌ ಖಶೋಗ್ಗಿಯೊಂದಿಗೆ ಸಂಪರ್ಕವಿತ್ತು ಎಂಬುದು ಬಹಿರಂಗಗೊಂಡಿದೆ. ಇದಕ್ಕೂ ಮುನ್ನ 2011ರಲ್ಲಿ, ಆತನ ಮೇಲೆ ಅಕ್ರಮವಾಗಿ ಸ್ಯಾಟಲೈಟ್‌ ಫೋನ್‌ ಇಟ್ಟುಕೊಂಡಿದ್ದ ಆರೋಪದಡಿ ಕವಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ನಕಲಿ ನಂಬರ್‌ ಪ್ಲೇಟ್‌ ಅಂಟಿಸಿದ್ದ ವಾಹನಗಳು, 12 ಮೈಕ್ರೋನೇಷನ್ಸ್ ಎಂದು ಕರೆಯಲ್ಪಡುವ ನಕಲಿ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳು, ವಿದೇಶಾಂಗ ಸಚಿವಾಲಯದ ಸ್ಟ್ಯಾಂಪ್‌ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ರಬ್ಬರ್ ಸ್ಟ್ಯಾಂಪ್‌ಗಳು ಮತ್ತು ಎರಡು ನಕಲಿ ಪ್ರೆಸ್ ಕಾರ್ಡ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ.

ಇದರ ಜತೆಗೆ 44.7 ಲಕ್ಷ ರೂ. ನಗದು, ವಿದೇಶಿ ಕರೆನ್ಸಿ, ಹಲವು ಕಂಪನಿಗಳ ದಾಖಲೆಗಳು ಮತ್ತು 18 ನಕಲಿ ನಂಬರ್‌ ಪ್ಲೇಟ್‌ಗಳನ್ನು ಎಸ್‌ಟಿಎಫ್‌ ವಶಪಡಿಸಿಕೊಂಡಿದೆ. ಕವಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...