ಹಿಂದೂ – ಮುಸ್ಲಿಂ ದ್ವೇಷದ ಮಾತುಗಳಿಂದ ಹೊರಬರದ ಪ್ರಧಾನಿ: ಕಾಂಗ್ರೆಸ್ ವಾಗ್ದಾಳಿ

Date:

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ ಪ್ರತಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಕಷ್ಟಪಡುತ್ತಿದ್ದು, ಪ್ರಧಾನಿ ಮೋದಿ ತಮ್ಮ ಹಿಂದಿನ ‘ಅದೇ ಹಿಂದೂ-ಮುಸ್ಲಿಂ ಮಾತುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ತಿಳಿಸಿದ್ದಾರೆ.

ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಸುಪ್ರಿಯಾ ಅವರು, ಬಿಜೆಪಿ ನಿರಂತರವಾಗಿ ತನ್ನ ಮೂಲ ನೆಲೆ ಕಳೆದುಕೊಳ್ಳುತ್ತಿದ್ದು, ಪ್ರಧಾನಿಯ ಹೇಳಿಕೆಗಳು ಮುಸ್ಲಿಂ ಸಮುದಾಯದ ಬಗ್ಗೆಯೆ ಮರುಕಳಿಸುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪ್ರಣಾಳಿಕೆಯನ್ನು ವಿಸ್ತೃತವಾಗಿ ಚರ್ಚಿಸಿದ್ದು,ಇದು ದೇಶದ ಭವಿಷ್ಯದ ನೀಲನಕ್ಷೆ ಎಂದು ಸುಪ್ರಿಯಾ ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದತ್ತ ದೇಶ ದಾಪುಗಾಲು ಹಾಕುತ್ತಿಲ್ಲವೇ? ಅವರಿಗಾದದ್ದು ನಮಗಾಗುವುದಿಲ್ಲವೇ?

“10 ವರ್ಷ ಅಧಿಕಾರ ನಡೆಸಿದ ನಂತರ ಚುನಾವಣೆಗಳು ಹೊಸ್ತಿಲಲ್ಲಿ ಇರುವ ಸಂದರ್ಭದಲ್ಲಿ ತಮ್ಮ ಸಾಧನೆಯನ್ನು ಮತದಾರರಿಗೆ ತಿಳಿಸಲು ಪ್ರಧಾನಿ ಅವರಿಗೆ ನಡುಕವಾಗುತ್ತಿದೆ. ಇವರು ಮತ್ತೆ ಹಿಂದೂ-ಮುಸ್ಲಿಂ ಮಾತುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂದು ಸುಪ್ರಿಯಾ ಅವರು ಪ್ರಧಾನಿ ಅವರನ್ನು ತರಾಟೆಗೆ ತೆಗೆದುಕೊಂಡರು.

“ಕಾಂಗ್ರೆಸ್‌ನ ಪ್ರಣಾಳಿಕೆ ನ್ಯಾಯದ ಐದು ಆಧಾರಸ್ತಂಭಗಳ ಆಧಾರದ ಮೇಲಿರುವ ಧ್ವನಿಯಾಗಿದೆ.ಇದು ದೇಶದ ಜನರಿಗೆ ಅಳಿಸಲಾಗದ ಮುದ್ರೆಯಾಗಿದೆ. ಇದು ಭಾರತ್‌ ಜೋಡೋ ಯಾತ್ರೆ ಹಾಗೂ ಭಾರತ್‌ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ನಮ್ಮನ್ನು ಒಗ್ಗೂಡಿಸಿದ ಕೋಟ್ಯಂತರ ಜನರ ನಿರೀಕ್ಷೆಗಳು, ಭರವಸೆಗಳು ಹಾಗೂ ಸವಾಲುಗಳಾಗಿವೆ” ಎಂದು ಹೇಳಿದರು.

“ ಈ ಮುದ್ರೆಯು 10 ವರ್ಷದಲ್ಲಿ ಕಳೆದುಕೊಂಡ ಉತ್ಸಾಹವನ್ನು ಹೊಸ ಭರವಸೆಯೊಂದಿಗೆ ಉದಯಿಸುತ್ತದೆ. ಇದು ಯುವಕರ, ರೈತರ, ಮಹಿಳೆಯರ ಕಾರ್ಮಿಕರ ಮುದ್ರೆಯಾಗಿದ್ದು, ಈ ಮುದ್ರೆಯಿಂದ ಸಮಾಜದ ಅಂಚಿನಲ್ಲಿರುವ ಜನರು ಖಂಡಿತವಾಗಿಯು ಮುಂದೆ ಬರುವುದಲ್ಲದೆ ಹೆಚ್ಚಿನ ಪ್ರಾತಿನಿಧ್ಯ ಕಂಡುಕೊಳ್ಳಲಿದ್ದಾರೆ” ಎಂದು ಸುಪ್ರಿಯಾ ಶ್ರೀನಾಥೆ ತಿಳಿಸಿದರು.

ಕಾಂಗ್ರೆಸ್‌ ನ್ಯಾಯಪತ್ರವು ಮೋದಿ ಸರ್ಕಾರ ದೇಶದಲ್ಲಿ 10 ವರ್ಷ ವಿಧಿಸಿದ್ದ ಪ್ರತಿಯೊಬ್ಬರ ಸಮಸ್ಯೆಗೂ ಪರಿಹಾರ ಒದಗಿಸುತ್ತದೆ. ಈ ನ್ಯಾಯ ಪತ್ರ ಭಾರತದ ಜನರ ಧ್ವನಿ, ದೇಶದ ಧ್ವನಿ” ಎಂದು ಸುಪ್ರಿಯಾ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...