ಪ್ರಧಾನಿ ಮೋದಿ ಪ್ರವಾಸದ ವೇಳೆ ಭದ್ರತಾ ಲೋಪ ಪ್ರಕರಣ: 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ

Date:

ಪಂಜಾಬ್‌ನ ಫಿರೋಜ್‌ಪುರದಲ್ಲಿ 2022ರಲ್ಲಿ ಪ್ರಧಾನಿ ಮೋದಿ ಪ್ರಯಾಣದ ವೇಳೆ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಕೊಲೆಯತ್ನ ಆರೋಪದಲ್ಲಿ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಗುರುವಾರ ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಪ್ರತಿಭಟನಾ ನಿರತ ರೈತ ಕನ್ವಲ್ಜಿತ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ಫಿರೋಜ್‌ಪುರದ ನ್ಯಾಯಾಲಯ ತಿರಸ್ಕರಿಸಿದ ನಂತರ ಎಫ್ ಐಆರ್ ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 ಅಂದರೆ ಕೊಲೆ ಯತ್ನ ಆರೋಪಕ್ಕೆ ಸಂಬಂಧಿತ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿರುವುದು ತಿಳಿದು ಬಂದಿದೆ ಎಂದು ರೈತ ಸಂಘಟನೆಯ ನಾಯಕರು ತಿಳಿಸಿದ್ದಾರೆ.

2022ರ ಜನವರಿ 5ರಂದು ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದಾಗ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ 15 ರಿಂದ 20 ನಿಮಿಷಗಳ ಕಾಲ ಫ್ಲೈಓವರ್ ನಲ್ಲಿ ಸಿಲುಕಿಕೊಂಡಿದ್ದರು. ನಂತರ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಅರ್ಧದಿಂದ ಹಿಂತಿರುಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ʼಇಂದು ಮಲ್ಹೋತ್ರಾʼ ನೇತೃತ್ವದಲ್ಲಿ ಐವರು ಸದಸ್ಯರ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ನಂತರ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ರೈತ ಹೋರಾಟ | ಜನವರಿ 21ರಿಂದ ದೆಹಲಿ ಚಲೋ ಪುನರಾರಂಭ: ರೈತ ಸಂಘಟನೆಗಳ ಘೋಷಣೆ

ಆರಂಭದಲ್ಲಿ ಐಪಿಸಿಯ ಸೆಕ್ಷನ್ 283ರಡಿಯಲ್ಲಿ ಕುಲ್ ಗಢಿ ಪೊಲೀಸ್ ಠಾಣೆಯಲ್ಲಿ 150 ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಮೂವರು ಸದಸ್ಯರ ವಿಶೇಷ ತನಿಖಾ ತಂಡ ಈ ಕುರಿತು ತನಿಖೆ ನಡೆಸಿದ ನಂತರ,ಪೊಲೀಸರು ಎಫ್ ಐಆರ್ ನಲ್ಲಿ ಸೆಕ್ಷನ್ 307(ಕೊಲೆ ಯತ್ನ), 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ), 186 (ಕರ್ತವ್ಯಕ್ಕೆ ಅಡ್ಡಿ), 149 (ಕಾನೂನುಬಾಹಿರ ಸಭೆ),341 ಮತ್ತು ರಾಷ್ಟ್ರೀಯ ಹೆದ್ದಾರಿ ಕಾಯ್ದೆಯ ಸೆಕ್ಷನ್ 8ಬಿ ಯನ್ನು ಸೇರಿಸಿದ್ದಾರೆ ಎಂದು ರೈತರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಭಾರತಿ ಕಿಸಾನ್ ಯೂನಿಯನ್(ಕ್ರಾಂತಿಕಾರಿ) ಅಧ್ಯಕ್ಷ ಬಲದೇವ್ ಸಿಂಗ್ ಝಿರಾ, ಪ್ರತಿಭಟನಾಕಾರರಲ್ಲಿ ಓರ್ವರಾದ ಕನ್ವಲ್ಜಿತ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ಮಂಗಳವಾರ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಒತ್ತಡದಲ್ಲಿ ಕೆಲಸ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ. ಘಟನೆ ನಡೆದು ಮೂರು ವರ್ಷಗಳಾಗಿವೆ. ರೈತರು ವಾಸ್ತವವಾಗಿ ಪ್ರತಿಭಟನೆ ನಡೆಸಲು ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದರು, ಆದರೆ, ಪೊಲೀಸರು ಸೇತುವೆಯ ಬಳಿ ರೈತರನ್ನು ತಡೆದರು. ಪ್ರಧಾನಿ ಅದೇ ರಸ್ತೆಯ ಮೂಲಕ ಬರುತ್ತಿದ್ದಾರೆ ಎಂಬುದು ರೈತರಿಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...