ತ್ರಿವಳಿ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ, ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ; ಹಲವು ರೈಲುಗಳು ರದ್ದು

Date:

ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಸರಣಿ ಅಪಘಾತದ ದುರಂತ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸ್ಥಳೀಯ ಆಸ್ಪತ್ರೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ದುರಂತ ಉಂಟಾದ ಬಗ್ಗೆ ಪರಿಸ್ಥಿತಿಯ ಅವಲೋಕನದ ಬಗ್ಗೆ ರೈಲ್ವೆ ಇಲಾಖೆ ಸೇರಿದಂತೆ ಇತರ ಇಲಾಖೆಯೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ.

ಸದ್ಯ ಮಾಹಿತಿಯ ಪ್ರಕಾರ 288 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ನಡುವೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ನೆರವು ನೀಡಲು ಹಾಗೂ ಗಾಯಾಳುಗಳಿಗೆ ಸಹಾಯ ಮಾಡಲು ಭಾರತೀಯ ಸೇನೆಯನ್ನು ನಿಯೋಜಿಸಲಾಗಿದೆ. ಸೇನೆಯ ವೈದ್ಯಕೀಯ ಹಾಗೂ ಇಂಜಿನಿಯರಿಂಗ್‌ ತಂಡಗಳು ಆಂಬುಲೆನ್ಸ್ ಹಾಗೂ ಹಲವು ಸೇವಾ ತಂಡಗಳೊಂದಿಗೆ ಘಟನಾ ಸ್ಥಳಕ್ಕೆ ಶೀಘ್ರದಲ್ಲೇ ಆಗಮಿಸಿ ನೆರವು ಕಾರ್ಯ ಆರಂಭಿಸಲಿವೆ.

ಈ ಸುದ್ದಿ ಓದಿದ್ದೀರಾ? 300ಕ್ಕೂ ಹೆಚ್ಚು ಸಾವು, ತ್ರಿವಳಿ ರೈಲು ದುರಂತ ಸಂಭವಿಸಿದ್ದು ಹೇಗೆ? ರಾಜ್ಯದ 110 ಪ್ರಯಾಣಿಕರು ಸುರಕ್ಷಿತ

ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಒಡಿಶಾದ ಬಾಲಾಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಕೋಲ್ಕತಾದಿಂದ ಬರುತ್ತಿದ್ದ ಶಾಲಿಮಾರ್ – ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿ ತಪ್ಪುತ್ತದೆ. ಹಳಿ ತಪ್ಪಿದ ನಂತರ ಒಂದೇ ಹಳಿಯ ಮೇಲೆ ಹೋಗುತ್ತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ರೈಲು ಢಿಕ್ಕಿ ಹೊಡೆಯುತ್ತದೆ. ಢಿಕ್ಕಿ ಹೊಡೆದ ನಂತರ ಪಕ್ಕದ ಹಳಿ ಮೇಲೆ ಕೋರಮಂಡಲ್ ರೈಲಿನ ಬೋಗಿಗಳು ಬೀಳುತ್ತವೆ. ಆಗ ಇದೇ ಸಂದರ್ಭದಲ್ಲಿ ಬೋಗಿಗಳು ಬಿದ್ದ ಹಳಿಯ ಮೇಲೆ ಬಂದ ಯಶವಂತಪುರ – ಹೌರಾ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಇತ್ತೀಚಿನ ವರ್ಷಗಳಲ್ಲಿ ನಡೆದ ಅತಿದೊಡ್ಡ ರೈಲು ದುರಂತ ಇದಾಗಿದೆ ಎಂದು ಹೇಳಲಾಗಿದೆ.

49 ರೈಲುಗಳ ಸಂಚಾರ ರದ್ದು

ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಪರಿಣಾಮ ಸುಮಾರು 49 ರೈಲುಗಳ ಸಂಚಾರ ರದ್ದಾಗಿದೆ. 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು ತೆರವುಗೊಳಿಸಿ, ಹಳಿಗಳನ್ನು ಸರಿಪಡಿಸುವ ಕಾರ್ಯ ನಡೆಯಬೇಕಿದೆ. ಅಲ್ಲಿಯವರೆಗೂ ಈ ಮಾರ್ಗದಲ್ಲಿ ರೈಲುಗಳ ಓಡಾಟ ಸಾಧ್ಯವಿಲ್ಲ. ಈ ಹಿನ್ನೆಲೆ ಹಲವಾರು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಅಲ್ಲದೇ 10 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ತಿರುವನಂತಪುರಂ- ಕೋಲ್ಕತ್ತಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಾಫರ್ ಎಕ್ಸ್‌ಪ್ರೆಸ್ (20889) ರೈಲುಗಳು ರದ್ದಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...