ಸತ್ಯ ಹೇಳುತ್ತೇನೆಂದು ಪ್ರಧಾನಿ ಯಾವಾಗಲು ನನ್ನ ಮಾತುಗಳನ್ನು ತಿರುಚುತ್ತಾರೆ; ರಾಹುಲ್ ಗಾಂಧಿ

Date:

‘ಶಕ್ತಿ’ ವಿಷಯದ ಬಗ್ಗೆ ಹಿಂದೆ ನುಡಿದಿದ್ದ ತಮ್ಮ ಮಾತುಗಳನ್ನು ತಿರುಚಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಮೋದಿ ಅವರಿಗೆ ನನ್ನ ಮಾತು ಇಷ್ಟವಿಲ್ಲ. ನಾನು ಆಳವಾದ ಸತ್ಯವನ್ನು ಹೇಳುತ್ತೇನೆ ಎಂಬುದು ಅವರಿಗೆ ಗೊತ್ತಿರುವ ಕಾರಣ ಅವರು ಯಾವಾಗಲು ನನ್ನ ಮಾತುಗಳನ್ನು ಬೇರೆ ಬೇರೆ ರೀತಿಯಲ್ಲಿ ಬದಲಿಸಲು ಪ್ರಯತ್ನಿಸುತ್ತಾರೆ” ಎಂದು ತಿಳಿಸಿದ್ದಾರೆ.

‘ಶಕ್ತಿ’ಯನ್ನು ನಾನು ಉಲ್ಲೇಖಿಸಿದ್ದು,ಶಕ್ತಿಯ ಮುಖವಾಡ ಹಾಕಿಕೊಂಡಿರುವ ಮೋದಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎಂದು. ಇಂತಹ ಶಕ್ತಿಯು ಇಂದು ಭಾರತದ ತನಿಖಾ ಸಂಸ್ಥೆಗಳಾದ ಸಿಬಿಐ, ಐಟಿ, ಇಡಿ, ಚುನಾವಣಾ ಆಯೋಗ, ಮಾಧ್ಯಮ, ಭಾರತದ ಉದ್ಯಮ ಹಾಗೂ ಭಾರತದ ಸಾಂವಿಧಾನಿಕ ರಚನೆಯನ್ನು ತನ್ನ ಹಿಡಿತಗಳಿಂದ ಭಾರತದ ಧನಿಗಳನ್ನು ಸೆರೆ ಹಿಡಿದುಕೊಂಡಿದೆ ಎಂದು ರಾಹುಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಶಕ್ತಿಯಾದ ನರೇಂದ್ರ ಮೋದಿ ಕೆಲವು ಸಾವಿರ ರೂ.ಗಳ ಸಾಲವನ್ನು ತೀರಿಸದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಶ್ರೀಮಂತರ ಸಾವಿರಾರು ಕೋಟಿ ರೂ. ಸಾಲವನ್ನು ತೀರಿಸುತ್ತದೆ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

“ಇದೇ ಶಕ್ತಿಯು ಅಗ್ನಿವೀರ್‌ ಯೋಜನೆಯ ಮೂಲಕ ಭಾರತದ ಯುವಕರ ಧೈರ್ಯವನ್ನು ಕಸಿದು ಕೆಲವರಿಗೆ ಭಾರತದ ಬಂದರುಗಳು, ಭಾರತದ ವಿಮಾನ ನಿಲ್ದಾಣಗಳನ್ನು ಕೊಡುತ್ತದೆ. ಅದೇ ಶಕ್ತಿ ದಿನವಿಡಿ ಶ್ರೀಮಂತರ ಸೇವೆ ಮಾಡುತ್ತಿದ್ದರೆ, ಭಾರತದ ಮಾಧ್ಯಮಗಳು ಸತ್ಯವನ್ನು ತಿರುಚುತ್ತಿವೆ” ಎಂದು ಹೇಳಿದರು.

ನರೇಂದ್ರ ಮೋದಿ ಅವರು ಅದೇ ಶಕ್ತಿಯ ಗುಲಾಮರಾಗಿ ಬಡವರ ಮೇಲೆ ಜಿಎಸ್‌ಟಿ ವಿಧಿಸಿದ್ದಾರೆ. ಹಣದುಬ್ಬರದ ಮೇಲೆ ಅವರಿಗೆ ನಿಯಂತ್ರಣವಿಲ್ಲ. ಕೆಲವರ ಶಕ್ತಿ ಹೆಚ್ಚಿಸಲು ದೇಶದ ಸ್ವತ್ತನ್ನು ಹರಾಜುಗೊಳಿಸುತ್ತಿದ್ದಾರೆ ಎಂದು ಹೇಳಿದರು.

“ನಾನು ಆ ಶಕ್ತಿಯನ್ನು ಗುರುತಿಸಿದ್ದೇನೆ. ನರೇಂದ್ರ ಮೋದಿ ಕೂಡ ಆ ಶಕ್ತಿಯನ್ನು ಗುರುತ್ತಿಸಿದ್ದಾರೆ. ಅವರಿಗೆ ಯಾವುದೇ ರೀತಿಯ ಧಾರ್ಮಿಕ ಶಕ್ತಿಗಳಿಲ್ಲ. ಅವರದು ಅಧರ್ಮ, ಭ್ರಷ್ಟಾಚಾರ ಹಾಗೂ ಸುಳ್ಳು ಹೇಳುವ ಶಕ್ತಿ. ಆ ಕಾರಣಕ್ಕಾಗಿ ನಾನು ಯಾವಾಗಲು ಅವರ ವಿರುದ್ಧ ಧನಿ ಎತ್ತುತ್ತೇನೆ. ಇದರಿಂದ ಮೋದಿ ಹಾಗೂ ಅವರ ಯಂತ್ರ ಕೋಪಗೊಳ್ಳುತ್ತದೆ ಹಾಗೂ ಬೇಸರ ಮಾಡಿಕೊಳ್ಳುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಇಂಡಿಯಾ ಒಕ್ಕೂಟ ಅವರ ಪ್ರಣಾಳಿಕೆಗಳು ‘ಹಿಂದು ಶಕ್ತಿ’ಯನ್ನು ನಾಶಗೊಳಿಸಲು ಪ್ರಯತ್ನಿಸುತ್ತಿವೆ. ಭಾರತೀಯರೆಲ್ಲರೂ ಶಕ್ತಿಯ ರೂಪ. ನಾನು ಭಾರತ ಮಾತೆಯ ಶಕ್ತಿಯ ಆರಾಧಕ ಎಂದು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...