ಮೀಸಲಾತಿ ಕಿತ್ತುಕೊಳ್ಳಲು ಬಯಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಗಾಂಧಿ

Date:

ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯ ವಿರುದ್ಧವಾಗಿದ್ದು, ಜನರ ಮೀಸಲಾತಿಯನ್ನು ಕಿತ್ತುಕೊಳ್ಳಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

ತೆಲಂಗಾಣದ ಅದಿಲಾಬಾದ್‌ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವೆ ನಡೆಯುತ್ತಿದೆ. ಒಂದು ಸಂವಿಧಾನವನ್ನು ಉಳಿಸಲು ಬಯಸುವ ಕಾಂಗ್ರೆಸ್ ನಡುವೆ ಹಾಗೂ ಮತ್ತೊಂದು ಜನರ ಹಕ್ಕುಗಳನ್ನು ಕೊನೆಗೊಳಿಸುವ ಬಿಜೆಪಿ – ಆರ್‌ಎಸ್‌ಎಸ್‌ ಒಳಗೊಂಡ ಪಕ್ಷಗಳ ನಡುವೆ ಎಂದು ರಾಹುಲ್ ತಿಳಿಸಿದರು.

“ನರೇಂದ್ರ ಮೋದಿ ಅವರು ಮೀಸಲಾತಿ ವಿರುದ್ಧವಾಗಿದ್ದಾರೆ. ಅವರು ನಿಮ್ಮಿಂದ ಮೀಸಲಾತಿಗಳನ್ನು ಕಿತ್ತುಕೊಳ್ಳಲು ಬಯಸುತ್ತಾರೆ. ಮೀಸಲಾತಿಯನ್ನು ಶೇ.50 ರಷ್ಟು ಹೆಚ್ಚಿಸುವುದು ದೇಶದ ಅತೀ ದೊಡ್ಡ ಸವಾಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

“ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಮೀಸಲಾತಿಗಿರುವ ಶೇ.50ರ ಮಿತಿಯನ್ನು ತೆಗೆದುಹಾಕಲಿದೆ. ಆದರೆ ಬಿಜೆಪಿ ನಾಯಕರು ಮೀಸಲಾತಿಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಅಮೇಥಿ, ರಾಯ್‌ಬರೇಲಿಗೆ ಪ್ರಿಯಾಂಕಾ ಗಾಂಧಿ ಉಸ್ತುವಾರಿ

ರಾಯ್‌ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಸ್ತುವಾರಿ ವಹಿಸಿಕೊಂಡು ಪ್ರಚಾರ ನಡೆಸಲಿದ್ದಾರೆ. ಕೈ ಪಕ್ಷದ ಭದ್ರಕೋಟೆ ಹಾಗೂ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿರುವ ಇವೆರೆಡು ಕ್ಷೇತ್ರಗಳಲ್ಲಿ ಗೆಲುವು ಖಚಿತಪಡಿಸಿಕೊಳ್ಳಲು ಪಕ್ಷ ಮುಂದಾಗಿದೆ.

ಕೊನೇ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಇವೆರೆಡೂ ಕ್ಷೇತ್ರಗಳಿಗೆ ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಹಾಗೂ ಅಮೇಥಿಗೆ ಕಿಶೋರ್‌ ಲಾಲ್‌ ಶರ್ಮಾ ಅವರ ಹೆಸರನ್ನು ಪ್ರಕಟಿಸಲಾಯಿತು.

ರಾಯ್‌ ಬರೇಲಿಯಿಂದ ಕಳೆದ 2 ದಶಕಗಳಿಂದ ಸೋನಿಯಾ ಗಾಂಧಿ ಗೆಲುವು ಸಾಧಿಸಿದ್ದರೆ, 2004ರಿಂದ 2019ರವರೆಗೆ ಅಮೇಥಿಯಲ್ಲಿ ರಾಹುಲ್‌ ಗಾಂಧಿ ಜಯಗಳಿಸಿದ್ದರು. ಮತದಾನ ಮುಗಿಯುವವರೆಗೂ ಇವೆರೆಡೂ ಕ್ಷೇತ್ರಗಳಲ್ಲಿ ಉಳಿದುಕೊಳ್ಳಲು ಪ್ರಿಯಾಂಕಾ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...