ನಾಸಿಕ್‌ನಲ್ಲಿ ದೇವಸ್ಥಾನವನ್ನು ಸ್ವಚ್ಛಗೊಳಿಸಿದ ಪ್ರಧಾನಿ ಮೋದಿ

Date:

ಪ್ರಧಾನಿ ನರೇಂದ್ರ ಮೋದಿ ಮುಂಬೈನಲ್ಲಿ 21.8 ಕಿ.ಮೀ ಉದ್ದದ ಭಾರತದ ಅತೀ ದೊಡ್ಡ ಸಮುದ್ರ ಸೇತುವೆ ಉದ್ಘಾಟನೆಗೂ ಮುನ್ನ ನಾಸಿಕ್‌ನ ಕಲಾರಾಂ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

ಕಲಾರಾಂ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಸಂತ ಏಕನಾಥ್ ರಚಿಸಿದ ಮರಾಠಿ ಕವಿತೆ ಭಾವಾರ್ಥ ರಾಮಾಯಣವನ್ನು ಆಲಿಸಿದರು.

ಹಿಂದಿನ ದಿನ ನರೇಂದ್ರ ಮೋದಿ ನಾಸಿಕ್‌ನಲ್ಲಿ ಜನವರಿ 11 ರಂದು ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ನಾಸಿಕ್‌ನಲ್ಲಿನ ತಪೋವನ ಮೈದಾನದಲ್ಲಿ ನಡೆದ ರಾಷ್ಟ್ರೀಯ ಯುವ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೂ ಮುನ್ನ ದೇಶಾದ್ಯಂತವಿರುವ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಅಭಿಯಾನ ಹಮ್ಮಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

“ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ದಿನದಂದು ದೇಶಾದ್ಯಂತವಿರುವ ದೇಗುಲಗಳು ಹಾಗೂ ಪುಣ್ಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕೆಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಭಾರತವು ಯುವಕರಿಂದಾಗಿ ವಿಶ್ವದ ಮೊದಲ ಐದು ಆರ್ಥಿಕ ರಾಷ್ಟ್ರಗಳಲ್ಲಿ ಸ್ಥಾನ ಪಡೆದುಕೊಂಡಿದೆ. ಸ್ಟಾರ್ಟ್‌ಪ್ ಕಂಪನಿಗಳಲ್ಲಿಯು ಸಹ ಪ್ರಮುಖ ಮೂರು ಸ್ಥಾನಗಳಲ್ಲಿ ಒಂದಾಗಿದೆ. ಭಾರತವು ನೂತನ ಆವಿಷ್ಕಾರಗಳನ್ನು ಸಹ ಕೈಗೊಳ್ಳುತ್ತಿದೆ. ಪೆಟೆಂಟ್‌ ಪಡೆದುಕೊಳ್ಳುವುದರಲ್ಲಿಯೂ ಭಾರತವು ಮುಂದಿದೆ. ದೇಶದ ಇವೆಲ್ಲ ಸಾಧನೆಗಳ ಹಿಂದೆ ಯುವಕರಿದ್ದಾರೆ. ಈ ಕಾರಣದಿಂದ ಅಮೃತ ಕಾಲ ದೇಶದ ಯುವಕರಿಗೆ ಸುವರ್ಣಯುಗ” ಎಂದು ಮೋದಿ ಬಣ್ಣಿಸಿದರು.

“ಇಂದು ದೇಶದ ಯುವಶಕ್ತಿಯ ದಿನ. ಗುಲಾಮಗಿರಿ ದಿನಗಳಿಂದ ದೇಶಕ್ಕೆ ಹೊಸ ಶಕ್ತಿ ತುಂಬಿದ ಮಹಾನ್‌ ನಾಯಕನಿಗೆ ಈ ದಿನವನ್ನು ಸಮರ್ಪಿಸಲಾಗಿದೆ. ನಾನು ಆ ಮಹಾನ್ ನಾಯಕ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕಾಗಿ ಇಲ್ಲಿಗೆ ಆಗಮಿಸಿರುವುದಕ್ಕೆ ಸಂತೋಷವಾಗಿದೆ. ರಾಷ್ಟ್ರೀಯ ಯುವ ದಿನಕ್ಕಾಗಿ ನಾನು ಶುಭ ಕೋರುತ್ತಾನೆ. ಇಂದು ಭಾರತದ ನಾರಿ ಶಕ್ತಿಯ ಸಂಕೇತವಾದ ರಾಜ ಮಾತೆ ಜೀಜಾ ಬಾಯಿ ಅವರ ಜನ್ಮ ಮಹೋತ್ಸವ ದಿನವಾಗಿದೆ” ಎಂದು ಪ್ರಧಾನಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...