ಕೇಂದ್ರದ ಒತ್ತಡಕ್ಕೆ ಮಣಿದು ಪಿಎಂಶ್ರೀ ಯೋಜನೆಗೆ ಕೇರಳ ಸರ್ಕಾರ ಸಹಿ: ಸಿಪಿಐ ಆರೋಪ

Date:

ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರವು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಧಾನ ಮಂತ್ರಿ ಶ್ರೀ (PM-SHRI) ಯೋಜನೆಗೆ ಸಹಿ ಹಾಕಿರುವುದನ್ನು ಸಿಪಿಐ ತೀವ್ರವಾಗಿ ಖಂಡಿಸಿದೆ.

ಈ ನಿರ್ಧಾರವು ಎಲ್‌ಡಿಎಫ್ ಒಕ್ಕೂಟದ ಶಿಷ್ಟಾಚಾರವನ್ನು ಉಲ್ಲಂಘಿಸಿರುವುದಷ್ಟೇ ಅಲ್ಲದೆ, ಎಡಪಂಥೀಯ ನೀತಿ ಮತ್ತು ಸಿದ್ಧಾಂತಗಳಿಗೂ ವಿರುದ್ಧವಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರದ ಒತ್ತಾಯಕ್ಕೆ ಮಣಿದು, ರಾಷ್ಟ್ರೀಯ ಶಿಕ್ಷಣ ನೀತಿ (NEP)ಗೆ ಸಂಬಂಧಿಸಿದ ಆರ್‌ಎಸ್‌ಎಸ್ ಪ್ರೇರಿತ ಮತ್ತು ರಾಜಕೀಯ ಉದ್ದೇಶ ಹೊಂದಿರುವ ಯೋಜನೆಗೆ ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಆರೋಪಿಸಿದ್ದಾರೆ

ಎರ್ನಾಕುಲಂನಲ್ಲಿ ಮಾತನಾಡಿದ ಅವರು, ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು, ಎಡಪಂಥೀಯ ಬಲಗಳನ್ನು ದುರ್ಬಲಗೊಳಿಸುವ ರೀತಿಯಲ್ಲಿ ವರ್ತಿಸಿದ್ದಾರೆ. ಈ ಕ್ರಮವು ಕೇರಳದ ಶಿಕ್ಷಣ ನೀತಿಗೆ ಮತ್ತು ರಾಜ್ಯದ ಪ್ರಜಾಸತ್ತಾತ್ಮಕ ಪರಂಪರೆಗೆ ಧಕ್ಕೆ ಉಂಟುಮಾಡುತ್ತದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣವು ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯವಾಗಿದ್ದು, ಕೇಂದ್ರದ ಸರ್ವಶಿಕ್ಷಾ ಅಭಿಯಾನ (SSA) ನಿಧಿಗಳು ರಾಜ್ಯಗಳ ಹಕ್ಕಾಗಿವೆ. ಈ ನಿಧಿಗಳು ಕೇಂದ್ರದ ದಾನವಲ್ಲ, ರಾಜ್ಯಗಳ ಹಕ್ಕು. ರಾಜ್ಯಗಳು ಕೇಂದ್ರದ ತೆರಿಗೆ ವಿಭಾಗದಲ್ಲಿ ಗಣನೀಯ ಕೊಡುಗೆ ನೀಡುತ್ತವೆ. ಎಸ್‌ಎಸ್‌ಎ ನಿಧಿಗಳನ್ನು ಪಿಎಂಶ್ರೀ ಮತ್ತು ಎನ್‌ಇಪಿಗೆ ಸಂಬಂಧಿಸುವುದು ಒಕ್ಕೂಟ ವಿರೋಧಿ ಧೋರಣೆಯಾಗಿದೆ” ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

“ಇದು ಕೇವಲ ಆಡಳಿತಾತ್ಮಕ ವಿಷಯವಲ್ಲ, ತತ್ವಾಧಾರಿತ ಹೋರಾಟವೂ ಆಗಿದೆ. ಎನ್‌ಇಪಿ ಮತ್ತು ಪಿಎಂ-ಶ್ರೀ ಯೋಜನೆಗಳು ಶಿಕ್ಷಣವನ್ನು ರಾಷ್ಟ್ರೀಯತೆಗೊಳಿಸಲು ಪ್ರಯತ್ನಿಸುತ್ತವೆ ಎಂದು ವಿ.ಡಿ. ಸತೀಶನ್ ಹೇಳಿದರು.

“ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಸಿಪಿಐ ಹಾಗೂ ಆರ್‌ಜೆಡಿಯಂತಹ ಮೈತ್ರಿ ಪಕ್ಷಗಳ ಆಕ್ಷೇಪಗಳನ್ನು ಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಇದು ಎಲ್‌ಡಿಎಫ್ ಒಳಗಿನ ಅಸಮಾಧಾನವನ್ನು ಹೆಚ್ಚಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ವಿಜಯನ್ ಅವರು ಕ್ಯಾಬಿನೆಟ್‌ನಲ್ಲಿ ಈ ವಿಷಯವನ್ನು ಚರ್ಚಿಸದೆ, ಮೈತ್ರಿ ಪಕ್ಷಗಳ ಅಭಿಪ್ರಾಯವನ್ನೂ ಕೇಳದೆ ನಿರ್ಧಾರ ಕೈಗೊಂಡಿರುವುದನ್ನು ವಿ.ಡಿ. ಸತೀಶನ್ ತೀವ್ರವಾಗಿ ಖಂಡಿಸಿದರು.

“ರಾಜಸ್ಥಾನ, ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಪಿಎಂ-ಶ್ರೀ ಅಥವಾ ಎನ್‌ಇಪಿ ಯೋಜನೆಗೆ ಸಹಿ ಹಾಕದೆ, ಎಸ್‌ಎಸ್‌ಎ ನಿಧಿಗಳನ್ನು ಪಡೆದಿವೆ. ಅಂದರೆ, ಕೇಂದ್ರದ ಯೋಜನೆಗೆ ಒಪ್ಪಿಕೊಳ್ಳದೆಯೂ ನಿಧಿಗಳನ್ನು ಪಡೆಯುವ ಮಾರ್ಗಗಳಿವೆ. ಆದರೆ ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರವು ಆ ಮಾರ್ಗವನ್ನು ಅನುಸರಿಸದೆ, ಕೇಂದ್ರದ ಮುಂದೆ ಶರಣಾಗಿದೆ ಎಂದು ಸತೀಶನ್ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...