ಚುನಾವಣಾ ಪ್ರಚಾರದಲ್ಲಿ ಪ್ರಧಾನಿಯ ಕಚ್ಚತೀವಿನ ವಿವಾದಿತ ಹೇಳಿಕೆ ಅತ್ಯಂತ ಬೇಜವಾಬ್ದಾರಿ: ಕಾಂಗ್ರೆಸ್

Date:

ಲೋಕಸಭೆ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ ಕಚ್ಚತೀವು ವಿಷಯವನ್ನು ವಿವಾದವನ್ನಾಗಿಸಿರುವುದರ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಇದರಿಂದ ಭಾರತ ಹಾಗೂ ಶ್ರೀಲಂಕಾ ನಡುವಿನ ಸಂಬಂಧ ಹಳಿತಪ್ಪುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಪ್ರಧಾನಿ ಹಾಗೂ ಅವರ ಸಹೋದ್ಯೋಗಿಗಳು ನೆರೆಯ ದೇಶದೊಂದಿಗೆ ದೊಡ್ಡ ಭಯ ಸೃಷ್ಟಿಸುತ್ತಿರುವುದಕ್ಕೆ ಕ್ಷಮೆಯಾಚಿಸುತ್ತೀರಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ವಿವಾದವನ್ನು ಕೆದಕಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಇತಿಹಾಸವನ್ನು ವಿರೂಪಗೊಳಿಸುವುದಾಗಿದೆ ಎಂದು ಜೈರಾಮ್ ರಮೇಶ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನಲ್ಲಿ ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ವಿದೇಶಾಂಗ ಸಚಿವರಾಗಿದ್ದ ಎಸ್‌ ಜೈಶಂಕರ್‌ ಅವರು ಕಚ್ಚತೀವು ಪ್ರದೇಶದ ಬಗ್ಗೆ ಕಾಂಗ್ರೆಸ್‌ನ ಮಾಜಿ ಪ್ರಧಾನಿಗಳ ಅಸಡ್ಡೆ ಪ್ರದರ್ಶಿಸಿ ಭಾರತೀಯ ಮೀನುಗಾರರ ಹಕ್ಕುಗಳನ್ನು ಬಿಟ್ಟುಕೊಟ್ಟರು ಎಂದು ಹೇಳಿದ್ದರು.

“ ಚುನಾವಣಾ ಪ್ರಚಾರದಲ್ಲಿ ಮೂರನೇ ಬಾರಿ ಪ್ರಧಾನಿಯಾಗುತ್ತಿರುವ ಹಾಗೂ ತಮಿಳುನಾಡಿನ ಅವರ ಬಿಜೆಪಿ ಸಹೋದ್ಯೋಗಿಗಳು ಸೃಷ್ಟಿಸಿರುವ ಕಚ್ಚತೀವು ಸಮಸ್ಯೆಯನ್ನೆ ನೆನಪಿಸಿಕೊಳ್ಳಿ. ಇದೊಂದು ಅತ್ಯಂತ ಬೇಜವಾಬ್ದಾರಿ ಹಾಗೂ ಇತಿಹಾರವನ್ನು ಹಾಳುಮಾಡುವುದಾಗಿದೆ” ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಬಿಜೆಪಿ ನಾಯಕರು ಈ ವಿಷಯದಲ್ಲಿ ಇತಿಹಾಸವನ್ನು ತಿರುಚಿದ್ದಾರೆ. 1974ರಲ್ಲಿ ಕಚ್ಚತೀವು ಶ್ರೀಲಂಕಾದ ಭಾಗವಾಯಿತು. ಅದೇ ವರ್ಷ ಇಂದಿರಾ ಗಾಂಧಿ ಹಾಗೂ ಸಿರಿಮಾ ಬಂಡಾರನಾಯಕೆ ಅವರು ಒಪ್ಪಂದ ಮಾಡಿಕೊಂಡು ಶ್ರೀಲಂಕಾದಿಂದ ಭಾರತಕ್ಕೆ 6 ಲಕ್ಷ ತಮಿಳರನ್ನು ವಾಪಸ್ ಕರೆಸಿಕೊಳ್ಳಲಾಗಿತ್ತು. ಒಂದೇ ನಡೆಯಲ್ಲಿ ಪ್ರಧಾನಿ ಇಂದಿರಾ ಗಾಂಧಿ ಅವರು ಮಾನವ ಹಕ್ಕುಗಳ ರಕ್ಷಣೆ ಹಾಗೂ ಕಷ್ಟದಲ್ಲಿದ್ದ 6 ಲಕ್ಷ ಜನರ ಘನತೆಯನ್ನು ಎತ್ತಿಹಿಡಿದಿದ್ದರು ಎಂದು ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

2015ರಲ್ಲಿ ಮೋದಿ ಸರ್ಕಾರ ಬಾಂಗ್ಲಾದೇಶದೊಂದಿಗೆ ಭೂಗಡಿ ಒಪ್ಪಂದ ಮಾಡಿಕೊಂಡು ಭಾರತದ 17,161 ಎಕರೆಗ ಜಾಗವನ್ನು ನೀಡಿ ನೆರೆಯ ದೇಶದ 7110 ಎಕರೆ ಭೂಮಿಯನ್ನು ಪಡೆದಿತ್ತು. ಇದರ ಪರಿಣಾಮವಾಗಿ ಭಾರತ ಭೂಪ್ರದೇಶದ 10,051 ಭೂಪ್ರದೇಶ ಕುಸಿದಿತ್ತು. ಕಾಂಗ್ರೆಸ್ ಆ ಸಂದರ್ಭದಲ್ಲಿ ಪ್ರಧಾನಿ ಮೇಲೆ ಆರೋಪ ಮಾಡುವುದಕ್ಕಿಂತ ಸಂಸತ್ತಿನ ಎರಡೂ ಸದನಗಳಲ್ಲಿ ಬೆಂಬಲ ವ್ಯಕ್ತಪಡಿಸಿತ್ತು ಎಂದು ಪಕ್ಷದ ನಡೆಯನ್ನು ಜೈರಾಮ್‌ ರಮೇಶ್ ಶ್ಲಾಘಿಸಿದರು.

ಕಳೆದ ಕೆಲವು ವರ್ಷಗಳಿಂದ ಚೀನಾದ ಸೇನೆ ಭಾರತದ ಭೂಗಡಿಯನ್ನು ದೊಡ್ಡಮಟ್ಟದಲ್ಲಿ ವಶಪಡಿಸಿಕೊಳ್ಳುತ್ತಿರುವುದು ದೇಶದ ಸಮಗ್ರತೆಗೆ ನಿಜವಾದ ಬೆದರಿಕೆಯಾಗಿದೆ. ಪ್ರಧಾನಿ ಅಧಿಕಾರಕ್ಕೆ ಬಂದ ನಂತರ ತಮ್ಮ ಬಲ ಪ್ರದರ್ಶಿಸುವ ಬದಲು 2020ರ ಜೂನ್‌ 19ರಂದು ಚೀನಾಗೆ ಕ್ಲೀನ್‌ ಚಿಟ್‌ ನೀಡಿದಲ್ಲದೆ,ಒಬ್ಬ ಚೀನಿ ಯೋಧನು ಭಾರತದ ಗಡಿಯನ್ನು ಪ್ರವೇಶಿಸಿಲ್ಲ ಎಂದು ಹೇಳಿದ್ದರು. ಸ್ವತಃ ತಮ್ಮ ಪಕ್ಷದ ಸಂಸದರು ಅತಿಕ್ರಮಣದ ಬಗ್ಗೆ ದೃಢೀಕರಿಸಿದ್ದರೂ ಒಪ್ಪುವುದಕ್ಕೆ ತಯಾರಿರಲಿಲ್ಲ ಎಂದು ಜೈರಾಮ್‌ ರಮೇಶ್‌ ಪ್ರಧಾನಿಯ ಬಗ್ಗೆ ವಾಗ್ಧಾಳಿ ನಡೆಸಿದ್ದಾರೆ.

ಭಾರತದ ಭದ್ರತೆಯ ಬಗ್ಗೆ ತಮ್ಮ ಸ್ವಂತ ಕಳಪೆ ದಾಖಲೆಯ ಬಗ್ಗೆ ಪ್ರಧಾನಿಗೆ ಉತ್ತರ ಕೊಡಲು ಸಾಧ್ಯವಾಗಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಶೂನ್ಯ ಪ್ರದರ್ಶನ ದಾಖಲಿಸಿರುವುದರಿಂದ ಪ್ರಧಾನಿ ಹಾಗೂ ಆತನ ಪಕ್ಷದ ಹೊಗಳುಭಟ್ಟರು ಹತಾಶರಾಗಿದ್ದಾರೆ ಎಂದು ಜೈರಾಮ್‌ ರಮೇಶ್ ಹೇಳಿದರು.

ಪ್ರಧಾನಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮ ಸಿಂಘೆ ಆಗಮಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...