ಪ್ರಧಾನಿ ಮೌನ ದೇಶಕ್ಕೆ ಅಪಾಯಕಾರಿ: ಆಪ್ ನಾಯಕ ಮನೀಶ್ ಸಿಸೋಡಿಯಾ

Date:

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವು ಭಾರತದ ಹೊಸ್ತಿಲಿಗೆ ಬಂದು ತಲುಪಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದು ದೇಶಕ್ಕೆ “ಅಪಾಯಕಾರಿ ಸಂಕೇತ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜಾಗತಿಕ ಆತಂಕ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಪ್ರಧಾನಿಯ ನಿಲುವು ಭಾರತದ ಇಂಧನ ಸುರಕ್ಷತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಒಂದು ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದರು. ಆ ಒಪ್ಪಂದದಲ್ಲಿ ಅಮೆರಿಕ ಹೇರಿದ ಮುಖ್ಯ ಷರತ್ತನ್ನು ಮೋದಿ ಸ್ವೀಕರಿಸಿದ್ದರು. ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದಿಲ್ಲ ಎಂಬುದು. ಇದು ಕೇವಲ ರಾಜತಾಂತ್ರಿಕ ನಿರ್ಧಾರವಲ್ಲ; ದೇಶದ ಇಂಧನ ಸುರಕ್ಷತೆಗೆ ನೇರ ದಾಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ 60 ಲಕ್ಷ ರೂ. ಮೌಲ್ಯದ 28 ಟನ್ ಗೋಮಾಂಸ ವಶ: ರಫ್ತು ಜಾಲದ ಹಿಂದೆ ನಿತಿನ್ ಗಡ್ಕರಿ ಪುತ್ರನ ನಂಟು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಲಂಕಾ ತೀರದ ಬಳಿ ಭಾರತದ ‘ಮಿಲನ್’ ಸೇನಾ ವ್ಯಾಯಾಮದಲ್ಲಿ ಭಾಗವಹಿಸಿ ಮರಳುತ್ತಿದ್ದಾಗ ಅಮೆರಿಕ ಇರಾನ್‌ನ ಯುದ್ಧನೌಕೆಯೊಂದನ್ನು ಮುಳುಗಿಸಿದ ಘಟನೆಯನ್ನು ಉಲ್ಲೇಖಿಸಿ, “ಅಮೆರಿಕ ಈ ಯುದ್ಧವನ್ನು ಭಾರತದ ಹೊಸ್ತಿಲಿಗೆ ತಂದಿದೆ. ಘಟನೆಯ 24 ಗಂಟೆಗಳ ಬಳಿಕವೂ ಪ್ರಧಾನಿಯಿಂದ ಒಂದು ಮಾತೂ ಬಂದಿಲ್ಲ. ಈ ಮೌನ ಯಾರ ಹಿತಕ್ಕೆ ಸಹಾಯಕ?” ಎಂದು ಪ್ರಶ್ನಿಸಿದ್ದಾರೆ.

ಭಾರತದ ಗಡಿಯ ಸಮೀಪ ಇತರ ದೇಶಗಳು ಯುದ್ಧ ನಡೆಸುತ್ತಿರುವಾಗ ಈ ಮೌನವು ಜಗತ್ತಿಗೆ ಯಾವ ಸಂದೇಶ ನೀಡುತ್ತಿದೆ? ರಷ್ಯಾ ತೈಲ ಆಮದು ನಿಲ್ಲಿಸಿ, ಈಗ ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವಾಗ ಭಾರತದ ತೈಲ ಪೂರೈಕೆ ಹೇಗೆ ಸ್ಥಿರವಾಗಿರುತ್ತದೆ? ಇಂಥ ರಾಜತಾಂತ್ರಿಕ ಕ್ರಮಗಳಿಂದ ದೇಶದಲ್ಲಿ ಪೆಟ್ರೋಲ್-ಡೀಸಲ್ ಬೆಲೆಗಳ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆ ಇದೆಯೇ? ಎಂದು ಮನೀಶ್ ಸಿಸೋಡಿಯಾ ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...