ಪಿಎನ್‌ಬಿ ವಂಚನೆ ಪ್ರಕರಣ | ಮೆಹುಲ್ ಚೋಕ್ಸಿ ಮಗನೂ ಅಕ್ರಮ ಹಣ ವರ್ಗಾವಣೆಯಲ್ಲಿ ‘ಸಕ್ರಿಯ’ ಭಾಗಿ: ಇಡಿ

Date:

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದಲ್ಲಿ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ತನಿಖೆ ಪ್ರಾರಂಭವಾಗಿ ಸುಮಾರು ಎಂಟು ವರ್ಷಗಳು ಕಳೆದಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಇದೀಗ, ಚೋಕ್ಸಿ ಅವರ ಮಗ ರೋಹನ್ ಚೋಕ್ಸಿ ಕೂಡ ಅಕ್ರಮ ಹಣ ವರ್ಗಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಹೇಳಿದೆ. ದೆಹಲಿಯ ವಿಚಾರಣಾ ನ್ಯಾಯಮಂಡಳಿ ಎದುರು ಹೇಳಿಕೆ ದಾಖಲಿಸಿದೆ.

ಆದಾಗ್ಯೂ, ರೋಹನ್ ಚೋಕ್ಸಿ ಅವರ ಹೆಸರು ಸಿಬಿಐ ಅಥವಾ ಇಡಿ ನೋಂದಾಯಿಸಿರುವ ಯಾವುದೇ ಎಫ್‌ಐಆರ್‌ನಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೆ, ಯಾವುದೇ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿಲ್ಲ ಎಂದು ತಿಳಿದುಬಂದಿದೆ.

ನ್ಯಾಯಮಂಡಳಿಯ ಮುಂದೆ ತನ್ನ ಲಿಖಿತ ಹೇಳಿಕೆ ಸಲ್ಲಿಸಿರುವ ಇಡಿ, “ಮೆಹುಲ್ ಚೋಕ್ಸಿ ಕಾಗದದ ಮೇಲೆ ಮಾತ್ರ ಅಸ್ತಿತ್ವದಲ್ಲಿದ್ದ ಹಲವಾರು ಕಂಪನಿಗಳಿಗೆ ನಿರ್ದೇಶಕರಾಗಿದ್ದರು. ಅವರ ಈ ಶೆಲ್ ಕಂಪನಿಗಳನ್ನು ಕಾಲ್ಪನಿಕ ವಹಿವಾಟುಗಳ ತೋರಿಕೆಗಾಗಿ ಮತ್ತು ಅಕ್ರಮ ಆದಾಯವನ್ನು ವರ್ಗಾವಣೆ ಮಾಡುವುದಕ್ಕಾಗಿ ಸ್ಥಾಪಿಸಲಾಗಿದೆ. ಈ ಕಂಪನಿಗಳು ಯಾವುದೇ ನಿಜವಾದ ಖರೀದಿ ಅಥವಾ ಸರಕುಗಳ ಮಾರಾಟ ನಡೆಸಿಲ್ಲ” ಎಂದು ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆಹುಲ್ ಚೋಕ್ಸಿ ನಿರ್ದೇಶಕರಾಗಿರುವ ‘ಲಸ್ಟರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್’ ಎಂಬ ಮತ್ತೊಂದು ಕಂಪನಿಯಲ್ಲಿ ರೋಹನ್ ಚೋಕ್ಸಿ 99.99%ರಷ್ಟು ಷೇರುಗಳನ್ನು ಹೊಂದಿದ್ದಾರೆ. ಈ ಕಂಪನಿಯನ್ನು ವಿದೇಶಕ್ಕೆ ಹಣವನ್ನು ರವಾನಿಸಲು ಬಳಸಲಾಗಿದೆ” ಎಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಹೇಳಿಕೊಂಡಿದೆ.

ED ಪ್ರಕಾರ, ಏಷ್ಯನ್ ಡೈಮಂಡ್ ಆ್ಯಂಡ್‌ ಜ್ಯುವೆಲ್ಲರಿ ಎಫ್‌ಝಡ್‌ಇನಿಂದ ಸಿಂಗಾಪುರ ಮೂಲದ ಮೆರ್ಲಿನ್ ಲಕ್ಸರಿ ಗ್ರೂಪ್ ಪ್ರೈವೇಟ್ ಲಿಮಿಟೆಡ್‌ಗೆ 1,27,500 ಅಮೆರಿಕನ್ ಡಾಲರ್‌ (ಸುಮಾರು 91.6 ಲಕ್ಷ ರೂ.) ಮೊತ್ತವನ್ನು ವರ್ಗಾಯಿಸಲಾಗಿದೆ. ಏಷ್ಯನ್ ಡೈಮಂಡ್ ಆ್ಯಂಡ್‌ ಜ್ಯುವೆಲ್ಲರಿ ಎಫ್‌ಝಡ್‌ಇ ಕಂಪನಿಯಿಂದ ಬಂದ ಅಕ್ರಮ ಆದಾಯವನ್ನು ನೇರವಾಗಿ ಈ ಕಂಪನಿಗೆ ವರ್ಗಾಯಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಭಾರತದಲ್ಲಿ ದ್ವೇಷವೆಂಬುದು ಹೇಗೆಲ್ಲ ಅಧಿಕಾರಸ್ಥರ ವ್ಯಾಕರಣ ಆಗಿ ಹೋಯಿತು!

“ಸಿಂಗಾಪುರ ಮೂಲದ ಮೆರ್ಲಿನ್ ಲಕ್ಸರಿ ಗ್ರೂಪ್ ಕೂಡ ಮೆಹುಲ್ ಚೋಕ್ಸಿಯ ನಿಯಂತ್ರಣದಲ್ಲಿದೆ. ಅದು ಲಸ್ಟರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಕಾರ್ಯನಿರ್ವಹಿಸುತ್ತಿದೆ. ಅದೇ ಕಂಪನಿಯಲ್ಲಿ ರೋಹನ್ ಚೋಕ್ಸಿ 99.99%ರಷ್ಟು ಪಾಲನ್ನು ಹೊಂದಿರುವುದರಿಂದ, ಅವರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಇಡಿ ವಾದಿಸಿದೆ.

ದಾಖಲೆಯಲ್ಲಿರುವ ಎಲ್ಲ ಸಂಗತಿಗಳು ಮತ್ತು ಪುರಾವೆಗಳು ರೋಹನ್ ಚೋಕ್ಸಿ ತನ್ನ ತಂದೆಯೊಂದಿಗೆ ಅಕ್ರಮ ಹಣ ವರ್ಗಾವಣೆಯ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ಈ ಆಧಾರದ ಮೇಲೆ, ರೋಹನ್ ಚೋಕ್ಸಿಗೆ ಸಂಬಂಧಿಸಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತನಿಖಾ ಸಂಸ್ಥೆ ಸಮರ್ಥಿಸಿಕೊಂಡಿದೆ.

ಪಿಎನ್‌ಬಿ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಪ್ರಮುಖ ಆರೋಪಿಗಳಾಗಿದ್ದು, ಅವರ ವಿರುದ್ಧ ಸಿಬಿಐ ಮತ್ತು ಇಡಿ ಎರಡೂ ತನಿಖೆ ನಡೆಸುತ್ತಿವೆ. ಇವರಿಬ್ಬರೂ ಮುಂಬೈನಲ್ಲಿರುವ ಪಿಎನ್‌ಬಿ ಬ್ರಾಡಿ ಹೌಸ್ ಶಾಖೆಯಲ್ಲಿ ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ಬ್ಯಾಂಕ್‌ನಿಂದ 13,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಸಾಲ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ಬೆಳಕಿಗೆ ಬರುವ ಸಮಯದಲ್ಲೇ 2018ರ ಜನವರಿಯಲ್ಲಿ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...