ದರ ನಿಗದಿ ಸೂತ್ರ ಪರಿಷ್ಕರಣೆ; ಪಿಎನ್‌ಜಿ ಮತ್ತು ಸಿಎನ್‌ಜಿ ದರ ಶೇ 10ರಷ್ಟು ಇಳಿಕೆ

Date:

  • ಹೊಸ ಸೂತ್ರದಂತೆ ಪಿಎನ್‌ಜಿ ಮತ್ತು ಸಿಎನ್‌ಜಿ ದರ ಪ್ರತಿ ತಿಂಗಳು ಪರಿಷ್ಕರಣೆ
  • ನೂತನ ದರಗಳಂತೆ ಇಂಧನಗಳ ಬೆಲೆ ಗರಿಷ್ಠ ಶೇ 11ರಷ್ಟು ಇಳಿಕೆ ನಿರೀಕ್ಷೆ

ಯಾವುದೇ ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಿಎನ್‌ಜಿ- ಪಿಎನ್‌ಜಿ ದರಗಳನ್ನು ಇಳಿಸುವುದು ಮತ್ತು ಚುನಾವಣೆ ಮುಗಿದ ನಂತರ ಏರಿಸುವುದು ಇತ್ತೀಚೆಗಿನ ವರ್ಷದಲ್ಲಿ ಸಾಮಾನ್ಯವಾಗುತ್ತಿದ್ದು, ಇದೀಗ ಕರ್ನಾಟಕದ ಚುನಾವಣೆಯ ಹೊಸ್ತಿಲಲ್ಲಿರುವಾಗ ನೈಸರ್ಗಿಕ ಅನಿಲದ ದರ ನಿಗದಿಗೆ ಹೊಸ ಮಾನದಂಡ ಅನುಸರಿಸಲು ಕೆಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಪಿಎನ್‌ಜಿ ಮತ್ತು ಸಿಎನ್‌ಜಿ ದರ ಶೇ. 10ರಷ್ಟು ಇಳಿಯಲಿದೆ.

ನೈಸರ್ಗಿಕ ಅನಿಲದ ದರ ನಿಗದಿ ಸೂತ್ರ ಬದಲಾವಣೆಗೆ ಹಾಗೂ ದರ ನಿಗದಿಗೆ ಮಿತಿ ನಿಗದಿಪಡಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ (ಏಪ್ರಿಲ್ 6) ಅನುಮೋದನೆ ನೀಡಿದೆ.

ಇದರಿಂದ ಗೃಹ ಬಳಕೆಯ ಪಿಎನ್‌ಜಿ ಮತ್ತು ವಾಹನಗಳಿಗೆ ಬಳಸುವ ಸಿಎನ್‌ಜಿ ತೈಲದ ದರವು ಶೇ 10ರವರೆಗೂ ಕಡಿಮೆಯಾಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಸೂತ್ರದಂತೆ ಈ ಇಂಧನಗಳ ದರವನ್ನು ಈಗಿನಂತೆ ದ್ವೈವಾರ್ಷಿಕದ ಬದಲಿಗೆ ಪ್ರತಿ ತಿಂಗಳು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು.

ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಪುರಿ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬೆಲೆ ಏರಿಳಿತಗಳಿಂದ ಭಾರತದ ಗ್ರಾಹಕರನ್ನು ರಕ್ಷಿಸಲು ಇದು ನೆರವಾಗಲಿದೆ. ಹೊಸ ಮಾರ್ಗದರ್ಶಿ ಸೂತ್ರಗಳಿಗೆ ಕೇಂದ್ರ ಸಚಿವ ಸಂಪುಟದ ಸಹಮತ ದೊರೆತಿದೆ” ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ವಕ್ತಾರ ಮತ್ತು ಪಿಐಬಿ ಪ್ರಧಾನ ನಿರ್ದೇಶಕ ರಾಜೇಶ್ ಮಲ್ಹೋತ್ರ ಅವರು ಟ್ವೀಟ್ ಮೂಲಕ ಪೆಟ್ರೋಲಿಯಂ ಸಚಿವಾಲಯದ ಹೊಸ ಆಲೋಚನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.

“ಪಿಎನ್‌ಜಿ ಮತ್ತು ಸಿಎನ್‌ಜಿ ಇಂಧನಗಳಿಗೆ ಇಂಡಿಯನ್ ಕ್ರೂಡ್ ಬ್ಯಾಸ್ಕೆಟ್‌ನ (ಭಾರತದ ಕಚ್ಚಾತೈಲ ಆಮದು ದರದ ಸರಾಸರಿ) ಶೇ 10ರಷ್ಟು ಕಡಿಮೆ ದರ ನಿಗದಿಪಡಿಸಲಾಗುವುದು. ಈ ದರವನ್ನು ತಿಂಗಳಿಗೆ ಒಮ್ಮೆ ಪರಿಷ್ಕರಿಸಲಾಗುವುದು. ಈ ಮೂಲಕ ದರನಿಗದಿ ಪ್ರಕ್ರಿಯೆಯಲ್ಲಿ ಸ್ಥಿರತೆ ಬರಲಿದೆ. ಅದರ ಜತೆಗೆ ಅನಿಲ ಉತ್ಪಾದಕರಿಗೆ ಬೆಲೆ ಏರಿಳಿತದಿಂದ ರಕ್ಷಣೆ ದೊರೆಯಲಿದೆ” ಎಂದು ಹೇಳಿದ್ದಾರೆ.

ಪ್ರಸ್ತುತ ಭಾರತದಲ್ಲಿ ಉತ್ಪತ್ತಿಯಾಗುವ ನೈಸರ್ಗಿಕ ಅನಿಲ ದರ ನಿಗದಿಪಡಿಸಲು ಹೆನ್ರಿ ಹಬ್, ಅಲ್ಬೆನಾ, ನ್ಯಾಷನಲ್ ಬ್ಯಾಲೆನ್ಸಿಂಗ್ ಪಾಯಿಂಟ್ (ಬ್ರಿಟನ್) ಮತ್ತು ರಷ್ಯಾದ ಸರಾಸರಿ ದರಗಳನ್ನು ಪರಿಗಣಿಸಲಾಗುತ್ತಿದೆ. ಆರು ತಿಂಗಳಿಗೆ ಒಮ್ಮೆ ದರ ಪರಿಷ್ಕರಿಸಲಾಗುತ್ತಿದೆ. ಈ ನಾಲ್ಕು ಅನಿಲ ದರಗಳನ್ನು ಲೆಕ್ಕಹಾಕಿ ದೇಶೀಯ ದರ ನಿಗದಿಪಡಿಸುವ ಪ್ರಕ್ರಿಯೆಯೇ ದೊಡ್ಡ ಸಮಸ್ಯೆ ಎನಿಸುತ್ತಿತ್ತು. ಈ ವ್ಯವಸ್ಥೆ ಬದಲಿಸಬೇಕು ಎಂಬ ಒತ್ತಾಯ ಬಹುದಿನಗಳಿಂದ ಕೇಳಿಬರುತ್ತಿತ್ತು.

ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಅಂದಾಜಿನಂತೆ ದೇಶಾದ್ಯಂತ ಪಿಎನ್‌ಜಿ ಮತ್ತು ಸಿಎನ್‌ಜಿ ದರಗಳಲ್ಲಿ ಸರಾಸರಿ 6 ರೂಪಾಯಿ ಕಡಿಮೆಯಾಗಲಿದೆ. ಶನಿವಾರದಿಂದಲೇ (ಏಪ್ರಿಲ್ 8) ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದ್ದು, ಗರಿಷ್ಠ ಶೇ 11ರಷ್ಟು ಬೆಲೆ ಇಳಿಕೆ ನಿರೀಕ್ಷಿಸಲಾಗಿದೆ.

“ಪರಿಷ್ಕೃತ ಮಾರ್ಗಸೂಚಿಗಳ ಅನ್ವಯ ನೈಸರ್ಗಿಕ ಅನಿಲ ದರಗಳನ್ನು ಕಚ್ಚಾತೈಲದ ದರಕ್ಕೆ ಸಂಯೋಜಿಸಲಾಗಿದೆ. ಹಲವು ದೇಶಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಗೆ ಬಂದಿದೆ. ನಮ್ಮ ಬಳಕೆದಾರರಿಗೆ ಇದರಿಂದ ಅನುಕೂಲವಾಗಲಿದೆ. ಅಲ್ಲದೆ ಜಾಗತಿಕ ವಹಿವಾಟಿಗೂ ಇದು ಅನುಕೂಲವಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಸರ್ಕಾರಿ ಸ್ವಾಮ್ಯದ ಒಎನ್‌ಜಿಸಿ ಮತ್ತು ಒಐಎಲ್ ಕಂಪನಿಗಳು ಉತ್ಪಾದಿಸುವ ನೈಸರ್ಗಿಕ ಅನಿಲಕ್ಕೆ ಇಷ್ಟುದಿನ ಎಪಿಎಂ ಮೂಲಕ ಕೇಂದ್ರ ಸರ್ಕಾರವೇ ದರ ನಿಗದಿಪಡಿಸುತ್ತಿತ್ತು.

ಈ ಸುದ್ದಿ ಓದಿದ್ದೀರಾ? ದೇಶದ ಮೂಲ ಸೌಕರ್ಯ ಅದಾನಿ ಸಮೂಹದ ಕೈಲಿದೆಯೇ ಅಥವಾ ಚೀನಾ ಕೈಲಿದೆಯೇ: ಕಾಂಗ್ರೆಸ್ ಪ್ರಶ್ನೆ

ಈ ಕಂಪನಿಗಳಿಗೆ ಅನಿಲ ನಿಕ್ಷೇಪಗಳನ್ನು ಬಿಟ್ಟುಕೊಡುವಾಗ ಸ್ಪರ್ಧಾತ್ಮಕ ದರ ಪಡೆದಿಲ್ಲ ಎನ್ನುವ ಕಾರಣಕ್ಕೆ ಉತ್ಪಾದನೆಯಾದ ಅನಿಲಕ್ಕೆ ದರ ನಿಗದಿಪಡಿಸುವ ಹಕ್ಕನ್ನು ಕೇಂದ್ರ ಸರ್ಕಾರ ತಾನೇ ಇರಿಸಿಕೊಂಡಿತ್ತು.

ಇದೀಗ ಕಚ್ಚಾತೈಲ ದರ ಸೂಚ್ಯಂಕದೊಂದಿಗೆ ಪಿಎನ್‌ಜಿ ಮತ್ತು ಸಿಎನ್‌ಜಿ ದರವನ್ನು ತಳುಕು ಹಾಕುವ ಮೂಲಕ ಈ ಹಕ್ಕು ಬಿಟ್ಟುಕೊಡಲು ಕೇಂದ್ರ ಸರ್ಕಾರ ಮುಂದಾಗಿರುವುದು ಮಹತ್ವ ಪಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...