ಪಿಒಕೆ ವಿಷಯದಲ್ಲಿ ನೆಹರು ಮಾಡಿದ್ದು ಐತಿಹಾಸಿಕ ಪ್ರಮಾದ ಎಂದ ಅಮಿತ್ ಶಾ

Date:

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ 2023, ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2023, ಇವುಗಳನ್ನು ಲೋಕಸಭೆಯಲ್ಲಿ ಅಂಗೀಕಾರಕ್ಕೆ ತರಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಮಸೂದೆ ಬಗ್ಗೆ ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಂದಾಗಿ ಜಮ್ಮು ಮತ್ತು ಕಾಶ್ಮೀರ ಎರಡು ಪ್ರಮಾದಗಳನ್ನು ಅನುಭವಿಸಿದೆ. ನೆಹರು ಸರಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದರೆ, ಪಾಕ್ ಆಕ್ರಮಿತ ಕಾಶ್ಮೀರವು ಈಗ ಭಾರತದ ಭಾಗವಾಗುತ್ತಿತ್ತು. ಅವರು ಮಾಡಿದ್ದು ಐತಿಹಾಸಿಕ ಪ್ರಮಾದ ಎಂದು ಹೇಳಿದರು.

“ಜಮ್ಮು ಮತ್ತು ಕಾಶ್ಮೀರ ಎರಡು ಪ್ರಮಾದಗಳಿಂದ ಬಳಲುತ್ತಿದೆ. ಮೊದಲನೆಯದು ಕದನ ವಿರಾಮವನ್ನು ಘೋಷಿಸಿದ್ದು. ನಮ್ಮ ಸೈನ್ಯವು ಯುದ್ಧದಲ್ಲಿ ಗೆದ್ದಾಗ, ಕದನ ವಿರಾಮವನ್ನು ವಿಧಿಸಲಾಯಿತು. ಮೂರು ದಿನಗಳ ನಂತರ ಕದನ ವಿರಾಮ ಸಂಭವಿಸಿದ್ದರೆ, ಇಂದು ಪಿಒಕೆ ಭಾರತದ ಭಾಗವಾಗುತ್ತಿತ್ತು. ಎರಡನೆಯದು ನಮ್ಮ ಆಂತರಿಕ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ದರು” ಎಂದು ಅಮಿತ್ ಶಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

“ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಶೂನ್ಯ ಭಯೋತ್ಪಾದಕ ಯೋಜನೆಯನ್ನು 3 ವರ್ಷಗಳವರೆಗೆ ಜಾರಿಯಲ್ಲಿಡಲು ಯೋಜಿಸಿದೆ. ಅಲ್ಲದೆ ಈಗ ಮಂಡಿಸಿರುವ ಮಸೂದೆಗಳು ತಮ್ಮ ಸ್ವಂತ ದೇಶದಲ್ಲಿ ನಿರಾಶ್ರಿತರಾಗಲು ಒತ್ತಾಯಿಸಲ್ಪಟ್ಟವರಿಗೆ ನ್ಯಾಯವನ್ನು ನೀಡಲು ಪ್ರಯತ್ನಿಸುತ್ತವೆ. ಹಕ್ಕುಗಳನ್ನು ನೀಡುವುದಕ್ಕೂ, ಗೌರವಯುತವಾಗಿ ಹಕ್ಕುಗಳನ್ನು ನೀಡುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ಎಂದು ಹೇಳಿದರು.

“ನಾನು ಇಲ್ಲಿ ಜಾರಿಗೊಳಿಸಿರುವ ಮಸೂದೆಯು ಯಾರ ವಿರುದ್ಧ ಅನ್ಯಾಯವಾಗಿದೆಯೋ, ಯಾರು ಅವಮಾನಿಸಲ್ಪಟ್ಟರು ಮತ್ತು ನಿರ್ಲಕ್ಷಿಸಲ್ಪಟ್ಟವರಿಗೆ ನ್ಯಾಯವನ್ನು ಒದಗಿಸುವುದಕ್ಕೆ ಈ ಹಕ್ಕುಗಳು ಸಂಬಂಧಿಸಿದೆ. ಯಾವುದೇ ಸಮಾಜದಲ್ಲಿ, ವಂಚಿತ ಸಮುದಾಯವನ್ನು ಮುಂದೆ ತರಬೇಕು. ಅದುವೇ ಭಾರತದ ಸಂವಿಧಾನದ ಮೂಲ ಅರ್ಥವಾಗಿದೆ. ವಂಚಿತರ ಗೌರವವನ್ನು ಕುಗ್ಗಿಸದ ರೀತಿಯಲ್ಲಿ ಅವರನ್ನು ಮುಂದೆ ತರಬೇಕು. ಹೀಗಾಗಿ ದುರ್ಬಲ ಮತ್ತು ವಂಚಿತ ವರ್ಗದ ಬದಲಿಗೆ ಅದನ್ನು ಇತರೆ ಹಿಂದುಳಿದ ವರ್ಗ ಎಂದು ಮರುನಾಮಕರಣ ಮಾಡುವುದು ಮುಖ್ಯ’’ ಎಂದರು.

ವಿಪಕ್ಷಗಳ ಸಭಾತ್ಯಾಗ

ಪಾಕ್‌ ಆಕ್ರಮಿತ ಕಾಶ್ಮೀರದ (ಪಿಒಕೆ) ಸಮಸ್ಯೆಗೆ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಕಾರಣ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಪಕ್ಕೆ ಆಕ್ರೋಶಗೊಂಡ ವಿರೋಧ ಪಕ್ಷಗಳ  ಸಂಸದರು ಸಭಾತ್ಯಾಗ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...