ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

Date:

  • ನಸ್ರುದ್ದೀನ್‌ ನಿವಾಸದಲ್ಲಿ ಗೋಮಾಂಸ ಪತ್ತೆ ಆರೋಪ
  • ಗ್ರಾಮಸ್ಥರ ಕೈಗೆ ಸಿಲುಕಿಕೊಂಡ ನಸ್ರುದ್ದೀನ್‌ ಪುತ್ರನ ರಕ್ಷಣೆ

ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ನಿಷೇಧಿತ ಗೋಮಾಂಸ ಹೊಂದಿದ್ದ ಆರೋಪದಲ್ಲಿ ಗುಂಪು ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಘಟನೆಯಲ್ಲಿ ಮೂವರು ಪೊಲೀಸರು ಸೇರಿ ಆರು ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಸಂತ್ರಸ್ತ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಉದ್ರಿಕ್ತರು ಪೊಲೀಸರ ವಾಹನಗಳನ್ನು ಧ್ವಂಸಗೊಳಿಸಿದರು. ಅಲ್ಲದೆ ಸಂತ್ರಸ್ತ ಯುವಕನ ನಿವಾಸದ ಮುಂದಿನ ಕೆಲವು ಸರಕುಗಳಿಗೆ ಬೆಂಕಿ ಹಚ್ಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ದನಗಳ ಹತ್ಯೆ ಮತ್ತು ಮಾರಾಟ ಜಾರ್ಖಂಡ್‌ನಲ್ಲಿ ನಿಷೇಧಿಸಲಾಗಿದೆ.

ರಾಜಧಾನಿ ರಾಂಚಿಯಿಂದ 190 ಕಿಮೀ ದೂರದ ನಿರ್ಸಾ ಪೊಲೀಸ್‌ ಠಾಣಾ ವ್ಯಪ್ತಿಯ ಭುರ್ಕುಂಡ ಪ್ರದೇಶದಲ್ಲಿ ಘಟನೆ ನಡೆದಿದೆ.

ನಸ್ರುದ್ದೀನ್ ಅನ್ಸಾರಿ ಎಂಬ ಯುವಕನ ನಿವಾಸದಲ್ಲಿ ಕೆಲವು ಗ್ರಾಮಸ್ಥರಿಗೆ ಸತ್ತ ದನ ಮತ್ತು ಗೋಮಾಂಸ ದೊರೆತಿದೆ ಎಂಬ ವಿಷಯ ಗ್ರಾಮದಲ್ಲಿ ಹರಡಿದೆ. ಕೂಡಲೇ ಉದ್ರಿಕ್ತರ ಗುಂಪು ಯುವಕನ ನಿವಾಸದ ಮುಂದೆ ಜಮಾಯಿಸಿ ಕಲ್ಲು ತೂರಾಟ ನಡೆಸಿದರು. ಉದ್ರಿಕ್ತರು ನಿವಾಸದ ಮುಂದಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದರು. ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.

ಪರಿಸ್ಥಿತಿ ಈಗ ಹತೋಟಿಯಲ್ಲಿದೆ. ಸ್ಥಳದಲ್ಲಿ ಪೊಲೀಸರು ನಿಗಾ ಇರಿದ್ದಾರೆ ಎಂದು ನಿರ್ಸಾ ಉಪ ವಿಭಾಗದ ಪೊಲೀಸ್‌ ಅಧಿಕಾರಿ ಪೀತಾಂಬರ್‌ ಸಿಂಗ್‌ ಖೇರ್ವಾರ್‌ ತಿಳಿಸಿದರು.

ನಸ್ರುದ್ದೀನ್‌ ಅನ್ಸಾರಿ ಮತ್ತು ಆತನ ಕುಟುಂಬ ಅಲ್ಲಿಂದ ಪರಾರಿಯಾಗಿದೆ. ಆದರೆ, ಉದ್ರಿಕ್ತ ಗುಂಪಿನ ಕೈಗೆ ಸಿಲುಕಿಕೊಂಡಿದ್ದ ನಸ್ರುದ್ದೀನ್‌ ಪುತ್ರ ಸಹಾಬುದ್ದೀನ್‌ನನ್ನು ಗುಂಪು ಮರಕ್ಕೆ ಕಟ್ಟಿ ಹಾಕಿತು.

ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ರೀಷ್ಮಾ ರಮೇಶನ್‌ ಸ್ಥಳಕ್ಕೆ ಅಗಮಿಸಿದ ನಂತರ ಪರಿಸ್ಥಿತಿ ತಹಬದಿಗೆ ಬಂದಿತು. ಗೋಮಾಂಸ ಇಟ್ಟ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ದಿಗ್ವಿಜಯ ಸಿಂಗ್ ಟ್ವೀಟ್ ವಿರುದ್ಧ ಬಿಜೆಪಿ ಟೀಕೆ

ನಿರ್ಸಾ ಶಾಸಕಿ ಅಪರ್ಣಾ ಸೇನ್‌ ಗುಪ್ತಾ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ಪರಿಶೀಲಿಸಿದರು. ಬಳಿಕ ಶಾಸಕಿ ಅಪರ್ಣಾ, ಆಡಳಿತದ ಅಧಿಕಾರಿಗಳು ಮತ್ತು ಪೊಲೀಸರು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು.

ಗೋಮಾಂಸ ಪತ್ತೆ ಪ್ರಕರಣದಲ್ಲಿ ಸೂಕ್ತ ಕ್ರಮ ಹಾಗೂ ಗ್ರಾಮದಲ್ಲಿ ಶಾಂತಿ ನೆಲೆಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...