ಮಾರ್ಚ್ 1, 2027 ರಿಂದ ಕೇಂದ್ರದಿಂದ ಜಾತಿ, ಜನ ಗಣತಿ; ಕೆಲ ರಾಜ್ಯಗಳಲ್ಲಿ ಮುಂದಿನ ವರ್ಷದಿಂದ ಪ್ರಾರಂಭ

Date:

ದೇಶದ ಜನಸಂಖ್ಯೆಯ ಸಮಗ್ರ ಎಣಿಕೆ ಮತ್ತು ನಿರ್ಣಾಯಕವಾದ ಸಾಮಾಜಿಕ, ಆರ್ಥಿಕ ವಿವರಗಳನ್ನು ಒಳಗೊಂಡ ಜನಗಣತಿ ಹಾಗೂ ಜಾತಿ ಗಣತಿ ಮಾರ್ಚ್ 1, 2027 ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆದಾಗ್ಯೂ, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ಗಳಲ್ಲಿ ಅಕ್ಟೋಬರ್ 2026 ರ ಆರಂಭದಲ್ಲಿ ಜಾತಿ ಹಾಗೂ ಜನಗಣತಿ ಪ್ರಾರಂಭವಾಗಲಿದೆ.

ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ದೇಶಾದ್ಯಂತ ಪುರುಷರು ಮತ್ತು ಮಹಿಳೆಯರಿಗೆ ಕೇಳಲಾಗುವ ಪ್ರಶ್ನೆಗಳಲ್ಲಿ ಜಾತಿ ಮತ್ತು ಉಪಜಾತಿಗಳ ಪ್ರಶ್ನೆಗಳ ಪಟ್ಟಿಯು ಒಳಗೊಂಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

ಸರ್ಕಾರವು ಜಾತಿಯ ಕುರಿತಾದ ಪ್ರಶ್ನೆಗಳನ್ನು ಅಂದರೆ, ವಿವಿಧ ಜಾತಿಗಳು ಮತ್ತು ಉಪ-ಜಾತಿಗಳ ಎಣಿಕೆ ಮತ್ತು ಪ್ರತಿ ಜಾತಿಯಲ್ಲಿರುವ ಜನರ ಸಂಖ್ಯೆ – ಮುಂದಿನ ಜನಗಣತಿಯ ಭಾಗವಾಗುವುದನ್ನು ಕಳೆದ ಏಪ್ರಿಲ್ 30 ರಂದು ದೃಢಪಡಿಸಿತ್ತು.

ಕೆಲ ವರ್ಷಗಳ ಹಿಂದೆ ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಆರಂಭವಾಗುವ ಮೊದಲು ಜಾತಿ ಗಣತಿ ನಡೆಸುವುದಾಗಿ ಘೋಷಿಸಲಾಗಿತ್ತು. ಜಾತಿ ಗಣತಿ ನಡೆಸಿದ ನಂತರ ಶೇ 63 ಕ್ಕಿಂತ ಹೆಚ್ಚು ಜನಸಂಖ್ಯೆಯು ಅತ್ಯಂತ ಹಿಂದುಳಿದ ಅಥವಾ ಹಿಂದುಳಿದ ವರ್ಗದವರು ಎಂದು ತಿಳಿದುಬಂದಿತ್ತು.

ಭಾರತದಲ್ಲಿ ಸಾಮಾನ್ಯವಾಗಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಕೊನೆಯ ರಾಷ್ಟ್ರೀಯ ಜನಸಂಖ್ಯಾ ಎಣಿಕೆ 2011 ರಲ್ಲಿ ನಡೆಸಲಾಗಿತ್ತು. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 2021 ರ ಜನಗಣತಿಯನ್ನು ಕೈಬಿಡಬೇಕಾಯಿತು. ಆದ್ದರಿಂದ 2027 ರ ಜನಗಣತಿಯು 16 ವರ್ಷಗಳ ನಂತರ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...