50 ಪೈಸೆಗಾಗಿ 15,000 ರೂ. ದಂಡ ತೆತ್ತ ಅಂಚೆ ಇಲಾಖೆ

Date:

ಗ್ರಾಹಕನಿಗೆ 50 ಪೈಸೆ ಹಿಂದಿರುಗಿಸದ ಪ್ರಕರಣದಲ್ಲಿ ಅಂಚೆ ಇಲಾಖೆಗೆ 15,000 ರೂ. ದಂಡ ವಿಧಿಸಿ ಚೆನ್ನೈನ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ಚೆನ್ನೈನ ಮನಶಾ ಎಂಬವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಗ್ರಾಹಕರ ಆಯೋಗ, ಅಂಚೆ ಇಲಾಖೆಗೆ ದಂಡ ವಿಧಿಸಿದೆ. ದಂಡದ ಪೈಕಿ, ಗ್ರಾಹಕರಿಗೆ 10,000 ರೂ. ಪರಹಾರ ಮತ್ತು 5,000 ರೂ. ವ್ಯಾಜ್ಯ ಶುಲ್ಕ ಭರಿಸುವಂತೆ ನಿರ್ದೇಶಿಸಿದೆ.

ಮನಶಾ ಅವರು 2023ರ ಡಿಸೆಂಬರ್ 13ರಂದು ಚೆನ್ನೈನ ಪೊಜಿಚಲೂರ್ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ ಅಂಚೆ ಪತ್ರ ಖರೀದಿಸಿದ್ದರು. ಅದರ ಬೆಲೆ 29.50 ರೂ. ಆಗಿದ್ದು, ಮನಶಾ ಅವರು 30 ರೂ. ಪಾವತಿಸಿದ್ದರು. ಉಳಿದ, 50 ಪೈಸೆಯನ್ನು ಹಿಂದಿರುಗಿಸುವಂತೆ ಅಂಜೆ ಅಧಿಕಾರಿಗೆ ಕೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಅಂಚೆ ಅಧಿಕಾರಿ 50 ಪೈಸೆಯನ್ನು ಹಿಂದಿರುಗಿಸಿಲ್ಲ. ಚಿಲ್ಲರೆ ಇಲ್ಲದಿದ್ದರೆ, ಯುಪಿಐ ಮೂಲಕ ಹಣ ಪಾವತಿಸುತ್ತೇನೆ ನಗದು ಹಣವನ್ನು ವಾಪಸ್‌ ಕೊಡಿ ಎಂದು ಕೇಳಿದರೂ, ಅಧಿಕಾರಿ ಒಪ್ಪಿಲ್ಲ.

ಅಧಿಕಾರಿಗಳ ನಡೆಯಿಂದ ಅಸಮಾಧಾನಗೊಂಡ ಮನಶಾ, ಅಂಚೆ ಇಲಾಖೆಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು.

ಅವರ ದೂರಿನ ವಿಚಾರಣೆ ನಡೆಸಿರುವ ಆಯೋಗ, ಮನಶಾ ಅವರಿಗೆ 50 ಪೈಸೆಯನ್ನು ಮರುಪಾವತಿಸಬೇಕು. ಗ್ರಾಹಕರಿಗೆ ಮಾನಸಿಕ ಒತ್ತಡ ನೀಡಿದ್ದಕ್ಕಾಗಿ 10,000 ರೂ. ಪರಿಹಾರ ನೀಡಬೇಕು. ಜೊತೆಗೆ, ವ್ಯಾಜ್ಯ ಶುಲ್ಕವಾಗಿ ₹5 ಸಾವಿರ ಪಾವತಿಸಬೇಕೆಂದು ಅಂಚೆ ಇಲಾಖೆಗೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...