ಬಿಜೆಪಿ ವಿರುದ್ಧ ವಿಪಕ್ಷಗಳ ಚುನಾವಣಾ ಪೂರ್ವ ಮೈತ್ರಿ ಸಾಧ್ಯವಿಲ್ಲ; ಗುಲಾಬ್‌ ನಬಿ ಆಜಾದ್

Date:

  • ಗುಲಾಬ್ ನಬಿ ಆಜಾದ್‌ ಆತ್ಮಕಥೆ ಆಜಾದ್‌ ಬಿಡುಗಡೆ
  • ದೆಹಲಿಯಲ್ಲಿ ಗುಲಾಬ್‌ ನಬಿ ಸುದ್ದಿಗಾರರೊಂದಿಗೆ ಮಾತು

ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಮೈತ್ರಿಕೂಟ ರಚನೆ ಸಾಧ್ಯವಾಗುವುದಿಲ್ಲ ಎಂದು ಡೆಮಾಕ್ರಟಿಕ್‌ ಪ್ರೊಗ್ರೆಸಿವ್‌ ಆಜಾದ್‌ ಪಕ್ಷದ ಸಂಸ್ಥಾಪಕ ಗುಲಾಬ್‌ ನಬಿ ಆಜಾದ್ ಮಂಗಳವಾರ (ಏಪ್ರಿಲ್‌ 4) ಹೇಳಿದ್ದಾರೆ.

ದೆಹಲಿಯಲ್ಲಿ ಗುಲಾಬ್‌ ನಬಿ ಅವರು ತಮ್ಮ ಆತ್ಮಕಥೆ ‘ಆಜಾದ್’’ಕೃತಿ ಬಿಡುಗಡೆಯ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

“ಕಾಂಗ್ರೆಸ್‌ನಲ್ಲಿ ಯಾವುದೂ ಬದಲಾಗುವುದಿಲ್ಲ. ಪಕ್ಷದ ಪ್ರಬಲ ನಾಯಕರು ಇರುವ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆಯುತ್ತದೆ. ಯಾವುದೇ ರಾಜ್ಯಗಳಲ್ಲಿನ ಗೆಲುವು ಅಥವಾ ಸೋಲು ತಮ್ಮಿಂದ ಆಗುತ್ತಿದೆ ಎಂದು ಕೇಂದ್ರ ಕಾಂಗ್ರೆಸ್‌ ನಾಯಕತ್ವ ಹೇಳಿಕೊಳ್ಳುವಂತಿಲ್ಲ” ಎಂದು ಗುಲಾಬ್‌ ನಬಿ ಆಜಾದ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದ ಕಾಂಗ್ರೆಸ್‌ ನಾಯಕತ್ವ ಯಾವುದೇ ಕ್ಷೇತ್ರದ ಮೇಲೆ ಪ್ರಭಾವ ಬೀರುವುದಿಲ್ಲ. ಅವರು ಯಾರನ್ನೂ ಗೆಲ್ಲಲು ಅಥವಾ ಸೋಲುವಂತೆ ಮಾಡುವುದು ಸಾಧ್ಯವಿಲ್ಲ” ಎಂದು ಹೇಳಿದರು.

“ಈಗಿನ ಯಾವ ನಾಯಕರಿಗೂ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿಲ್ಲ. ಈಗ ಎಲ್ಲರೂ ತಮಗೆ ಎಷ್ಟು ಸಾಧ್ಯವೋ ಅಷ್ಟು ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ನಮ್ಮಂಥ ಬೃಹತ್‌ ದೇಶದಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗುವುದು, ಎಲ್ಲ ಪ್ರದೇಶಗಳು, ಪ್ರತಿ ಮೂಲೆ ತಲುಪುವುದು ಬಹಳ ಕಷ್ಟವಾಗಿದೆ” ಎಂದು ಗುಲಾಂ ನಬಿ ಆಜಾದ್‌ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಯುವ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಿಕ್ಕಾಟ

“2024ರಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಲು ಪ್ರತಿಪಕ್ಷಗಳು ಒಗ್ಗೂಡುವುದಿಲ್ಲ. ಚುನಾವಣೆಯ ನಂತರ ಪಡೆಯುವ ಸಂಖ್ಯೆಗಳ ಆಧಾರದಲ್ಲಿ ಪಕ್ಷಗಳು ಒಂದುಗೂಡುತ್ತವೆ. ಚುನಾವಣೆ ನಂತರ ಕಾಂಗ್ರೆಸ್‌ ಸಹ ಎರಡು ಬಾರಿ ಮೈತ್ರಿಯಾಗಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರೂ ಎರಡು ಬಾರಿ ಮೈತ್ರಿ ಮಾಡಿಕೊಂಡಿದ್ದರು. ಪ್ರಧಾನಿ ಮೋದಿ ಅವರೂ ಇದಕ್ಕೆ ಹೊರತಲ್ಲ” ಎಂದು ಗುಲಾಬ್‌ ನಬಿ ಅವರು ತಿಳಿಸಿದರು.

ತಮ್ಮ ಪಕ್ಷ ಬಿಜೆಪಿ ಜೊತೆ ಕೈ ಜೋಡಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಗುಲಾಂ ನಬಿ ಆಜಾದ್‌ ಅವರು, “ಅದು ಸಾಧ್ಯವಿಲ್ಲ. ಜಮ್ಮು- ಕಾಶ್ಮಿರದಲ್ಲಿಯೇ ಇತರ ರಾಜಕೀಯ ಪಕ್ಷಗಳೊಂದಿಗೆ ಸೇರುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...