‘ಪ್ರೀಮಿಯಂ ನಿಮ್ಮದು, ಲಾಭ ಅದಾನಿಗೆ’; ಎಲ್‌ಐಸಿಯ 5,000 ಕೋಟಿ ರೂ. ಹೂಡಿಕೆಗೆ ರಾಹುಲ್ ಆಕ್ಷೇಪ

Date:

ಅದಾನಿ ಗ್ರೂಪ್‌ನಲ್ಲಿ ಭಾರತೀಯ ವಿಮಾ ಕಂಪನಿ (ಎಲ್‌ಐಸಿ) 5,000 ಕೋಟಿ ರೂ. ಹೂಡಿಕೆ ಮಾಡಿರುವುದನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

“ಸಾರ್ವಜನಿಕರ ಹಣವನ್ನು ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ಕುಟುಕಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಕಂಪನಿಯವರು ಕಳೆದ ವಾರ ನೀಡಿದ ಪ್ರಕಟಣೆಯಲ್ಲಿ, “ಎಲ್‌ಐಸಿಯಿಂದ ರೂ. 5,000 ಕೋಟಿ ಸಂಗ್ರಹಿಸಲಾಗಿದೆ” ಎಂದು ತಿಳಿಸಲಾಗಿತ್ತು.

15 ವರ್ಷಗಳ ಅವಧಿಯಲ್ಲಿ ಮರುಪಾವತಿ ಮಾಡುವ ಷರತ್ತಿನ ಮೇಲೆ, ವರ್ಷಕ್ಕೆ 7.75% ಬಡ್ಡಿ ದರದಲ್ಲಿ ಎಲ್‌ಐಸಿಯಿಂದ ಅದಾನಿ ಕಂಪನಿಯು ಹಣ ಪಡೆದುಕೊಂಡಿದೆ.

ಇದನ್ನೂ ಓದಿರಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ; ಗಗನ್‌ ದೀಪ್‌ ಅರೆಸ್ಟ್

“ನಮ್ಮಂತಹ ಸಾಮಾನ್ಯ ಜನರ ವಿಮಾ ಕಂತುಗಳ ಮೂಲಕ ಸಂಗ್ರಹಿಸಿದ ಎಲ್‌ಐಸಿ ಹಣವನ್ನು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ರಾಹುಲ್ ಆರೋಪಿಸಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ಟ್ವೀಟ್ ಮಾಡುವ ಮೂಲಕ, ಎಲ್‌ಐಸಿ ಹೂಡಿಕೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದ ದೊಡ್ಡ ವಿಮಾ ಕಂಪನಿ ಎಲ್‌ಐಸಿ (ಭಾರತೀಯ ಜೀವ ವಿಮಾ ನಿಗಮ). ಇದು ಸರ್ಕಾರಿ ಕಂಪನಿಯಾಗಿದ್ದು, ನಮ್ಮಂತಹ ಸಾಮಾನ್ಯ ಜನರು ಕಟ್ಟುವ ವಿಮಾ ಕಂತುಗಳಿಂದ ಸಂಗ್ರಹವಾದ ಹಣವನ್ನು ವಿವಿಧೆಡೆ ಹೂಡಿಕೆ ಮಾಡುತ್ತದೆ. ಆದರೆ ಅದಾನಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂಬ ಗಂಭೀರ ಆರೋಪಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...