ದಲ್ಲೇವಾಲ್ ಉಪವಾಸ – ದೆಹಲಿ ಚಲೋಗೆ ಮಂಡಿಯೂರಿದ ಪ್ರಧಾನಿ ಮೋದಿ; ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ

Date:

ಕಳೆದ 55 ದಿನಗಳಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ರೈತರು ಜನವರಿ ಜನವರಿ 21ರಂದು ದೆಹಲಿ ಚಲೋ ನಡೆಸುವುದಾಗಿ ಘೋಷಿಸಿದ್ದಾರೆ. ರೈತ ಹೋರಾಟಕ್ಕೆ ಸ್ಪಂದಿಸದೆ ಮೊಂಡು ಧೋರಣೆ ತಳೆದಿದ್ದ ಕೇಂದ್ರ ಸರ್ಕಾರ, ಇದೀಗ ರೈತ ಹೋರಾಟದ ಎದುರು ಮಂಡಿಯೂರಿದೆ. ಪ್ರತಿಭಟನಾನಿರತ ರೈತರಿಗೆ ಪ್ರಸ್ತಾವನೆ ಕಳಿಸಿದೆ.

ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡಿರುವ ಖನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು, “ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಪ್ರಿಯ ರಂಜನ್ ನೇತೃತ್ವದ ಕೇಂದ್ರ ಸರ್ಕಾರದ ತಂಡವು ಶನಿವಾರ ನಮಗೆ ಪ್ರಸ್ತಾವನೆಯೊಂದನ್ನು ನೀಡಿದೆ. ಅದನ್ನು ನಾವು ಪರಿಶೀಲಿಸುತ್ತಿದ್ದೇವೆ. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲ್ ಅವರನ್ನು ಕೂಡ ತಂಡವು ಭೇಟಿ ಮಾಡಿದೆ” ಎಂದು ತಿಳಿಸಿದ್ದಾರೆ.

“ದಲ್ಲೆವಾಲ್ ಅವರ ಆರೋಗ್ಯದ ಬಗ್ಗೆ ಸರ್ಕಾರ ಕಾಳಜಿ ಇದ್ದು, ಅವರ ಸ್ಥಿತಿಯ ಬಗ್ಗೆ ವಿಚಾರಿಸಲು ಬಂದಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳಾದ ಎಸ್‌ಕೆಎಂ ಮತ್ತು ಕೆಎಂಎಂ ನಾಯಕರನ್ನು ಕೇಳಿಕೊಂಡಿದ್ದಾರೆ. ರೈತ ನಾಯಕರೊಂದಿಗೆ ಸುಮಾರು 2 ಗಂಟೆಗಳ ಕಾಲ ಸಭೆ ನಡೆಸಿದ್ದಾರೆ” ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಇನ್ನು, ಎಸ್‌ಕೆಎಂ ಮತ್ತು ಕೆಎಂಎಂ ನಡುವೆ ಒಗ್ಗಟ್ಟು ಮೂಡಿಸಲು ಸಭೆಗಳು ನಡೆಯುತ್ತಿವೆ. ಅವರು (ಎಸ್‌ಕೆಎಂ) ಕನಿಷ್ಠ ಏಕತೆಯತ್ತ ಹೆಜ್ಜೆ ಇಟ್ಟಿದ್ದಾರೆ. ಆದರೆ, ನಮ್ಮ ಉದ್ದೇಶ ಗರಿಷ್ಠ ಏಕತೆ ಎಂದು ಕೆಎಂಎಂ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. ದಲ್ಲೆವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿ ಮುಂದಿನ ಸಭೆ ಮುಂದೂಡುವಂತೆ ಅವರು ಎಸ್‌ಕೆಎಂ ಮುಖಂಡರು ಒತ್ತಾಯಿಸಿದ್ದಾರೆ. ಜನವರಿ 24 ರಂದು ನಡೆಯಲಿರುವ ಎಸ್‌ಕೆಎಂ ಸಾಮಾನ್ಯ ಸಭೆಯ ನಂತರ ಮುಂದಿನ ಸಭೆಯ ದಿನಾಂಕವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...