ಖಾಸಗಿ ವಿಡಿಯೋ ಪ್ರಕರಣ: ‘ಆಕೆ ನನ್ನ ಮಗಳಾಗಿದ್ದರೆ’; ಕೋರ್ಟ್‌ನಲ್ಲಿ ಗದ್ಗರಿತರಾದ ನ್ಯಾಯಾಧೀಶ

Date:

ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ ಕದ್ದು ಚಿತ್ರೀಕರಿಸಿ, ಅವುಗಳನ್ನು ಅಂತರ್ಜಾಲದಲ್ಲಿ ಹರಿಬಿಟ್ಟಿದ್ದ. ಅವುಗಳನ್ನು 48 ಗಂಟೆಗಳ ಒಳಗೆ ತೆಗೆದುಹಾಕುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.

ವಿಚಾರಣೆ ವೇಳೆ ಭಾವನಾತ್ಮಕವಾಗಿ ಮಾತನಾಡಿದ ನ್ಯಾಯಾಧೀಶ ಎನ್‌ ಆನಂದ ವೆಂಕಟೇಶ, “ಈ ವಕೀಲೆ ಮಾನಸಿಕವಾಗಿ ನೊಂದಿದ್ದಾರೆ. ಆಕೆ ನನ್ನ ಮಗಳಾಗಿದ್ದರೆ ಏನಾಗುತ್ತಿತ್ತು ಎಂಬುದಾಗಿ ನಾನು ಯೋಚಿಸುತ್ತಿದ್ದೆ. ಆಕೆಯನ್ನು ನನ್ನ ಚೇಂಬರ್‌ನಲ್ಲಿ ಭೇಟಿಯಾಗಿ ಬೆಂಬಲದ ಮಾತುಗಳನ್ನಾಡಬೇಕೆಂದು ನಾನು ಉದ್ದೇಶಿಸಿದ್ದೇನೆ. ಮಾತ್ರವಲ್ಲ, ನಾನೂ ಕೂಡ ಸ್ವಯಂ ಖಿನ್ನತೆಗೊಳಗಾಗದಂತೆ ಸಿದ್ದನಾಗಬೇಕಿದೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸಂತ್ರಸ್ತ ವಕೀಲೆಯ ಮಾಜಿ ಪ್ರೇಮಿ ಆಕೆಯ ಸಮ್ಮತಿ ಇಲ್ಲದೆ, ಆಕೆಗೆ ಗೊತ್ತಾಗದಂತೆ ವಕೀಲೆಯ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಚಿತ್ರೀಕರಿಸಿ ಅಶ್ಲೀಲ ವೆಬ್‌ಸೈಟ್‌ಗಳು, ಮೆಸೇಜಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದನೆಂದು ಆರೋಪಿಸಲಾಗಿದೆ. ತನ್ನ ಖಾಸಗಿ ವಿಡಿಯೋ-ಚಿತ್ರಗಳನ್ನು ಅಂತರ್ಜಾಲದಿಂದ ತೆಗೆದುಹಾಕುವಂತೆ ಕೋರಿ ಸಂತ್ರಸ್ತ ವಕೀಲೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಧೀಶ ಆನಂದ ವೆಂಕಟೇಶ, “48 ಗಂಟೆಗಳಲ್ಲಿ ಚಿತ್ರಗಳು ಮತ್ತು ವೀಡಿಯೊಗಳನ್ನು ಪತ್ತೆ ಹಚ್ಚಬೇಕು. ಅವುಗಳನ್ನು ನಿರ್ಬಂಧಿಸಿ, ತೆಗೆದುಹಾಕಬೇಕು. ಈ ಬಗ್ಗೆ ಜುಲೈ 14ರೊಳಗೆ ಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ನಿರ್ದೇಶನ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ರಾಜ್ಯ ಪೋಲಿಸ್ ಮಹಾನಿರ್ದೇಶಕರನ್ನು (ಡಿಜಿಪಿ) ಪ್ರಕರಣದ ಪ್ರತಿವಾದಿಯನ್ನಾಗಿ ಸ್ವಯಂಪ್ರೇರಿತವಾಗಿ ಸೇರಿಸಿರುವ ನ್ಯಾಯಾಲಯವು, “ಮಹಿಳೆಯರನ್ನು ಇಂತಹ ಆಘಾತಗಳಿಂದ ರಕ್ಷಿಸಲು ವ್ಯವಸ್ಥಿತ ಸುಧಾರಣೆಗಳನ್ನು ತರಬೇಕು” ಎಂದು ಸೂಚಿಸಿದ್ದಾರೆ.

“ಅರ್ಜಿದಾರರ ಮನೋಬಲವು ಅವರ ಕಾನೂನು ತರಬೇತಿ ಮತ್ತು ಬೆಂಬಲ ವ್ಯವಸ್ಥೆಯಿಂದ ರೂಪುಗೊಂಡಿದೆ. ಅದೃಷ್ಟವಶಾತ್ ಅವರು ಈ ವೃತ್ತಿಯಲ್ಲಿದ್ದಾರೆ. ಅವರಿಗೆ ನಮ್ಮೆಲ್ಲರ ನೆರವು-ಬೆಂಬಲವಿದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಮತ್ತು ಮೂಲಭೂತ ಹಕ್ಕನ್ನು ರಕ್ಷಿಸುವುದು ಸರ್ಕಾರ ಮತ್ತು ನ್ಯಾಯಾಲಯಗಳ ಸಾಂವಿಧಾನಿಕ ಕರ್ತವ್ಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...