ತಮಿಳುನಾಡು | ಗಾಳಿಪಟಕ್ಕೆ ಬಳಸುವ ಮಾಂಜಾ ದಾರ; ತಯಾರಿಕೆ – ಮಾರಾಟ ನಿಷೇಧ

Date:

50ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿಸಲು ನವೆಂಬರ್ 1ರಂದು ಸಂಜೆ ಐದು ಗಂಟೆಗೆ ರಾಜ್ಯಾದ್ಯಂತ ಕೆಂಪು-ಹಳದಿ ಗಾಳಿಪಟ ಹಾರಿಸಲು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ.

ಇದೇ ಹೊತ್ತಿನಲ್ಲಿ, ತಮಿಳುನಾಡಿನಲ್ಲಿ ಗಾಳಿಪಟ ಹಾರಿಸಲು ಬಳಸುವ ಚೈನೀಸ್​ ಮಾಂಜಾ ದಾರದ ಬಳಕೆ, ತಯಾರಿಕೆ, ಮಾರಾಟವನ್ನು ನಿಷೇಧಿಸಿ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿಯೂ ಈ ಹಿಂದೆಯೇ ಮಾಂಜಾ ದಾರ ಮಾರಾಟ ನಿಷೇಧಿಸಲಾಗಿತ್ತು. ಆದರೂ, ಅಲ್ಲಲ್ಲಿ ಇವುಗಳ ಮಾರಾಟ ಕಂಡುಬರುತ್ತಿದೆ.

ಹಾರುವ ಗಾಳಿಪಟ ಕಣ್ಣಿಗೆ ಎಷ್ಟು ಸುಂದರವಾಗಿ ಕಾಣಿಸುತ್ತದೆಯೋ ಇದಕ್ಕೆ ಬಳಸುವ ದಾರದಿಂದ ಅಷ್ಟೇ ಅಪಾಯಗಳಾಗುವ ಸಾಧ್ಯತೆಗಳಿವೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಂಜಾ ದಾರದ ಎಳೆಗಳು ನೈಲಾನ್, ಪ್ಲಾಸ್ಟಿಕ್, ಕೆಲವೊಮ್ಮೆ ಗಾಜಿನಿಂದ ಕೂಡ ಲೇಪಿತವಾಗಿರುತ್ತವೆ. ಇವುಗಳು ಮನುಷ್ಯರ ಕುತ್ತಿಗೆಗೆ ಅಥವಾ ಪ್ರಾಣಿ, ಪಕ್ಷಿಗಳಿಗೆ ಸಿಲುಕಿಕೊಂಡರೆ ಖಂಡೀತವಾಗಿಯೂ ಕೊಯ್ಯುವುತ್ತವೆ. ಅಂತಹ ಹಲವು ಘಟನೆಗಳು ಈ ಹಿಂದೆ ನಡೆದಿವೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

2017ರಲ್ಲಿ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್​ ಆಫ್ ಅನಿಮಲ್ಸ್​ ಸೇರಿದಂತೆ ಇತರೆ ಸಂಸ್ಥೆಗಳು ಸಲ್ಲಿಸಿದ ಮನವಿ ಮೇರೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಅಂತಹ ದಾರಗಳ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು. ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ದಾರವನ್ನು ನಿಷೇಧಿಸುವಂತೆ ನಿರ್ದೇಶನ ನೀಡಿತ್ತು.

ಗಾಳಿಪಟ ಹಾರಿಸಲು ನೈಲಾನ್ ದಾರ ಬಳಸ ಬೇಡಿ ಎಂದು ಪೋಷಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಗಾಳಿಪಟ ಹಾರಿಸುವಾಗ ಬಟ್ಟೆ ದಾರವನ್ನು ಬಳಸಲು ಸೂಚಿಸಬೇಕು, ಇವು ಪ್ರಾಣಿ, ಪಕ್ಷಿಗಳಿಗೆ ಅಪಾಯ ಉಂಟು ಮಾಡುವುದಿಲ್ಲ. ದಾರಗಳೇ ಕ್ರಮೇಣ ತುಂಡಾಗುತ್ತವೆ. ಆದರೆ ಮಾಂಜಾ ದಾರ ಸುಲಭವಾಗಿ ತುಂಡಾಗುವುದಿಲ್ಲ ಎಂದು ಹಸಿರು ನ್ಯಾಯಮಂಡಳಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...