ಹರಿಯಾಣ | ಸೂರ್ಯಕಾಂತಿ ಬೆಳೆಗೆ ಎಂಎಸ್‌ಪಿ ನೀಡಲು ಆಗ್ರಹಿಸಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ

Date:

  • ಹರಿಯಾಣ ರಾಜ್ಯದ ರಾಷ್ಟ್ರೀಯ ಹೆದ್ದಾರಿ 44 ತಡೆದು ರೈತರು ಪ್ರತಿಭಟನೆ
  • ಮಹಾಪಂಚಾಯತ್‌ ಸಭೆಯಲ್ಲಿ ರಾಕೇಶ್‌ ಟಿಕಾಯತ್‌, ಬಜರಂಗ್‌ ಪೂನಿಯಾ ಭಾಗಿ

ಹರಿಯಾಣ ರಾಜ್ಯದ ರೈತರು ಸೂರ್ಯಕಾಂತಿ ಬೆಳೆ ಖರೀದಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ದೆಹಲಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಸೋಮವಾರ (ಜೂನ್‌ 12) ಪ್ರತಿಭಟನೆ ನಡೆಸಿದರು.

ಸೂರ್ಯಕಾಂತಿ ಬೆಳೆಗೆ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ಘೋಷಿಸಿರುವ ಪರಿಹಾರಕ್ಕೆ ಅತೃಪ್ತಿ ವ್ಯಕ್ತಪಡಿಸಿರುವ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

polisro
ಪಿಂಪ್ಲಿಯಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ 44 ಅನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ಕುರುಕ್ಷೇತ್ರ ಜಿಲ್ಲೆಯ ಪಿಂಪ್ಲಿ ಗ್ರಾಮದಲ್ಲಿ ರೈತರು ಮಹಾಪಂಚಾಯತ್‌ ಹೆಸರಿನ ಸಭೆ ನಡೆಸಿದ ನಂತರ ಹರಿಯಾಣ ರಾಜ್ಯದಿಂದ ದೆಹಲಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 44 ಅನ್ನು ಬಂದ್‌ ಮಾಡುವ ಬಗ್ಗೆ ನಿರ್ಧಾರ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಪಂಚಾಯತ್ ಸಭೆಯಲ್ಲಿ ಭಾರತೀಯ ಕಿಸಾನ್‌ ಸಂಘದ ನಾಯಕ ರಾಕೇಶ್‌ ಟಿಕಾಯತ್‌ ಮತ್ತು ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕುಸ್ತಿಪಟು ಬಜರಂಗ್‌ ಪೂನಿಯಾ ಭಾಗವಹಿಸಿದ್ದರು.

ರೈತರ ಪ್ರತಿಭಟನೆಯಿಂದ ದಟ್ಟಣೆ ಉಂಟಾಗುವ ಹಿನ್ನೆಲೆ ದೆಹಲಿ-ಚಂಡೀಗಢದ ಸಂಚಾರವನ್ನು ಬದಲಿಸಲಾಗಿದೆ.

ಹರಿಯಾಣ, ಪಂಜಾಬ್‌, ಉತ್ತರ ಪ್ರದೇಶ ಮತ್ತು ನೆರೆಯ ರಾಜ್ಯಗಳ ರೈತ ನಾಯಕರು ಪಿಂಪ್ಲಿ ಧಾನ್ಯ ಮಾರುಕಟ್ಟೆಯಲ್ಲಿ ಜಮಾಯಿಸಿ ‘ಎಂಎಸ್‌ಪಿ ನೀಡಿ, ರೈತರ ಉಳಿಸಿ’ ಹೆಸರಿನ ಮಹಾಪಂಚಾಯತ್‌ನಲ್ಲಿ ತಮ್ಮ ಬೇಡಿಕೆಗಾಗಿ ಒತ್ತಾಯಿಸಿದ್ದರು.

ಹರಿಯಾಣ ಸರ್ಕಾರ ಸೂರ್ಯಕಾಂತಿ ಬೆಳೆಯನ್ನು ಪ್ರತಿ ಕ್ವಿಂಟಲ್‌ಗೆ ₹6,400 ನೀಡಿ ಖರೀದಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಪಿಂಪ್ಲಿಯಲ್ಲಿ ನಡೆದ ಮಹಾಪಂಚಾಯತ್‌ ಸಭೆಯಲ್ಲಿ ರೈತರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳು ಮತ್ತು ರೈತರ ವಿರುದ್ಧದ ಪೊಲೀಸ್‌ ಕ್ರಮಗಳನ್ನು ಖಂಡಿಸಿದರು.

ಸೂರ್ಯಕಾಂತಿ ಬೆಳೆಯನ್ನು ರಾಜ್ಯ ಸರ್ಕಾರ ಎಂಎಸ್‌ಪಿ ನೀಡಿ ಖರೀದಿಸಬೇಕು. ಇತ್ತೀಚೆಗೆ ಶಹಾಬಾದ್‌ನಲ್ಲಿ ಬಂಧಿಸಿರುವ ಪ್ರತಿಭಟಿಸುತ್ತಿದ್ದ ರೈತರನ್ನು ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ರೈತರು ಒತ್ತಾಯಿಸಿದರು.

ಬೆಲೆ ವ್ಯತ್ಯಾಸ ಪಾವತಿ ಯೋಜನೆಯಾದ ಭಾವಾಂತರ ಭರ್ಪೈ ಯೋಜನೆಯಡಿ (ಬಿಬಿವೈ) 36,414 ಎಕರೆ ಕೃಷಿ ಭೂಮಿಯಲ್ಲಿ ಸೂರ್ಯಕಾಂತಿ ಬೆಳೆದ 8,528 ರೈತರಿಗೆ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ಕಳೆದ ಶನಿವಾರ ಡಿಜಿಟಲ್ ಮೂಲಕ ₹29.13 ಕೋಟಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿದ್ದರು.

ಹರಿಯಾಣ ಸರ್ಕಾರ ಈ ವರ್ಷದ ಆರಂಭದಲ್ಲಿ ಸೂರ್ಯಕಾಂತಿ ಬೆಳೆಯನ್ನು ಬಿಬಿವೈಗೆ ವಿಲೀನಗೊಳಿಸುವಿಕೆಯನ್ನು ಪ್ರಕಟಿಸಿತ್ತು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ವಿಠಲ ದೇವರ ಭಕ್ತರು ವಾರಕರಿಗಳ ಮೇಲೆ ಪೊಲೀಸರು ಲಾಠಿಚಾರ್ಜ್‌ ಆರೋಪ : ಪ್ರತಿಪಕ್ಷಗಳು ಟೀಕೆ

ಈ ಯೋಜನೆಯಡಿ ಎಂಎಸ್‌ಪಿಗಿಂತ ಕಡಿಮೆ ಮಾರಾಟವಾದ ಉತ್ಪನ್ನಗಳಿಗೆ ನಿಗದಿತ ಪರಿಹಾರವನ್ನು ನೀಡಲಾಗುತ್ತದೆ.

ಎಂಎಸ್‌ಪಿಗಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾದ ಸೂರ್ಯಕಾಂತಿ ಬೆಳೆಗೆ ಯೋಜನೆಯಡಿ ರಾಜ್ಯ ಸರ್ಕಾರ ಕ್ವಿಂಟಲ್‌ಗೆ ₹1,000 ಮಧ್ಯಂತರ ಪರಿಹಾರ ನೀಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...