ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ: ಜಮ್ಮು ಕಾಶ್ಮೀರ, ಲಡಾಖ್‌ನಲ್ಲಿ ಪ್ರತಿಭಟನೆ; ಶೋಕ

Date:

ಇಸ್ರೇಲ್ ಮತ್ತು ಅಮೆರಿಕ ದಾಳಿ ಇರಾನ್ ಮೇಲೆ ದಾಳಿ ಮಾಡಿದ್ದು, ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ನಡೆಸಿದೆ. ಈ ಬೆನ್ನಲ್ಲೇ ವಿಶ್ವದ ಹಲವು ದೇಶಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಹತ್ತಾರು ಸಾವಿರ ಜನರು ಬೀದಿಗಿಳಿದು ಪ್ರತಿಭಟಿಸಿದ್ದು, ತೀವ್ರ ಶೋಕಾಚರಿಸಲಾಗುತ್ತಿದೆ.

ಕಾಶ್ಮೀರ ಕಣಿವೆಯಿಂದ ಲಡಾಖ್‌ನ ಕಾರ್ಗಿಲ್‌ವರೆಗೆ, ಜನರು ಬೀದಿಗಿಳಿದು ಹುತಾತ್ಮತೆಯ ಸಂಕೇತವಾಗಿ ಕಪ್ಪು ಮತ್ತು ಕೆಂಪು ಧ್ವಜಗಳನ್ನು ಹೊತ್ತು ನಡೆದಿದ್ದಾರೆ. ಜತೆಗೆ ಖಮೇನಿ ಮತ್ತು ಇರಾನ್‌ನ ಸ್ಥಾಪಕ ಆಧ್ಯಾತ್ಮಿಕ ನಾಯಕ ಅಯತೊಲ್ಲಾ ರುಹೊಲ್ಲಾ ಖಮೇನಿ ಭಾವಚಿತ್ರಗಳು ಕಾಣಿಸಿಕೊಂಡಿದೆ.

ಇದನ್ನು ಓದಿದ್ದೀರಾ? ಇರಾನ್‌ನ ಮಿತ್ರರು ಯಾರು? ರಷ್ಯಾ-ಚೀನಾ ನಿಲುವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರು ಅಮೆರಿಕ, ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳನ್ನು ಖಂಡಿಸುವ ಘೋಷಣೆಗಳನ್ನು ಕೂಗಿದೆ. ಶ್ರೀನಗರದಲ್ಲಿ, ಐತಿಹಾಸಿಕ ಲಾಲ್ ಚೌಕ್‌ನಲ್ಲಿ ಅಧಿಕ ಜನರು ಸೇರಿಕೊಂಡಿದ್ದಾರೆ. ಶ್ರೀನಗರದಾದ್ಯಂತದ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜಡಿಬಲ್, ರೈನವಾರಿ, ಬೆಮಿನಾ ಮತ್ತು ಡೌನ್‌ಟೌನ್‌ನ ಕೆಲವು ಭಾಗಗಳಲ್ಲಿ ಜನರು ಮೆರವಣಿಗೆ ನಡೆಸಿದ್ದು, ಇರಾನ್‌ನೊಂದಿಗೆ ನಿಲ್ಲುವುದಾಗಿ ಘೋಷಣೆ ಕೂಗಿದ್ದಾರೆ.

ಬಾರಾಮುಲ್ಲಾ, ಬುದ್ಗಾಮ್, ಅನಂತ್‌ನಾಗ್, ಪುಲ್ವಾಮಾ, ಶೋಪಿಯಾನ್ ಮತ್ತು ಕುಪ್ವಾರಾ ಸೇರಿದಂತೆ ಕಾಶ್ಮೀರ ಕಣಿವೆಯ ಸುಮಾರು ಹತ್ತು ಜಿಲ್ಲೆಗಳಿಂದ ಪ್ರತಿಭಟನೆಗಳು ಮತ್ತು ಶೋಕಾಚರಣೆ ನಡೆದಿದೆ. ಸ್ಥಳೀಯ ಇಮಾಂಬರಾಗಳು ಮತ್ತು ಸಮುದಾಯ ಕೇಂದ್ರಗಳು ನಿರಂತರ ಶೋಕಾಚರಣೆ ಸಭೆಗಳನ್ನು ನಡೆಸಲಾಗುತ್ತಿದೆ.

ಜಮ್ಮುವಿನ ಕಿಶ್ತ್ವಾರ್, ಭದೇರ್ವಾ ಮತ್ತು ಜಮ್ಮು ನಗರದ ಕೆಲವು ಭಾಗಗಳಲ್ಲಿ ಶಿಯಾ ಸಂಘಟನೆಗಳು, ಇತರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ. ಶಿಯಾ ಜನಸಂಖ್ಯೆಯ ಭದ್ರಕೋಟೆಯಾದ ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ.

ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಮುಖ್ಯಸ್ಥ ಮತ್ತು ಭದ್ರತಾ ಸಲಹೆಗಾರ ಅಲಿ ಶಮ್ಖಾನಿ ಅವರೊಂದಿಗೆ ಸಭೆ ನಡೆಸುತ್ತಿದ್ದ ಜನರಲ್ ಅಬ್ದುಲ್ ರಹೀಮ್ ಮೌಸವಿ ಮತ್ತು ರಕ್ಷಣಾ ಸಚಿವ ಜನರಲ್ ಅಜೀಜ್ ನಾಸಿರ್ಜಾದೆ ಹತರಾಗಿದ್ದಾರೆ ಎಂದೂ ಇರಾನ್ ಮಾಧ್ಯಮಗಳು ವರದಿ ಮಾಡಿದೆ.

ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...