ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ಎನ್.ಡಿ.ಎ ಮೈತ್ರಿಯ ಸೀಟು ಹಂಚಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಹೆಚ್ಚಿನ ಮಾನ್ಯತೆ ನೀಡದಿದ್ದಲ್ಲಿ ಮೈತ್ರಿ ತೊರೆಯುವ ಮುನ್ಸೂಚನೆಯನ್ನೂ ನೀಡಿದ್ದಾರೆ.
ಮೈತ್ರಿ ಒಕ್ಕೂಟದೊಂದಿಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಸೀಟು ಹಂಚಿಕೆಯ ಬಗ್ಗೆ ಈವರೆಗೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ತಿಳಿಸಿರುವುದರ ಜೊತೆಗೆ, ಪುದುಚೆರಿಗೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಡಿಕೆ ಇಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಇರುವ ಕಾರಣ ಮೈತ್ರಿ ತೊರೆಯುವ ಸುಳಿವನ್ನೂ ಪರೋಕ್ಷವಾಗಿ ಕೊಟ್ಟಿದ್ದಾರೆ.
ಸೀಟು ಹಂಚಿಕೆ ಮತ್ತು ರಾಜ್ಯ ಸ್ಥಾನಮಾನದ ವಿಷಯದಲ್ಲಿ ಎಐಎನ್ಆರ್ಸಿ (AINRC) ಮತ್ತು ಬಿಜೆಪಿ ನಡುವೆ ಅಸಮಾಧಾನವಿದ್ದು, ಮುಂದೆ ಏನೆಲ್ಲಾ ಬೆಳವಣಿಗೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
ಪುದುಚೆರಿ ಚುನಾವಣೆ | NDA ಮೈತ್ರಿ ತೊರೆಯುವ ಸುಳಿವು ಕೊಟ್ಟುಬಿಡ್ತಾ AINRC !?
Date:
ಪೋಸ್ಟ್ ಹಂಚಿಕೊಳ್ಳಿ:




