ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ವಜಾಗೊಳಿಸಿ ಆದೇಶಿಸಿದ ಕೇಂದ್ರ ಸರ್ಕಾರ

Date:

ಅಧಿಕಾರ ದುರ್ಬಳಕೆ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡು ವಂಚನೆ ಎಸಗಿದ ಆರೋಪಗಳನ್ನು ಎದುರಿಸುತ್ತಿರುವ ವಿವಾದಾತ್ಮಕ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ. ಮಹಾರಾಷ್ಟ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ಭಾರತೀಯ ಆಡಳಿತ ಸೇವೆಗಳಿಂದ ಕೂಡಲೇ ಜಾರಿಯಾಗುವಂತೆ ಬಿಡುಗಡೆಗೊಳಿಸಿದೆ. ಕೇಂದ್ರ ಲೋಕಸೇವಾ ಆಯೋಗವು ಪೂಜಾ ಅವರ ನೇಮಕಾತಿಯನ್ನು ರದ್ದುಗೊಳಿಸಿದ ಸುಮಾರು ಒಂದು ತಿಂಗಳ ಬಳಿಕ ಕೇಂದ್ರದ ನಿರ್ಧಾರ ಪ್ರಕಟವಾಗಿದೆ.

ಪೂಜಾ ಅವರು ಯುಪಿಎಸ್‌ಸಿ ನೇಮಕಾತಿಯಲ್ಲಿನ ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ಅಂಗವಿಕಲ ಕೋಟಾದ ಪ್ರಯೋಜನಗಳನ್ನು ಪಡೆಯಲು ಸುಳ್ಳು ದಾಖಲೆಗಳನ್ನು ಒದಗಿಸಿ ವಂಚನೆ ಎಸಗಿರುವುದು ಕಂಡುಬಂದಿತ್ತು. ಆಕೆಯ ಆಯ್ಕೆಯನ್ನು ರದ್ದುಗೊಳಿಸಿದ ಬಳಿಕ ಯುಪಿಎಸ್‌ಸಿ, ಅವರು ಜೀವಮಾನಪರ್ಯಂತ ಮತ್ತೆ ಪ್ರವೇಶ ಪರೀಕ್ಷೆ ತೆಗೆದುಕೊಳ್ಳದಂತೆ ನಿಷೇಧ ವಿಧಿಸಿದೆ.

ಅಷ್ಟೇ ಅಲ್ಲದೆ, ಪೂಜಾ ಖೇಡ್ಕರ್ ತಮ್ಮ ಹೆಸರು ಹಾಗೂ ವಿಳಾಸಗಳನ್ನು ಬದಲಿಸಿಕೊಂಡು ನಕಲಿ ಗುರುತಿನಲ್ಲಿ ಅನೇಕ ಬಾರಿ ಪರೀಕ್ಷೆ ಬರೆದಿರುವುದನ್ನು ಸಹ ಯುಪಿಎಸ್‌ಸಿ ಪತ್ತೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಾಯಲ್ಲಿ ಮತ್ತೆ ದೇವರು, ಮತ್ತೆ ಸುದ್ದಿ, ಮತ್ತೆ ಮೌನ!

ಪೂಜಾ ಖೇಡ್ಕರ್ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಬಳಿಕ ನಡೆದ ತನಿಖೆಗಳಲ್ಲಿ ಅವರ ವಂಚನೆಯ ಕೃತ್ಯಗಳೂ ಬೆಳಕಿಗೆ ಬಂದಿದ್ದವು. ಇದು ಒಬಿಸಿ ಹಾಗೂ ಅಂಗವಿಲ ಕೋಟಾದಡಿ ಆಯ್ಕೆಯಾದ ಇತರೆ ಅಭ್ಯರ್ಥಿಗಳಿಗೂ ಕಂಟಕ ಉಂಟುಮಾಡಿದೆ. 2009 ರಿಂದ 2023ರವರೆಗೂ ಐಎಎಸ್ ಪರಿಶೀಲನಾ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದ 15 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳ ವಿವರಗಳನ್ನು ಯುಪಿಎಸ್‌ಸಿ ಒರೆಗೆ ಹಚ್ಚಿದೆ.

“ಈ ವಿಸ್ತೃತ ಕಾರ್ಯದ ಬಳಿಕ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರನ್ನು ಹೊರತುಪಡಿಸಿ, ಸಿಎಸ್ಇ ನಿಯಮಗಳ ಅಡಿ ಅನುಮತಿ ನೀಡಿರುವಂತೆ ಗರಿಷ್ಠ ಸಂಖ್ಯೆಯ ಪ್ರಯತ್ನಗಳನ್ನು ಬೇರೆ ಯಾವ ಅಭ್ಯರ್ಥಿಯೂ ನಡೆಸಿರುವುದು ಕಂಡುಬಂದಿಲ್ಲ” ಎಂದು ನಾಗರಿಕ ಸೇವಾ ಪರೀಕ್ಷೆ ನಿಯಮಗಳನ್ನು ಉಲ್ಲೇಖಿಸಿ ಯುಪಿಎಸ್‌ಸಿ ಹೇಳಿತ್ತು.

ಈಗ ಕೇಂದ್ರ ಸರ್ಕಾರವು ಸೆ 6ರಂದು ಐಎಎಸ್ (ಪ್ರೊಬೇಷನ್ ) 1954ರ ನಿಯಮ 12ರ ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪೂಜಾ ಅವರನ್ನು ಐಎಎಸ್‌ ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ.

ತಮಗೆ ಪ್ರತ್ಯೇಕ ಕಾರು, ಸಿಬ್ಬಂದಿ ಹಾಗೂ ಕಚೇರಿ ನೀಡಬೇಕು ಎಂದು ಪೂಜಾ ಬೇಡಿಕೆ ಇರಿಸಿರುವುದಾಗಿ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪುಣೆ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ಅವರು ಜೂನ್‌ನಲ್ಲಿ ಪತ್ರ ಬರೆದಿದ್ದರು. ಎರಡು ವರ್ಷದ ಪ್ರೊಬೇಷನರಿ ಹುದ್ದೆಯಲ್ಲಿ ಅವರಿಗೆ ಈ ಸೌಲಭ್ಯಗಳಿಗೆ ಅರ್ಹತೆ ಇರಲಿಲ್ಲ. ಈ ಪತ್ರದ ಬೆನ್ನಲ್ಲೇ ಪೂಜಾ ವಿವಾದ ಬೆಳಕಿಗೆ ಬಂದಿತ್ತು. ಅವರು ತಮ್ಮ ಖಾಸಗಿ ಐಷಾರಾಮಿ ಕಾರಿಗೆ ಮಹಾರಾಷ್ಟ್ರ ಸರ್ಕಾರ ಫಲಕದ ಜತೆಗೆ ಕೆಂಪು ದೀಪ ಅಳವಡಿಸಿದ್ದು ಪತ್ತೆಯಾಗಿತ್ತು. ಈ ವಿವಾದದ ನಂತರ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೆಲ್ಲದರ ನಡುವೆ ಅವರ ನೇಮಕಾತಿಯೇ ಅಕ್ರಮವಾಗಿದೆ ಎನ್ನುವುದು ಬಯಲಾಗಿತ್ತು. ಒಬಿಸಿ ಅಭ್ಯರ್ಥಿಗಳು ಹಾಗೂ ಅಂಗವಿಕಲರಿಗೆ ಇರುವ ಕೋಟಾಗಳಿಗಾಗಿ ಸುಳ್ಳು ದಾಖಲೆ ನೀಡಿ ಅವರು ನೇಮಕಾತಿಗೊಂಡಿರುವುದು ಪತ್ತೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...