ಜುಲೈ ಅಂತ್ಯದ ವೇಳೆಗೆ ಬೇಳೆಕಾಳುಗಳ ಬೆಲೆ ಇಳಿಯುವ ನಿರೀಕ್ಷೆ: ಸರ್ಕಾರ

Date:

ಜುಲೈ ಅಂತ್ಯದಿಂದ ತೊಗರಿ ಬೇಳೆ, ಕಡ್ಳೆ ಬೇಳೆ ಮತ್ತು ಉದ್ದಿನಬೇಳೆ ಸೇರಿದಂತೆ ಪ್ರಮುಖ ಬೇಳೆಕಾಳುಗಳ ಬೆಲೆಗಳು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತಮ ಮಾನ್ಸೂನ್ ಮಳೆಯಾಗುತ್ತಿದೆ ಮತ್ತು ಬೇಳೆಕಾಳುಗಳ ಆಮದು ಕೂಡ ಹೆಚ್ಚಿದ್ದು, ಬೇಡಿಕೆಗೆ ತಕ್ಕಷ್ಟು ಲಭ್ಯತೆ ಇರಲಿದೆ. ಹೀಗಾಗಿ, ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಗ್ರಾಹಕ ವ್ಯವಹಾರಗಳ ಇಲಾಖೆಯ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಶುಕ್ರವಾರದಂದು ತೊಗರಿ ಬೇಳೆಯ ಚಿಲ್ಲರೆ ದರವು ಕೆಜಿಗೆ 160 ರೂ.ಗಳಷ್ಟಿತ್ತು. ಇದು ಕಳೆದ ವರ್ಷದ ಕೆಜಿಗೆ 126.61 ರೂ.ಗೆ ಹೋಲಿಸಿದರೆ ಶೇ.26.66 ರಷ್ಟು ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ, ಒಂದು ವರ್ಷದ ಹಿಂದಿನ ಬೆಲೆಗೆ ಹೋಲಿಸಿದರೆ, ಕಡ್ಳೆ ಬೇಳೆ ಮತ್ತು ಉದ್ದಿನ ಬೇಳೆ ಚಿಲ್ಲರೆ ಬೆಲೆಗಳು ಕ್ರಮವಾಗಿ ಶೇ.17.21 ಮತ್ತು ಶೇ.13.30 ರಷ್ಟು ಹೆಚ್ಚಾಗಿದೆ.

ಬೇಳೆಕಾಳುಗಳ ಬೆಲೆ ಏರಿಕೆಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಲು ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಬೆಲೆ ಏರಿಕೆ ಪ್ರಮುಖ ಚರ್ಚಾ ವಿಷಯವೂ ಆಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...