ದೆಹಲಿ ಸ್ಫೋಟ: ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ

Date:

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್ ಸ್ಫೋಟದ ಶಂಕಿತ ಆರೋಪಿ ಡಾ. ಉಮರ್ ನಬಿಯ ದಕ್ಷಿಣ ಕಾಶ್ಮೀರದ ಪುಲ್ವಾಮಾದ ಕ್ವಿಲ್ ಗ್ರಾಮದಲ್ಲಿರುವ ಮನೆಯನ್ನು ಭದ್ರತಾ ಪಡೆಗಳು ಧ್ವಂಸಗೊಳಿಸಿದೆ. ಉಗ್ರರ ವಿರುದ್ಧದ ಬಲವಾದ ಸಂದೇಶ ನೀಡಲು ಮನೆಯನ್ನು ಕೆಡವಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಇನ್ನು ಮನೆ ಕೆಡವುದಕ್ಕೂ ಮುನ್ನ ಮನೆಯಲ್ಲಿದ್ದ ನಬಿ ಕುಟುಂಬಸ್ಥರನ್ನು ಹೊರಗೆ ಕರೆತರಲಾಗಿದೆ ಎಂದು ವರದಿಯಾಗಿದೆ.

ಸೋಮವಾರ ದೆಹಲಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡಿದ್ದು, ಸುಮಾರು 13 ಮಂದಿ ಮೃತಪಟ್ಟಿದ್ದಾರೆ. ನಬಿ ಈ ಬಾಂಬ್ ದಾಳಿಯ ಶಂಕಿತ ಆರೋಪಿ. ಈ ಸ್ಫೋಟದಲ್ಲಿ ನಬಿ ಸಾವನ್ನಪ್ಪಿದ್ದು, ವಶಪಡಿಸಿಕೊಂಡ ದೇಹದ ಭಾಗಗಳೊಂದಿಗೆ ಡಿಎನ್‌ಎ ಹೊಂದಿಕೆಯಾಗಿದೆ ಎನ್ನಲಾಗಿದೆ. ಸದ್ಯ ಉಮರ್ ತಾಯಿ, ತಂದೆ ಮತ್ತು ಇಬ್ಬರು ಸಹೋದರರು ಪೊಲೀಸ್ ವಶದಲ್ಲಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಸ್ಫೋಟ ದುರಂತ: ಮುಗಿಲು ಮುಟ್ಟಿದ ಮೃತರ ಕುಟುಂಬಗಳ ರೋದನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಉತ್ತರ ಪ್ರದೇಶದ ಡಾ. ಅದೀಲ್ ಅಹ್ಮದ್ ರಾಥರ್, ಡಾ. ಶಾಹೀನ್ ಸಯೀದ್, ಡಾ. ಪರ್ವೇಜ್ ಅನ್ಸಾರಿ, ಡಾ. ಫಾರೂಕ್ ಮತ್ತು ಡಾ. ಮೊಹಮ್ಮದ್ ಆರಿಫ್ ಎಂಬ ಐವರು ವೈದ್ಯರನ್ನು ಬಂಧಿಸಿದೆ. ಈ ಹಿನ್ನೆಲೆ ಸದ್ಯ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಉತ್ತರ ಪ್ರದೇಶ ಮತ್ತು ಹರಿಯಾಣ ಪೊಲೀಸರು, ಗುಪ್ತಚರ ಸಂಸ್ಥೆಗಳು ‘ವೈಟ್ ಕಾಲರ್ ಉಗ್ರಗಾಮಿ ಜಾಲ’ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ.

ಇನ್ನು ಈಗಾಗಲೇ ಮಾನವ ಹಕ್ಕುಗಳ ಹೋರಾಟಗಾರರು ಶಂಕಿತ ಉಗ್ರರು ಅಥವಾ ಉಗ್ರರ ಮನೆಯನ್ನು ಧ್ವಂಸಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಉಗ್ರ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರದ ಕುಟುಂಬ ಸದಸ್ಯರು, ಸಂಬಂಧಿಕರಿಗೆ ಶಿಕ್ಷೆ ನೀಡುವುದು, ಅವರನ್ನು ಬೀದಿಪಾಲು ಮಾಡುವುದು ಸರಿಯಲ್ಲ. ಇದು ಅಂತಾರಾಷ್ಟ್ರೀಯ ಕಾನೂನಿನಡಿ ನಿಷೇಧಿತ ಎಂದು ಮಾನವ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ. ಈ ರೀತಿ ಮನೆ ಧ್ವಂಸ ಮಾಡುವುದು ವಸತಿ ಹಕ್ಕು, ಘನತೆಯ ಹಕ್ಕು ಮತ್ತು ಕಾನೂನಿನ ಮುಂದೆ ಸಮಾನತೆಯ ಹಕ್ಕು ಸೇರಿದಂತೆ ಮೂಲಭೂತ ಸೇರಿದಂತೆ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಪ್ರತಿಪಾದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...