ಪುಣೆ | ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರಾಂಶುಪಾಲರ ಮೇಲೆ ಹಲ್ಲೆ

Date:

ವಿದ್ಯಾರ್ಥಿಗಳಿಗೆ ಅನ್ಯಧರ್ಮಿಯ ಪ್ರಾರ್ಥನೆಯನ್ನು ಹಾಡಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿರುವ ಘಟನೆ ಪುಣೆ ತಾಲೇಗಾಂವ್ ದಭಾಡೆ ಪಟ್ಟಣದ ಡಿ ವೈ ಪಾಟೀಲ್ ಪ್ರೌಢಶಾಲೆಯಲ್ಲಿ ನಡೆದಿದೆ.

ಅಲೆಕ್ಸಾಂಡರ್, ಹಲ್ಲೆಗೊಳಗಾದ ಪ್ರಾಂಶುಪಾಲರು. ಪ್ರಾಂಶುಪಾಲರನ್ನು ಶಾಲೆಯ ಆವರಣದಲ್ಲೇ ಅಟ್ಟಾಡಿಸಿ ಹಲ್ಲೆ ನಡೆಸಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. “ಹರ್ ಹರ್ ಮಹಾದೇವ್” ಎಂದು ಕೂಗುತ್ತಾ ಬಂದ 100ಕ್ಕೂ ಹೆಚ್ಚು ಜನರ ಗುಂಪು ಪ್ರಾಂಶುಪಾಲರನ್ನು ಮನಬಂದಂತೆ ಹಲ್ಲೆ ನಡೆಸಿದೆ.

ವಿಡಿಯೋಗಳಲ್ಲಿ ಸೆರೆಯಾಗಿರುವಂತೆ, ಹಲ್ಲೆಯಿಂದ ಮೆಟ್ಟಿಲುಗಳ ಮೇಲೆ ಹರಿದ ಅಂಗಿಯಲ್ಲಿ ಪ್ರಾಂಶುಪಾಲರು ಹೋಗುತ್ತಿದ್ದಾಗ ಹಿಂದೂ ಸಂಘಟನೆಯ ಒಬ್ಬಾತ ಹಲ್ಲೆ ನಡೆಸುತ್ತಾನೆ. ಇತರರು ಆತನನ್ನು ತಡೆದರು. ಅಲ್ಲದೆ ವಿದ್ಯಾರ್ಥಿಗಳ ಶೌಚಗೃಹದ ಬಳಿ ಸಿಸಿ ಟಿವಿ ಅಳವಡಿಸಿರುವುದಕ್ಕೆ ಹಲ್ಲೆ ನಡೆಸಿದ ಗುಂಪು ಆಕ್ಷೇಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಥ್ರೆಡ್ಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೋಟಿ ಮಂದಿ ಇನ್‌ಸ್ಟಾಲ್‌; ಆ್ಯಪ್‌ನಲ್ಲಿರುವ ವಿಶೇಷತೆಗಳೇನು?

ಪುಣೆ ತಾಲೇಗಾಂವ್ ಎಂಐಡಿಸಿ ಪ್ರದೇಶದ ಪೊಲೀಸ್ ಅಧಿಕಾರಿ ರಂಜಿತ್ ಸಾವಂತ್ ಮಾತನಾಡಿ, ಕೆಲವು ಪೋಷಕರು, ಹಿಂದುತ್ವ ಸಂಘಟನೆಗೆ ಸೇರಿದ ಗುಂಪಿನೊಂದಿಗೆ ಸೇರಿಕೊಂಡು ಪ್ರಾಂಶುಪಾಲರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಕಾರ್ಯಕರ್ತರು ಆಕ್ಷೇಪಿಸಿದಂತೆ ಸಿಸಿ ಟಿವಿಯು ಶೌಚಾಲಯದ ಮಾರ್ಗದಲ್ಲಿಲ್ಲ, ಹೊರ ಭಾಗದಲ್ಲಿದೆ. ಅದೇ ರೀತಿ ಪ್ರತಿದಿನ ಬೆಳಿಗ್ಗೆ ಹಾಡುವ ಅನ್ಯ ಸಮುದಾಯದ ಪ್ರಾರ್ಥನೆ ಸಾಮಾನ್ಯ ಪ್ರಾರ್ಥನೆಯಾಗಿದೆ. ಇದು ಬೈಬಲಿನ ಒಂದು ಪದ್ಯ. ಇದರಲ್ಲಿ ಮತಾಂತರದ ಯಾವುದೇ ಪ್ರಚೋದನೆಯಿಲ್ಲ” ಎಂದು ತಿಳಿಸಿದರು.

ಪೋಷಕರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಅಧಿಕಾರಿಗಳು ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...